<p><strong>ನವದೆಹಲಿ: </strong>ಸಮಯದ ಅಭಾವ ಇರುವ ಕಾರಣ ಪ್ರಕರಣಗಳ ವಿಚಾರಣೆಗೆ ಕಾಲಮಿತಿ ನಿಗದಿ ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವ ಅಗತ್ಯ ಇದೆ ಎಂದು ಸುಪ್ರೀಂಕೋರ್ಟ್ ಶುಕ್ರವಾರ ಅಭಿಪ್ರಾಯಪಟ್ಟಿತು.</p>.<p>ನ್ಯಾಯಮೂರ್ತಿಗಳಾದ ಎ.ಎಂ.ಖಾನ್ವೀಲ್ಕರ್ ಹಾಗೂ ಸಿ.ಟಿ.ರವಿಕುಮಾರ್ ಅವರಿದ್ದ ನ್ಯಾಯಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿತು.</p>.<p>ಪಶ್ಚಿಮ ಬಂಗಾಳದ ಮಾಜಿ ಮುಖ್ಯಕಾರ್ಯದರ್ಶಿ ಆಲಾಪನ್ ಬಂದೋಪಾಧ್ಯಾಯ ಅವರು ತಮ್ಮ ವಿರುದ್ಧ ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದ್ದನ್ನು ಪ್ರಶ್ನಿಸಿ ಕೇಂದ್ರೀಯ ಆಡಳಿತ ನ್ಯಾಯಮಂಡಳಿಗೆ (ಸಿಎಟಿ) ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಕೋಲ್ಕತ್ತದಿಂದ ನವದೆಹಲಿಗೆ ವರ್ಗಾಯಿಸಿ ಸಿಎಟಿ ಆದೇಶಿಸಿತ್ತು.</p>.<p>ಸಿಎಟಿಯ ಈ ಆದೇಶವನ್ನು ಕಲ್ಕತ್ತ ಹೈಕೋರ್ಟ್ ರದ್ದುಪಡಿಸಿತ್ತು. ಹೈಕೋರ್ಟ್ನ ಈ ಆದೇಶವನ್ನು ಪ್ರಶ್ನಿಸಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಪೀಠ ನಡೆಸಿತು.</p>.<p>‘ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿಗಳಾಗಿದ್ದ ಎಂ.ಎನ್.ವೆಂಕಟಾಚಲಯ್ಯ ಅವರು ಅರ್ಜಿಗಳ ವಿಚಾರಣೆಗೆ ಕಾಲಮಿತಿ ನಿಗದಿ ಮಾಡಬೇಕು ಎಂಬ ಸಲಹೆ ನೀಡಿದ್ದರು. ಇಂಥ ಕ್ರಮದ ಬಗ್ಗೆ ಈಗ ನಾವು ಗಂಭೀರವಾಗಿ ಆಲೋಚನೆ ಮಾಡಬೇಕಿದೆ’ ಎಂದು ನ್ಯಾಯಪೀಠ ಹೇಳಿತು.</p>.<p>‘ವಿಚಾರಣೆ ಸಂದರ್ಭದಲ್ಲಿ, ಒಂದು ವಿಷಯ ಕುರಿತು ಅನೇಕ ವಕೀಲರು ಒಂದೇ ರೀತಿಯ ವಾದ ಮಂಡಿಸುವುದರಿಂದ ಕೋರ್ಟ್ನ ಸಮಯ ವ್ಯರ್ಥವಾಗುತ್ತಿದೆ’ ಎಂದು ನ್ಯಾಯಪೀಠ ಹೇಳಿತು.</p>.<p>ಈ ಸಂಬಂಧ ಕ್ರಮ ಕೈಗೊಳ್ಳುವಂತೆ ಕೇಂದ್ರದ ಪರ ಹಾಜರಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರಿಗೆ ಸೂಚನೆ ನೀಡಿದ ನ್ಯಾಯಪೀಠ, ವಿಚಾರಣೆಯನ್ನು ನ.29ಕ್ಕೆ ಮಂದೂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಸಮಯದ ಅಭಾವ ಇರುವ ಕಾರಣ ಪ್ರಕರಣಗಳ ವಿಚಾರಣೆಗೆ ಕಾಲಮಿತಿ ನಿಗದಿ ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವ ಅಗತ್ಯ ಇದೆ ಎಂದು ಸುಪ್ರೀಂಕೋರ್ಟ್ ಶುಕ್ರವಾರ ಅಭಿಪ್ರಾಯಪಟ್ಟಿತು.