<p><strong>ನವದೆಹಲಿ</strong>: ಕೋವಿಡ್ ಪರಿಸ್ಥಿತಿಯಿಂದಾಗಿ ಸೆಂಟ್ರಲ್ ವಿಸ್ತಾ ನಿರ್ಮಾಣ ಯೋಜನೆಗೆ ಸ್ಥಗಿತಗೊಳಿಸಲು ಸೂಚಿಸಬೇಕು ಎಂದು ಕೋರಿರುವ ಅರ್ಜಿಯ ವಿಚಾರಣೆಯನ್ನು ದೆಹಲಿ ಹೈಕೋರ್ಟ್ ಮಂಗಳವಾರ ವಿಚಾರಣೆ ನಡೆಸಲಿದೆ.</p>.<p class="title">ಮುಖ್ಯ ನ್ಯಾಯಮೂರ್ತಿ ಡಿ.ಎನ್.ಪಟೇಲ್ ಮತ್ತು ನ್ಯಾಯಮೂರ್ತಿ ಜಸ್ಮೀತ್ ಸಿಂಗ್ ಅವರಿದ್ಧ ಪೀಠವು, ಹಿರಿಯ ವಕೀಲ ಸಿದ್ಧಾರ್ಥ ಲೂತಾರಾ ಅವರ ಮನವಿಯನ್ನು ಪುರಸ್ಕರಿಸಿ, ಮಂಗಳವಾರ ವಿಚಾರಣೆ ನಡೆಸಲು ಒಪ್ಪಿತು.</p>.<p class="title">ಹೈಕೋರ್ಟ್ ಇದಕ್ಕೂ ಮೊದಲು, ₹ 20,000 ಕೋಟಿ ವೆಚ್ಚದ ಈ ಯೋಜನೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ನ ಆದೇಶವನ್ನು ಪರಿಶೀಲಿಸಬೇಕು ಎಂದು ತಿಳಿಸಿ ಮೇ 17 ಅನ್ನು ವಿಚಾರಣೆಗೆ ಗೊತ್ತುಪಡಿಸಿತ್ತು.</p>.<p>ಹೆಚ್ಚುವರಿ ಸಾಲಿಸಿಟರ್ ಜನರಲ್ ಚೇತನ್ ಶರ್ಮಾ ಅವರು, ಕೇಂದ್ರ ಸರ್ಕಾರವು ತನ್ನ ಪ್ರತಿಕ್ರಿಯೆ ದಾಖಲಿಸಲು ಅನುವಾಗುವಂತೆ ಬುಧವಾರಕ್ಕೆ ಪ್ರಕರಣ ನಿಗದಿಪಡಿಸಬೇಕು ಎಂದು ಮನವಿ ಮಾಡಿದರು.</p>.<p>ಅರ್ಜಿದಾರರಾದ ಅನ್ಯಾ ಮಲ್ಹೋತ್ರಾ ಮತ್ತು ಸೋಹೇಲ್ ಹಾಶ್ಮಿ ಅವರು, ಕಟ್ಟಡ ನಿರ್ಮಾಣದಲ್ಲಿ ತೊಡಗಿರುವ ಕಾರ್ಮಿಕರಿಂದಲೂ ಸೋಂಕು ಹರಡಬಹುದು. ಹೀಗಾಗಿ, ನಿರ್ಮಾಣಕ್ಕೆ ತಡೆ ನೀಡಬೇಕು ಎಂದು ಕೋರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಕೋವಿಡ್ ಪರಿಸ್ಥಿತಿಯಿಂದಾಗಿ ಸೆಂಟ್ರಲ್ ವಿಸ್ತಾ ನಿರ್ಮಾಣ ಯೋಜನೆಗೆ ಸ್ಥಗಿತಗೊಳಿಸಲು ಸೂಚಿಸಬೇಕು ಎಂದು ಕೋರಿರುವ ಅರ್ಜಿಯ ವಿಚಾರಣೆಯನ್ನು ದೆಹಲಿ ಹೈಕೋರ್ಟ್ ಮಂಗಳವಾರ ವಿಚಾರಣೆ ನಡೆಸಲಿದೆ.</p>.<p class="title">ಮುಖ್ಯ ನ್ಯಾಯಮೂರ್ತಿ ಡಿ.ಎನ್.ಪಟೇಲ್ ಮತ್ತು ನ್ಯಾಯಮೂರ್ತಿ ಜಸ್ಮೀತ್ ಸಿಂಗ್ ಅವರಿದ್ಧ ಪೀಠವು, ಹಿರಿಯ ವಕೀಲ ಸಿದ್ಧಾರ್ಥ ಲೂತಾರಾ ಅವರ ಮನವಿಯನ್ನು ಪುರಸ್ಕರಿಸಿ, ಮಂಗಳವಾರ ವಿಚಾರಣೆ ನಡೆಸಲು ಒಪ್ಪಿತು.</p>.<p class="title">ಹೈಕೋರ್ಟ್ ಇದಕ್ಕೂ ಮೊದಲು, ₹ 20,000 ಕೋಟಿ ವೆಚ್ಚದ ಈ ಯೋಜನೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ನ ಆದೇಶವನ್ನು ಪರಿಶೀಲಿಸಬೇಕು ಎಂದು ತಿಳಿಸಿ ಮೇ 17 ಅನ್ನು ವಿಚಾರಣೆಗೆ ಗೊತ್ತುಪಡಿಸಿತ್ತು.</p>.<p>ಹೆಚ್ಚುವರಿ ಸಾಲಿಸಿಟರ್ ಜನರಲ್ ಚೇತನ್ ಶರ್ಮಾ ಅವರು, ಕೇಂದ್ರ ಸರ್ಕಾರವು ತನ್ನ ಪ್ರತಿಕ್ರಿಯೆ ದಾಖಲಿಸಲು ಅನುವಾಗುವಂತೆ ಬುಧವಾರಕ್ಕೆ ಪ್ರಕರಣ ನಿಗದಿಪಡಿಸಬೇಕು ಎಂದು ಮನವಿ ಮಾಡಿದರು.</p>.<p>ಅರ್ಜಿದಾರರಾದ ಅನ್ಯಾ ಮಲ್ಹೋತ್ರಾ ಮತ್ತು ಸೋಹೇಲ್ ಹಾಶ್ಮಿ ಅವರು, ಕಟ್ಟಡ ನಿರ್ಮಾಣದಲ್ಲಿ ತೊಡಗಿರುವ ಕಾರ್ಮಿಕರಿಂದಲೂ ಸೋಂಕು ಹರಡಬಹುದು. ಹೀಗಾಗಿ, ನಿರ್ಮಾಣಕ್ಕೆ ತಡೆ ನೀಡಬೇಕು ಎಂದು ಕೋರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>