<p><strong>ನವದೆಹಲಿ</strong>: ಶಿಕ್ಷಣದ ಹಕ್ಕು ಕಾಯ್ದೆಯನ್ನು (ಆರ್ಟಿಇ) ಆರ್ಥಿಕವಾಗಿ ಹಿಂದುಳಿದ 14 ವರ್ಷದ ಮೇಲ್ಪಟ್ಟವರಿಗೂ ವಿಸ್ತರಿಸುವ ಕುರಿತು ನಿರ್ಧಾರ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮಕೈಗೊಳ್ಳುವಂತೆ ಕೋರಿ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ಸಲ್ಲಿಸಲು ದೆಹಲಿ ಹೈಕೋರ್ಟ್ ಬುಧವಾರ ಶಿಕ್ಷಣ ಸಚಿವಾಲಯಕ್ಕೆ ಸೂಚಿಸಿದೆ.</p>.<p>2019ರಲ್ಲೇ ನ್ಯಾಯಾಲಯ ಆದೇಶ ನೀಡಿದ್ದರೂ ಆರ್ಟಿಇ ಕಾಯ್ದೆಯನ್ನು ಈಗಿರುವ 8ನೇ ತರಗತಿಯಿಂದ 12ನೇ ತರಗತಿಯವರೆಗೂ ಏಕೆ ವಿಸ್ತರಿಸಿಲ್ಲ ಎಂದು ನ್ಯಾಯಮೂರ್ತಿ ನಜ್ಮಿ ವಾಝಿರಿ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದರು.</p>.<p>ಈ ವಿಷಯದ ಬಗ್ಗೆ ಸರ್ಕಾರೇತರ ಸಂಸ್ಥೆ ‘ಸೊಷಿಯಲ್ ಜ್ಯೂರಿಸ್ಟ್’ ಅರ್ಜಿ ಸಲ್ಲಿಸಿತ್ತು.</p>.<p>ಕೇಂದ್ರ ಸರ್ಕಾರ ಈ ಬಗ್ಗೆ ಯಾವುದೇ ನಿರ್ಧಾರ ಕೈಗೊಳ್ಳದ ಕಾರಣ ದೇಶದಾದ್ಯಂತ ಖಾಸಗಿ ಶಾಲೆಗಳು 8ನೇ ತರಗತಿ ಉತ್ತೀರ್ಣರಾದ ಸಾವಿರಾರು ವಿದ್ಯಾರ್ಥಿಗಳನ್ನು ಹೊರಗೆ ಹಾಕುತ್ತಿವೆ ಎಂದು ಸರ್ಕಾರೇತರ ಸಂಸ್ಥೆ ಪರ ವಕೀಲರಾದ ಅಶೋಕ್ ಅಗರವಾಲ್ ಮತ್ತು ಕುಮಾರ್ ಉತ್ಕರ್ಷ ವಾದ ಮಂಡಿಸಿದರು.</p>.<p>ಈ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಶಿಕ್ಷಣ ಸಚಿವಾಲಯದ ಕಾರ್ಯದರ್ಶಿಗೆ ನೋಟಿಸ್ ಜಾರಿಗೊಳಿಸಿದ ನ್ಯಾಯಾಲಯ ಮುಂದಿನ ವಿಚಾರಣೆಯನ್ನು ಮಾರ್ಚ್ 17ಕ್ಕೆ ಮುಂದೂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಶಿಕ್ಷಣದ ಹಕ್ಕು ಕಾಯ್ದೆಯನ್ನು (ಆರ್ಟಿಇ) ಆರ್ಥಿಕವಾಗಿ ಹಿಂದುಳಿದ 14 ವರ್ಷದ ಮೇಲ್ಪಟ್ಟವರಿಗೂ ವಿಸ್ತರಿಸುವ ಕುರಿತು ನಿರ್ಧಾರ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮಕೈಗೊಳ್ಳುವಂತೆ ಕೋರಿ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ಸಲ್ಲಿಸಲು ದೆಹಲಿ ಹೈಕೋರ್ಟ್ ಬುಧವಾರ ಶಿಕ್ಷಣ ಸಚಿವಾಲಯಕ್ಕೆ ಸೂಚಿಸಿದೆ.</p>.<p>2019ರಲ್ಲೇ ನ್ಯಾಯಾಲಯ ಆದೇಶ ನೀಡಿದ್ದರೂ ಆರ್ಟಿಇ ಕಾಯ್ದೆಯನ್ನು ಈಗಿರುವ 8ನೇ ತರಗತಿಯಿಂದ 12ನೇ ತರಗತಿಯವರೆಗೂ ಏಕೆ ವಿಸ್ತರಿಸಿಲ್ಲ ಎಂದು ನ್ಯಾಯಮೂರ್ತಿ ನಜ್ಮಿ ವಾಝಿರಿ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದರು.</p>.<p>ಈ ವಿಷಯದ ಬಗ್ಗೆ ಸರ್ಕಾರೇತರ ಸಂಸ್ಥೆ ‘ಸೊಷಿಯಲ್ ಜ್ಯೂರಿಸ್ಟ್’ ಅರ್ಜಿ ಸಲ್ಲಿಸಿತ್ತು.</p>.<p>ಕೇಂದ್ರ ಸರ್ಕಾರ ಈ ಬಗ್ಗೆ ಯಾವುದೇ ನಿರ್ಧಾರ ಕೈಗೊಳ್ಳದ ಕಾರಣ ದೇಶದಾದ್ಯಂತ ಖಾಸಗಿ ಶಾಲೆಗಳು 8ನೇ ತರಗತಿ ಉತ್ತೀರ್ಣರಾದ ಸಾವಿರಾರು ವಿದ್ಯಾರ್ಥಿಗಳನ್ನು ಹೊರಗೆ ಹಾಕುತ್ತಿವೆ ಎಂದು ಸರ್ಕಾರೇತರ ಸಂಸ್ಥೆ ಪರ ವಕೀಲರಾದ ಅಶೋಕ್ ಅಗರವಾಲ್ ಮತ್ತು ಕುಮಾರ್ ಉತ್ಕರ್ಷ ವಾದ ಮಂಡಿಸಿದರು.</p>.<p>ಈ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಶಿಕ್ಷಣ ಸಚಿವಾಲಯದ ಕಾರ್ಯದರ್ಶಿಗೆ ನೋಟಿಸ್ ಜಾರಿಗೊಳಿಸಿದ ನ್ಯಾಯಾಲಯ ಮುಂದಿನ ವಿಚಾರಣೆಯನ್ನು ಮಾರ್ಚ್ 17ಕ್ಕೆ ಮುಂದೂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>