ಮಂಡಿ: ಹಿಮಾಚಲ ಪ್ರದೇಶದಿಂದ ಭ್ರಷ್ಟಾಚಾರವನ್ನು ಕಿತ್ತುಹಾಕುವ ಸಮಯ ಬಂದಿದೆ ಎಂದು ಎಎಪಿ ರಾಷ್ಟ್ರೀಯ ಸಂಚಾಲಕ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬುಧವಾರ ತಿಳಿಸಿದ್ದಾರೆ.
ಹಿಮಾಚಲ ಪ್ರದೇಶದ ಮಂಡಿಯಲ್ಲಿ ಆಮ್ ಆದ್ಮಿ ಪಕ್ಷವು ಆಯೋಜಿಸಿದ್ದ ರೋಡ್ ಶೋದಲ್ಲಿ ಭಾಗವಹಿಸಿ ಕೇಜ್ರಿವಾಲ್ ಮಾತನಾಡಿದರು. ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಈ ವೇಳೆ ಹಾಜರಿದ್ದರು.
‘ಮೊದಲು ನಾವು ದೆಹಲಿಯಲ್ಲಿ ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಿದೆವು. ನಂತರ ಪಂಜಾಬ್ನಲ್ಲಿ ಭ್ರಷ್ಟಾಚಾರಕ್ಕೆ ಕಡಿವಾನ ಹಾಕಿದೆವು. ಈಗ ಹಿಮಾಚಲ ಪ್ರದೇಶದಿಂದ ಭ್ರಷ್ಟಾಚಾರವನ್ನು ಕಿತ್ತೊಗೆಯುವ ಸಮಯ ಬಂದಿದೆ’ ಎಂದು ಕೇಜ್ರಿವಾಲ್ ಹೇಳಿದ್ದಾರೆ.
Himachal Pradesh | AAP national convenor & Delhi CM Arvind Kejriwal along with Punjab CM Bhagwant Mann hold a roadshow in Mandi
First, we eradicated corruption in Delhi & then in Punjab, now it's time to uproot corruption from Himachal Pradesh: Arvind Kejriwal pic.twitter.com/UprzNyOeoo