ಇತ್ತೀಚೆಗೆ ಸುರಿದ ಭಾರಿ ಮಳೆಯಿಂದಾಗಿ ಸಂಭವಿಸಿದ ಭೂಕುಸಿತ, ಪ್ರವಾಹದಿಂದ 13 ಮಂದಿ ಮೃತರಾಗಿದ್ದಾರೆ. ಈ ಪೈಕಿ 7 ಮಹಿಳೆಯರು ಮತ್ತು 6 ಪುರುಷರು ಸೇರಿದ್ದಾರೆ. ಕಾಣೆಯಾಗಿರುವ ಇನ್ನಿಬ್ಬರ ಸುಳಿವು ಸಿಕ್ಕಿಲ್ಲ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ(ಎನ್ಡಿಆರ್ಎಫ್) ರಕ್ಷಣಾ ಕಾರ್ಯಾಚರಣೆ ಮುಂದುವರಿಸಿದೆ ಎಂದು ಹಿಮಾಚಲ ಪ್ರದೇಶದ ವಿಪತ್ತು ನಿರ್ವಹಣಾ ಪಡೆಯ ನಿರ್ದೇಶಕ ಸುದೇಶ್ ಕುಮಾರ್ ಮೊಖ್ತಾ ತಿಳಿಸಿದ್ದಾರೆ.