</p>.<p>ನ್ಯಾಯಮೂರ್ತಿಗಳಾದ ಎ.ಎಂ.ಖಾನ್ವೀಲ್ಕರ್ ಹಾಗೂ ಸಿ.ಟಿ.ರವಿಕುಮಾರ್ ಅವರಿದ್ದ ನ್ಯಾಯಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿತು.</p>.<p>ಪಶ್ಚಿಮ ಬಂಗಾಳದ ಮಾಜಿ ಮುಖ್ಯಕಾರ್ಯದರ್ಶಿ ಆಲಾಪನ್ ಬಂದೋಪಾಧ್ಯಾಯ ಅವರು ತಮ್ಮ ವಿರುದ್ಧ ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದ್ದನ್ನು ಪ್ರಶ್ನಿಸಿ ಕೇಂದ್ರೀಯ ಆಡಳಿತ ನ್ಯಾಯಮಂಡಳಿಗೆ (ಸಿಎಟಿ) ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಕೋಲ್ಕತ್ತದಿಂದ ನವದೆಹಲಿಗೆ ವರ್ಗಾಯಿಸಿ ಸಿಎಟಿ ಆದೇಶಿಸಿತ್ತು.</p>.<p>ಸಿಎಟಿಯ ಈ ಆದೇಶವನ್ನು ಕಲ್ಕತ್ತ ಹೈಕೋರ್ಟ್ ರದ್ದುಪಡಿಸಿತ್ತು. ಹೈಕೋರ್ಟ್ನ ಈ ಆದೇಶವನ್ನು ಪ್ರಶ್ನಿಸಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಪೀಠ ನಡೆಸಿತು.</p>.<p>‘ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿಗಳಾಗಿದ್ದ ಎಂ.ಎನ್.ವೆಂಕಟಾಚಲಯ್ಯ ಅವರು ಅರ್ಜಿಗಳ ವಿಚಾರಣೆಗೆ ಕಾಲಮಿತಿ ನಿಗದಿ ಮಾಡಬೇಕು ಎಂಬ ಸಲಹೆ ನೀಡಿದ್ದರು. ಇಂಥ ಕ್ರಮದ ಬಗ್ಗೆ ಈಗ ನಾವು ಗಂಭೀರವಾಗಿ ಆಲೋಚನೆ ಮಾಡಬೇಕಿದೆ’ ಎಂದು ನ್ಯಾಯಪೀಠ ಹೇಳಿತು.</p>.<p>‘ವಿಚಾರಣೆ ಸಂದರ್ಭದಲ್ಲಿ, ಒಂದು ವಿಷಯ ಕುರಿತು ಅನೇಕ ವಕೀಲರು ಒಂದೇ ರೀತಿಯ ವಾದ ಮಂಡಿಸುವುದರಿಂದ ಕೋರ್ಟ್ನ ಸಮಯ ವ್ಯರ್ಥವಾಗುತ್ತಿದೆ’ ಎಂದು ನ್ಯಾಯಪೀಠ ಹೇಳಿತು.</p>.<p>ಈ ಸಂಬಂಧ ಕ್ರಮ ಕೈಗೊಳ್ಳುವಂತೆ ಕೇಂದ್ರದ ಪರ ಹಾಜರಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರಿಗೆ ಸೂಚನೆ ನೀಡಿದ ನ್ಯಾಯಪೀಠ, ವಿಚಾರಣೆಯನ್ನು ನ.29ಕ್ಕೆ ಮಂದೂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>