<p><strong>ಶಿಮ್ಲಾ:</strong> ‘ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ. ಗುರುವಾರ ಮತ್ತೆ ಮೂರು ಶವಗಳು ಪತ್ತೆಯಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ’ ಎಂದು ಅಧಿಕಾರಿಗಳು ತಿಳಿಸಿದರು.</p>.<p>‘ಮಣ್ಣಿನಡಿಯಲ್ಲಿ ಸಿಲುಕಿದ್ದ ಹಿಮಾಚಲ ರಸ್ತೆ ಸಾರಿಗೆ ನಿಗಮದ(ಎಚ್ಆರ್ಟಿಸಿ) ಬಸ್ನಲ್ಲಿ ಮೂರು ಶವಗಳು ಸಿಕ್ಕಿವೆ. ಬಸ್ ಸಂಪೂರ್ಣವಾಗಿ ಹಾನಿಗೊಳಾಗಿದೆ. ಮತ್ತೊಂದು ವಾಹನ ಮಣ್ಣಿನಲ್ಲಿ ಹೂತು ಹೋಗಿದೆ’ ಎಂದು ರಾಜ್ಯ ವಿಪತ್ತು ನಿರ್ವಹಣಾ ಘಟಕದ ನಿರ್ದೇಶಕ ಸುದೇಶ್ ಕುಮಾರ್ ಮೊಕ್ತಾ ಅವರು ಮಾಹಿತಿ ನೀಡಿದರು.</p>.<p>‘ಗುರುವಾರ ಬೆಳಿಗ್ಗೆ 6 ಗಂಟೆಗೆ ರಕ್ಷಣಾ ಕಾರ್ಯಾಚರಣೆಯು ಪುನರಾರಂಭಗೊಂಡಿದ್ದು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್ಡಿಆರ್ಎಫ್) ಮತ್ತು ಭಾರತ-ಟಿಬೆಟ್ ಗಡಿ ಭದ್ರತಾ ಪಡೆ ಪೊಲೀಸ್ (ಐಟಿಬಿಪಿ) ಜಂಟಿ ಕಾರ್ಯಾಚರಣೆ ನಡೆಸುತ್ತಿದೆ. ಇದಕ್ಕೆ ಸ್ಥಳೀಯ ಪೊಲೀಸ್ ಪಡೆ ಹಾಗೂ ಹೋಂ ಗಾರ್ಡ್ ಸಿಬ್ಬಂದಿ ಕೂಡ ಕೈಜೋಡಿಸಿದ್ದಾರೆ’ ಎಂದು ಅವರು ಹೇಳಿದರು.</p>.<p>ಬುಧವಾರ ರಾತ್ರಿ 10 ಗಂಟೆಗೆ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿತ್ತು.</p>.<p>ಎಚ್ಆರ್ಟಿಸಿ ಬಸ್ ಕಿನ್ನೌರ್ನ ರಿಕಾಂಗ್ ಪಿಓದಿಂದ ಶಿಮ್ಲಾಗೆ ಸಂಚರಿಸುತ್ತಿತ್ತು. ಈ ವೇಳೆ ನಿಗುಲ್ಸರಿ ಪ್ರದೇಶದ ರಾಷ್ಟ್ರೀಯ ಹೆದ್ದಾರಿ–5ರಲ್ಲಿ ಭೂ ಕುಸಿತ ಸಂಭವಿಸಿದೆ. ಬುಧವಾರ ರಾತ್ರಿ ವೇಳೆಗೆ 10 ಮೃತದೇಹಗಳು ಸಿಕ್ಕಿದ್ದವು. 13 ಮಂದಿಯನ್ನು ರಕ್ಷಿಸಲಾಗಿತ್ತು.</p>.<p><a href="https://www.prajavani.net/district/bengaluru-city/drumstick-leaves-powder-benefits-for-coronavirus-virus-hesaraghatta-farmer-grown-and-received-high-857029.html" itemprop="url">ಕೊರೊನಾ ಸಂಕಷ್ಟ: ರೈತನ ಕೈ ಹಿಡಿದನುಗ್ಗೆಪುಡಿ, ಏನಿದರ ಉಪಯೋಗ? ಇಲ್ಲಿದೆ ವಿವರ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಮ್ಲಾ:</strong> ‘ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ. ಗುರುವಾರ ಮತ್ತೆ ಮೂರು ಶವಗಳು ಪತ್ತೆಯಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ’ ಎಂದು ಅಧಿಕಾರಿಗಳು ತಿಳಿಸಿದರು.