<p><strong>ಶಿಮ್ಲಾ</strong>: ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 15ಕ್ಕೆ ಏರಿದ್ದು, ಶುಕ್ರವಾರ ಮಣ್ಣಿನಡಿಯಲ್ಲಿ ಮತ್ತೊಂದು ಮೃತದೇಹ ಪತ್ತೆಯಾಗಿದೆ ಎಂದು ವಿಪತ್ತು ನಿರ್ವಹಣೆಯ ಹಿರಿಯ ಅಧಿಕಾರಿ ತಿಳಿಸಿದ್ದಾರೆ.</p>.<p>ಚೌರಾ ಗ್ರಾಮದ ಬಳಿ ಬುಧವಾರ ಸಂಭವಿಸಿದ ಭೂ ಕುಸಿತದಲ್ಲಿ ಇನ್ನೂ 15 ಮಂದಿ ನಾಪತ್ತೆಯಾಗಿದ್ದು, ಅವರ ಪತ್ತೆಗಾಗಿ ರಕ್ಷಣಾ ಕಾರ್ಯಪಡೆಯವರು ಶುಕ್ರವಾರ ಬೆಳಿಗ್ಗೆಯಿಂದ ಪುನಃ ಶೋಧ ಕಾರ್ಯ ಆರಂಭಿಸಿದ್ದಾರೆ.</p>.<p>ರಕ್ಷಣಾ ಕಾರ್ಯಪಡೆಯವರು ಬುಧವಾರ ಬೆಳಿಗ್ಗೆ ನಡೆಸಿದ ಶೋಧಕಾರ್ಯದಲ್ಲಿ ಭೂ ಕುಸಿತದ ಸ್ಥಳದಿಂದ 10 ಮೃತದೇಹಗಳನ್ನು ಹೊರತೆಗೆದರು. ಗುರವಾರ ನಾಲ್ಕು ಶವಗಳು ಪತ್ತೆಯಾದವು. ಈ ನಡುವೆ ಬುಧವಾರದಂದು 13 ಜನರನ್ನು ರಕ್ಷಿಸಲಾಯಿತು.</p>.<p><strong>ಇದನ್ನೂ ಓದಿ:</strong><a href="https://cms.prajavani.net/india-news/10-dead-in-himachal-pradesh-landslide-857019.html" itemprop="url">ಹಿಮಾಚಲ ಪ್ರದೇಶ: ಭೂಕುಸಿತ: 10 ಸಾವು, 30 ಜನ ನಾಪತ್ತೆ </a></p>.<p>ಅಧಿಕಾರಿಗಳು ಗುರುವಾರ ರಾತ್ರಿ ಶೋಧಕಾರ್ಯವನ್ನು ಸ್ಥಗಿತಗೊಳಿಸಿದ್ದರು. ‘ಶುಕ್ರವಾರ ಬೆಳಿಗ್ಗೆ 5.30ರಿಂದ ಪುನಃ ಕಾರ್ಯಾಚರಣೆಯನ್ನು ಆರಂಭಿಸಿದ್ದೇವೆ‘ ಎಂದು ರಾಜ್ಯ ವಿಪತ್ತು ನಿರ್ವಹಣಾ ಸಂಸ್ಥೆಯ ನಿರ್ದೇಶಕ ಸುದೇಶ್ ಕುಮಾರ್ ಮೊಖ್ತಾ ತಿಳಿಸಿದ್ದಾರೆ.</p>.<p>‘ಒಂದು ಬೊಲೆರೊ ಮತ್ತು ಅದರೊಳಗಿದ್ದ ಪ್ರಯಾಣಿಕರು ಅವಶೇಷಗಳ ಅಡಿಯಲ್ಲಿ ಸಿಲುಕಿದ್ದಾರೆ ಎಂದು ಅಂದಾಜಿಸಲಾಗಿತ್ತು. ಆದರೆ, ವಾಹನವು ಮಣ್ಣಿನ ಅವಶೇಷಗಳೊಂದಿಗೆ ಉರುಳಿಬಿದ್ದಿರುವ ಸಾಧ್ಯತೆಯಿದೆ‘ ಎಂದು ಮೊಖ್ತಾ ಹೇಳಿದರು.</p>.<p><strong>ಇದನ್ನೂ ಓದಿ:</strong><a href="https://cms.prajavani.net/india-news/himachal-pradesh-landslide-death-toll-raised-at-kinnaur-857037.html" itemprop="url">ಹಿಮಾಚಲ ಪ್ರದೇಶ ಭೂಕುಸಿತ: ಮತ್ತೆ 3 ಶವಗಳು ಪತ್ತೆ; ಮೃತರ ಸಂಖ್ಯೆ 13ಕ್ಕೆ ಏರಿಕೆ </a></p>.<p>ಭೂ ಕುಸಿತವಾದ ಸ್ಥಳದಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್ಡಿಆರ್ಎಫ್), ಭಾರತ-ಟಿಬೆಟ್ ಗಡಿ ಪೋಲಿಸ್ (ಐಟಿಬಿಪಿ), ಸ್ಥಳೀಯ ಪೊಲೀಸ್ ಮತ್ತು ಹೋಮ್ ಗಾರ್ಡ್ ಸದಸ್ಯರು ಜಂಟಿಯಾಗಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಮ್ಲಾ</strong>: ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 15ಕ್ಕೆ ಏರಿದ್ದು, ಶುಕ್ರವಾರ ಮಣ್ಣಿನಡಿಯಲ್ಲಿ ಮತ್ತೊಂದು ಮೃತದೇಹ ಪತ್ತೆಯಾಗಿದೆ ಎಂದು ವಿಪತ್ತು ನಿರ್ವಹಣೆಯ ಹಿರಿಯ ಅಧಿಕಾರಿ ತಿಳಿಸಿದ್ದಾರೆ.