ಈ ನಡುವೆ ಕಾಂಗ್ರೆಸ್ಗೆ ಬಿಜೆಪಿಯಿಂದ ಶಾಸಕರ ಖರೀದಿ ಭೀತಿ ಶುರುವಾಗಿದೆ. ಹೀಗಾಗಿಹಿಮಾಚಲ ಪ್ರದೇಶದ ಚುನಾವಣಾ ವೀಕ್ಷಕರಾದ ಛತ್ತೀಸಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್,ಹರಿಯಾಣದ ಮಾಜಿ ಮುಖ್ಯಮಂತ್ರಿ ಭೂಪಿಂದರ್ ಹೂಡಾ, ಹಿಮಾಚಲ ಪ್ರದೇಶದ ಎಐಸಿಸಿ ಉಸ್ತುವಾರಿ ರಾಜೀವ್ ಶುಕ್ಲಾ ಸೇರಿದಂತೆ ಹಿರಿಯ ನಾಯಕರನ್ನು ಕಾಂಗ್ರೆಸ್ ಹೈಕಮಾಂಡ್ ಚಂಡೀಗಢಕ್ಕೆ ಕಳುಹಿಸಿದೆ ಎಂದು ಎಎನ್ಐ ಟ್ವೀಟಿಸಿದೆ.