<p><strong>ಶಿಮ್ಲಾ:</strong> ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಗೆ ಭಾರತೀಯ ಜನತಾ ಪಕ್ಷದ (ಬಿಜೆಪಿ) ಪ್ರಣಾಳಿಕೆ ಬಿಡುಗಡೆಯಾಗಿದ್ದು, ಹಂತ ಹಂತವಾಗಿ ಎಂಟು ಲಕ್ಷ ಉದ್ಯೋಗ ಸೃಷ್ಟಿ ಮತ್ತು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಯಂತಹ ಭರವಸೆಗಳನ್ನು ಪ್ರಕಟಿಸಿದೆ.</p>.<p>ಶಿಮ್ಲಾದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, 'ಸಂಕಲ್ಪ ಪತ್ರ' ಪ್ರಣಾಳಿಕೆ ಬಿಡುಗಡೆಗೊಳಿಸಿದರು.</p>.<p>ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ ಶೇ 33ರಷ್ಟು ಮೀಸಲಾತಿ, ಐದು ಹೊಸ ವೈದ್ಯಕೀಯ ಕಾಲೇಜು ಸ್ಥಾಪನೆ, ಉನ್ನತ ವ್ಯಾಸಂಗ ಮಾಡುವ ಹೆಣ್ಮಕ್ಕಳಿಗೆ ಸ್ಕೂಟರ್ ಮತ್ತು 6ರಿಂದ 12ರವರೆಗಿನ ವಿದ್ಯಾರ್ಥಿನಿಯರಿಗೆ ಸೈಕಲ್ ನೀಡಲಾಗುವುದು ಎಂದು ಪ್ರಣಾಳಿಕೆ ಭರವಸೆ ನೀಡಿದೆ.</p>.<p>ಇದನ್ನೂ ಓದಿ:<a href="https://www.prajavani.net/india-news/congress-releases-manifesto-for-himachala-pradesh-election-986195.html" itemprop="url">1 ಲಕ್ಷ ಉದ್ಯೋಗ, ಉಚಿತ ವಿದ್ಯುತ್: ಹಿಮಾಚಲ ಪ್ರದೇಶ ಚುನಾವಣೆಗೆ ‘ಕೈ’ ಪ್ರಣಾಳಿಕೆ </a></p>.<p>'ಶಕ್ತಿ' ಕಾರ್ಯಕ್ರಮದಡಿಯಲ್ಲಿ ಧಾರ್ಮಿಕ ಸ್ಥಳಗಳು, ಮೂಲಸೌಕರ್ಯ ಹಾಗೂ ಸಾರಿಗೆಯನ್ನು ಅಭಿವೃದ್ಧಿಪಡಿಸಲು 10 ವರ್ಷಗಳ ಅವಧಿಯಲ್ಲಿ ₹12,000 ಕೋಟಿ ವ್ಯಯಿಸಲಾಗುವುದು ಎಂದು ನಡ್ಡಾ ತಿಳಿಸಿದರು.</p>.<p>ಹಿಮಾಚಲದಲ್ಲಿ ಮತ್ತೆ ಅಧಿಕಾರಕ್ಕೆ ಬಂದರೆ ಏಕರೂಪ ನಾಗರಿಕೆ ಸಂಹಿತೆ ಜಾರಿ ಮಾಡಲಾಗುವುದು ಎಂದು ಹೇಳಿರುವ ನಡ್ಡಾ, ಅದಕ್ಕಾಗಿ ಸಮಿತಿಯನ್ನು ರೂಪಿಸಲಾಗುವುದು ಎಂದು ಭರವಸೆ ನೀಡಿದರು.</p>.<p>68 ಸದಸ್ಯ ಬಲದ ಹಿಮಾಚಲ ಪ್ರದೇಶದಲ್ಲಿ ನವೆಂಬರ್ 12ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 8ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಮ್ಲಾ:</strong> ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಗೆ ಭಾರತೀಯ ಜನತಾ ಪಕ್ಷದ (ಬಿಜೆಪಿ) ಪ್ರಣಾಳಿಕೆ ಬಿಡುಗಡೆಯಾಗಿದ್ದು, ಹಂತ ಹಂತವಾಗಿ ಎಂಟು ಲಕ್ಷ ಉದ್ಯೋಗ ಸೃಷ್ಟಿ ಮತ್ತು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಯಂತಹ ಭರವಸೆಗಳನ್ನು ಪ್ರಕಟಿಸಿದೆ.</p>.<p>ಶಿಮ್ಲಾದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, 'ಸಂಕಲ್ಪ ಪತ್ರ' ಪ್ರಣಾಳಿಕೆ ಬಿಡುಗಡೆಗೊಳಿಸಿದರು.</p>.<p>ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ ಶೇ 33ರಷ್ಟು ಮೀಸಲಾತಿ, ಐದು ಹೊಸ ವೈದ್ಯಕೀಯ ಕಾಲೇಜು ಸ್ಥಾಪನೆ, ಉನ್ನತ ವ್ಯಾಸಂಗ ಮಾಡುವ ಹೆಣ್ಮಕ್ಕಳಿಗೆ ಸ್ಕೂಟರ್ ಮತ್ತು 6ರಿಂದ 12ರವರೆಗಿನ ವಿದ್ಯಾರ್ಥಿನಿಯರಿಗೆ ಸೈಕಲ್ ನೀಡಲಾಗುವುದು ಎಂದು ಪ್ರಣಾಳಿಕೆ ಭರವಸೆ ನೀಡಿದೆ.</p>.<p>ಇದನ್ನೂ ಓದಿ:<a href="https://www.prajavani.net/india-news/congress-releases-manifesto-for-himachala-pradesh-election-986195.html" itemprop="url">1 ಲಕ್ಷ ಉದ್ಯೋಗ, ಉಚಿತ ವಿದ್ಯುತ್: ಹಿಮಾಚಲ ಪ್ರದೇಶ ಚುನಾವಣೆಗೆ ‘ಕೈ’ ಪ್ರಣಾಳಿಕೆ </a></p>.<p>'ಶಕ್ತಿ' ಕಾರ್ಯಕ್ರಮದಡಿಯಲ್ಲಿ ಧಾರ್ಮಿಕ ಸ್ಥಳಗಳು, ಮೂಲಸೌಕರ್ಯ ಹಾಗೂ ಸಾರಿಗೆಯನ್ನು ಅಭಿವೃದ್ಧಿಪಡಿಸಲು 10 ವರ್ಷಗಳ ಅವಧಿಯಲ್ಲಿ ₹12,000 ಕೋಟಿ ವ್ಯಯಿಸಲಾಗುವುದು ಎಂದು ನಡ್ಡಾ ತಿಳಿಸಿದರು.</p>.<p>ಹಿಮಾಚಲದಲ್ಲಿ ಮತ್ತೆ ಅಧಿಕಾರಕ್ಕೆ ಬಂದರೆ ಏಕರೂಪ ನಾಗರಿಕೆ ಸಂಹಿತೆ ಜಾರಿ ಮಾಡಲಾಗುವುದು ಎಂದು ಹೇಳಿರುವ ನಡ್ಡಾ, ಅದಕ್ಕಾಗಿ ಸಮಿತಿಯನ್ನು ರೂಪಿಸಲಾಗುವುದು ಎಂದು ಭರವಸೆ ನೀಡಿದರು.</p>.<p>68 ಸದಸ್ಯ ಬಲದ ಹಿಮಾಚಲ ಪ್ರದೇಶದಲ್ಲಿ ನವೆಂಬರ್ 12ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 8ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>