</p>.<p>ಚೌರಾ ಗ್ರಾಮದ ಬಳಿ ಬುಧವಾರ ಸಂಭವಿಸಿದ ಭೂ ಕುಸಿತದಲ್ಲಿ ಇನ್ನೂ 15 ಮಂದಿ ನಾಪತ್ತೆಯಾಗಿದ್ದು, ಅವರ ಪತ್ತೆಗಾಗಿ ರಕ್ಷಣಾ ಕಾರ್ಯಪಡೆಯವರು ಶುಕ್ರವಾರ ಬೆಳಿಗ್ಗೆಯಿಂದ ಪುನಃ ಶೋಧ ಕಾರ್ಯ ಆರಂಭಿಸಿದ್ದಾರೆ.</p>.<p>ರಕ್ಷಣಾ ಕಾರ್ಯಪಡೆಯವರು ಬುಧವಾರ ಬೆಳಿಗ್ಗೆ ನಡೆಸಿದ ಶೋಧಕಾರ್ಯದಲ್ಲಿ ಭೂ ಕುಸಿತದ ಸ್ಥಳದಿಂದ 10 ಮೃತದೇಹಗಳನ್ನು ಹೊರತೆಗೆದರು. ಗುರವಾರ ನಾಲ್ಕು ಶವಗಳು ಪತ್ತೆಯಾದವು. ಈ ನಡುವೆ ಬುಧವಾರದಂದು 13 ಜನರನ್ನು ರಕ್ಷಿಸಲಾಯಿತು.</p>.<p><strong>ಇದನ್ನೂ ಓದಿ:</strong><a href="https://cms.prajavani.net/india-news/10-dead-in-himachal-pradesh-landslide-857019.html" itemprop="url">ಹಿಮಾಚಲ ಪ್ರದೇಶ: ಭೂಕುಸಿತ: 10 ಸಾವು, 30 ಜನ ನಾಪತ್ತೆ </a></p>.<p>ಅಧಿಕಾರಿಗಳು ಗುರುವಾರ ರಾತ್ರಿ ಶೋಧಕಾರ್ಯವನ್ನು ಸ್ಥಗಿತಗೊಳಿಸಿದ್ದರು. ‘ಶುಕ್ರವಾರ ಬೆಳಿಗ್ಗೆ 5.30ರಿಂದ ಪುನಃ ಕಾರ್ಯಾಚರಣೆಯನ್ನು ಆರಂಭಿಸಿದ್ದೇವೆ‘ ಎಂದು ರಾಜ್ಯ ವಿಪತ್ತು ನಿರ್ವಹಣಾ ಸಂಸ್ಥೆಯ ನಿರ್ದೇಶಕ ಸುದೇಶ್ ಕುಮಾರ್ ಮೊಖ್ತಾ ತಿಳಿಸಿದ್ದಾರೆ.</p>.<p>‘ಒಂದು ಬೊಲೆರೊ ಮತ್ತು ಅದರೊಳಗಿದ್ದ ಪ್ರಯಾಣಿಕರು ಅವಶೇಷಗಳ ಅಡಿಯಲ್ಲಿ ಸಿಲುಕಿದ್ದಾರೆ ಎಂದು ಅಂದಾಜಿಸಲಾಗಿತ್ತು. ಆದರೆ, ವಾಹನವು ಮಣ್ಣಿನ ಅವಶೇಷಗಳೊಂದಿಗೆ ಉರುಳಿಬಿದ್ದಿರುವ ಸಾಧ್ಯತೆಯಿದೆ‘ ಎಂದು ಮೊಖ್ತಾ ಹೇಳಿದರು.</p>.<p><strong>ಇದನ್ನೂ ಓದಿ:</strong><a href="https://cms.prajavani.net/india-news/himachal-pradesh-landslide-death-toll-raised-at-kinnaur-857037.html" itemprop="url">ಹಿಮಾಚಲ ಪ್ರದೇಶ ಭೂಕುಸಿತ: ಮತ್ತೆ 3 ಶವಗಳು ಪತ್ತೆ; ಮೃತರ ಸಂಖ್ಯೆ 13ಕ್ಕೆ ಏರಿಕೆ </a></p>.<p>ಭೂ ಕುಸಿತವಾದ ಸ್ಥಳದಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್ಡಿಆರ್ಎಫ್), ಭಾರತ-ಟಿಬೆಟ್ ಗಡಿ ಪೋಲಿಸ್ (ಐಟಿಬಿಪಿ), ಸ್ಥಳೀಯ ಪೊಲೀಸ್ ಮತ್ತು ಹೋಮ್ ಗಾರ್ಡ್ ಸದಸ್ಯರು ಜಂಟಿಯಾಗಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>