</p>.<p>‘ಮಣ್ಣಿನಡಿಯಲ್ಲಿ ಸಿಲುಕಿದ್ದ ಹಿಮಾಚಲ ರಸ್ತೆ ಸಾರಿಗೆ ನಿಗಮದ(ಎಚ್ಆರ್ಟಿಸಿ) ಬಸ್ನಲ್ಲಿ ಮೂರು ಶವಗಳು ಸಿಕ್ಕಿವೆ. ಬಸ್ ಸಂಪೂರ್ಣವಾಗಿ ಹಾನಿಗೊಳಾಗಿದೆ. ಮತ್ತೊಂದು ವಾಹನ ಮಣ್ಣಿನಲ್ಲಿ ಹೂತು ಹೋಗಿದೆ’ ಎಂದು ರಾಜ್ಯ ವಿಪತ್ತು ನಿರ್ವಹಣಾ ಘಟಕದ ನಿರ್ದೇಶಕ ಸುದೇಶ್ ಕುಮಾರ್ ಮೊಕ್ತಾ ಅವರು ಮಾಹಿತಿ ನೀಡಿದರು.</p>.<p>‘ಗುರುವಾರ ಬೆಳಿಗ್ಗೆ 6 ಗಂಟೆಗೆ ರಕ್ಷಣಾ ಕಾರ್ಯಾಚರಣೆಯು ಪುನರಾರಂಭಗೊಂಡಿದ್ದು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್ಡಿಆರ್ಎಫ್) ಮತ್ತು ಭಾರತ-ಟಿಬೆಟ್ ಗಡಿ ಭದ್ರತಾ ಪಡೆ ಪೊಲೀಸ್ (ಐಟಿಬಿಪಿ) ಜಂಟಿ ಕಾರ್ಯಾಚರಣೆ ನಡೆಸುತ್ತಿದೆ. ಇದಕ್ಕೆ ಸ್ಥಳೀಯ ಪೊಲೀಸ್ ಪಡೆ ಹಾಗೂ ಹೋಂ ಗಾರ್ಡ್ ಸಿಬ್ಬಂದಿ ಕೂಡ ಕೈಜೋಡಿಸಿದ್ದಾರೆ’ ಎಂದು ಅವರು ಹೇಳಿದರು.</p>.<p>ಬುಧವಾರ ರಾತ್ರಿ 10 ಗಂಟೆಗೆ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿತ್ತು.</p>.<p>ಎಚ್ಆರ್ಟಿಸಿ ಬಸ್ ಕಿನ್ನೌರ್ನ ರಿಕಾಂಗ್ ಪಿಓದಿಂದ ಶಿಮ್ಲಾಗೆ ಸಂಚರಿಸುತ್ತಿತ್ತು. ಈ ವೇಳೆ ನಿಗುಲ್ಸರಿ ಪ್ರದೇಶದ ರಾಷ್ಟ್ರೀಯ ಹೆದ್ದಾರಿ–5ರಲ್ಲಿ ಭೂ ಕುಸಿತ ಸಂಭವಿಸಿದೆ. ಬುಧವಾರ ರಾತ್ರಿ ವೇಳೆಗೆ 10 ಮೃತದೇಹಗಳು ಸಿಕ್ಕಿದ್ದವು. 13 ಮಂದಿಯನ್ನು ರಕ್ಷಿಸಲಾಗಿತ್ತು.</p>.<p><a href="https://www.prajavani.net/district/bengaluru-city/drumstick-leaves-powder-benefits-for-coronavirus-virus-hesaraghatta-farmer-grown-and-received-high-857029.html" itemprop="url">ಕೊರೊನಾ ಸಂಕಷ್ಟ: ರೈತನ ಕೈ ಹಿಡಿದನುಗ್ಗೆಪುಡಿ, ಏನಿದರ ಉಪಯೋಗ? ಇಲ್ಲಿದೆ ವಿವರ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>