<p><strong>ತಿರುವನಂತಪುರ: </strong>ಕೋಯಿಕ್ಕೋಡ್ನಲ್ಲಿ ನಡೆದ ವಿಮಾನ ಅಪಘಾತ ಸ್ಥಳಕ್ಕೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಕ್ಷಣವೇ ದೌಡಾಯಿಸಿ ಮೃತರ ಕುಟುಂಬದವರನ್ನು, ಗಾಯಾಳುಗಳನ್ನು ಭೇಟಿಯಾಗಿ, ₹10 ಲಕ್ಷ ಪರಿಹಾರ ಘೋಷಿಸಿರುವುದು ಇದೀಗ ವಿಪಕ್ಷಗಳ ಟೀಕೆಗೆ ಗುರಿಯಾಗಿದೆ. </p>.<p>ಮುನ್ನಾರ್ನಲ್ಲಿ ನಡೆದಭೂಕುಸಿತದಲ್ಲಿ ಮೃತಪಟ್ಟ ಜನರಿಗೆ ಕೇವಲ ₹5 ಲಕ್ಷ ಪರಿಹಾರ ಘೋಷಿಸಿರುವುದು, ಪಕ್ಷಪಾತದ ಕಿಡಿ ಹೊತ್ತಿಸಿದೆ. ‘ವಿಮಾನ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ₹10 ಲಕ್ಷ ಪರಿಹಾರ ಘೋಷಿಸಿದ್ದಾರೆ. ಇಷ್ಟೇ ಪರಿಹಾರವನ್ನು ಭೂಕುಸಿತದಲ್ಲಿ ಮೃತಪಟ್ಟವರ ಕುಟುಂಬಕ್ಕೂ ನೀಡಬೇಕು’ ಎಂದು ವಿರೋಧ ಪಕ್ಷದ ನಾಯಕ ರಮೇಶ್ ಚೆನ್ನಿತ್ತಲ ಭಾನುವಾರ ಹೇಳಿದರು.</p>.<p>‘ದುರಂತ ನಡೆದ ಸ್ಥಳಕ್ಕೆ ಭೇಟಿ ನೀಡುವಾಗ, ಆಯ್ಕೆ ಮಾಡುವಂತ ಮನೋಭಾವ ಇರಬಾರದು’ ಎಂದು ಭೂಕುಸಿತ ಸಂಭವಿಸಿದ ಪ್ರದೇಶಕ್ಕೆ ಭೇಟಿ ನೀಡಿದ ಕೇಂದ್ರ ವಿದೇಶಾಂಗ ಇಲಾಖೆ ರಾಜ್ಯ ಖಾತೆ ಸಚಿವ ವಿ.ಮುರುಳೀಧರನ್ ಹೇಳಿದರು.</p>.<p>ವಿವಾದ ತೀವ್ರತೆ ಪಡೆಯುತ್ತಿದ್ದಂತೆ ಸ್ಪಷ್ಟನೆ ನೀಡಿರುವ ವಿಜಯನ್, ಭೂಕುಸಿತದಿಂದ ಮೃತಪಟ್ಟವರ ಕುಟುಂಬಕ್ಕೆ ಘೋಷಿಸಿರುವುದು ಕೇವಲ ಮಧ್ಯಂತರ ಪರಿಹಾರವಷ್ಟೇ. ದುರುಂತ ನಡೆದ ಪ್ರದೇಶಕ್ಕೆ ಇಬ್ಬರು ಸಚಿವರನ್ನು ನಿಯೋಜಿಸಲಾಗಿದೆ. ರಕ್ಷಣಾ ಕಾರ್ಯ ಮುಂದುವರಿದಿದೆ’ ಎಂದು ತಿಳಿಸಿದ್ದಾರೆ.</p>.<p>ಪೆಟ್ಟಿಮುಡಿ ಪ್ರದೇಶದಲ್ಲಿ ನಡೆದ ಭೂಕುಸಿತದಲ್ಲಿ ಇಲ್ಲಿಯವರೆಗೂ 28 ಜನರು ಮೃತಪಟ್ಟಿದ್ದು, 40ಕ್ಕೂ ಅಧಿಕ ಜನರು ಕಾಣೆಯಾಗಿದ್ದಾರೆ. ವಿಮಾನ ಅಪಘಾತದಲ್ಲಿ 18 ಪ್ರಯಾಣಿಕರು ಮೃತಪಟ್ಟು, 14 ಜನ ಗಂಭೀರವಾಗಿ ಗಾಯಗೊಂಡಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ: </strong>ಕೋಯಿಕ್ಕೋಡ್ನಲ್ಲಿ ನಡೆದ ವಿಮಾನ ಅಪಘಾತ ಸ್ಥಳಕ್ಕೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಕ್ಷಣವೇ ದೌಡಾಯಿಸಿ ಮೃತರ ಕುಟುಂಬದವರನ್ನು, ಗಾಯಾಳುಗಳನ್ನು ಭೇಟಿಯಾಗಿ, ₹10 ಲಕ್ಷ ಪರಿಹಾರ ಘೋಷಿಸಿರುವುದು ಇದೀಗ ವಿಪಕ್ಷಗಳ ಟೀಕೆಗೆ ಗುರಿಯಾಗಿದೆ. </p>.<p>ಮುನ್ನಾರ್ನಲ್ಲಿ ನಡೆದಭೂಕುಸಿತದಲ್ಲಿ ಮೃತಪಟ್ಟ ಜನರಿಗೆ ಕೇವಲ ₹5 ಲಕ್ಷ ಪರಿಹಾರ ಘೋಷಿಸಿರುವುದು, ಪಕ್ಷಪಾತದ ಕಿಡಿ ಹೊತ್ತಿಸಿದೆ. ‘ವಿಮಾನ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ₹10 ಲಕ್ಷ ಪರಿಹಾರ ಘೋಷಿಸಿದ್ದಾರೆ. ಇಷ್ಟೇ ಪರಿಹಾರವನ್ನು ಭೂಕುಸಿತದಲ್ಲಿ ಮೃತಪಟ್ಟವರ ಕುಟುಂಬಕ್ಕೂ ನೀಡಬೇಕು’ ಎಂದು ವಿರೋಧ ಪಕ್ಷದ ನಾಯಕ ರಮೇಶ್ ಚೆನ್ನಿತ್ತಲ ಭಾನುವಾರ ಹೇಳಿದರು.</p>.<p>‘ದುರಂತ ನಡೆದ ಸ್ಥಳಕ್ಕೆ ಭೇಟಿ ನೀಡುವಾಗ, ಆಯ್ಕೆ ಮಾಡುವಂತ ಮನೋಭಾವ ಇರಬಾರದು’ ಎಂದು ಭೂಕುಸಿತ ಸಂಭವಿಸಿದ ಪ್ರದೇಶಕ್ಕೆ ಭೇಟಿ ನೀಡಿದ ಕೇಂದ್ರ ವಿದೇಶಾಂಗ ಇಲಾಖೆ ರಾಜ್ಯ ಖಾತೆ ಸಚಿವ ವಿ.ಮುರುಳೀಧರನ್ ಹೇಳಿದರು.</p>.<p>ವಿವಾದ ತೀವ್ರತೆ ಪಡೆಯುತ್ತಿದ್ದಂತೆ ಸ್ಪಷ್ಟನೆ ನೀಡಿರುವ ವಿಜಯನ್, ಭೂಕುಸಿತದಿಂದ ಮೃತಪಟ್ಟವರ ಕುಟುಂಬಕ್ಕೆ ಘೋಷಿಸಿರುವುದು ಕೇವಲ ಮಧ್ಯಂತರ ಪರಿಹಾರವಷ್ಟೇ. ದುರುಂತ ನಡೆದ ಪ್ರದೇಶಕ್ಕೆ ಇಬ್ಬರು ಸಚಿವರನ್ನು ನಿಯೋಜಿಸಲಾಗಿದೆ. ರಕ್ಷಣಾ ಕಾರ್ಯ ಮುಂದುವರಿದಿದೆ’ ಎಂದು ತಿಳಿಸಿದ್ದಾರೆ.</p>.<p>ಪೆಟ್ಟಿಮುಡಿ ಪ್ರದೇಶದಲ್ಲಿ ನಡೆದ ಭೂಕುಸಿತದಲ್ಲಿ ಇಲ್ಲಿಯವರೆಗೂ 28 ಜನರು ಮೃತಪಟ್ಟಿದ್ದು, 40ಕ್ಕೂ ಅಧಿಕ ಜನರು ಕಾಣೆಯಾಗಿದ್ದಾರೆ. ವಿಮಾನ ಅಪಘಾತದಲ್ಲಿ 18 ಪ್ರಯಾಣಿಕರು ಮೃತಪಟ್ಟು, 14 ಜನ ಗಂಭೀರವಾಗಿ ಗಾಯಗೊಂಡಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>