ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ರೇಖಾ ಪಲ್ಲಿ ಮತ್ತು ಅಮಿತ್ ಬನ್ಸಾಲ್ ಅವರ ರಜಾ ಪೀಠವು, ಈ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಲು, 450 ಕ್ಕೂ ಹೆಚ್ಚು ಶಾಲೆಗಳನ್ನು ಪ್ರತಿನಿಧಿಸುವ ಅನುದಾನ ರಹಿತ ಶಾಲೆಗಳ ಕ್ರಿಯಾ ಸಮಿತಿಗೆ ನೋಟಿಸ್ ನೀಡಿದೆ. ನ್ಯಾಯಾಲಯ, ಪ್ರಕರಣಕ್ಕೆ ಸಂಬಂಧಿಸಿದಂತೆ ಮೇಲ್ಮನವಿಗಳನ್ನು ಜುಲೈ 10ರಂದು ನಡೆಯುವ ವಿಚಾರಣೆಯಲ್ಲಿ ಕೈಗೆತ್ತಿಕೊಳ್ಳಲಿದೆ.