ನವದೆಹಲಿ: ಹಿಮ ಕುಸಿತ, ಭೂಕುಸಿತ ಮತ್ತು ಹಿಮನದಿಗಳಿಂದ ಉಂಟಾಗುವ ದಿಢೀರ್ ಪ್ರವಾಹ ಸೇರಿದಂತೆ ಇನ್ನಿತರ ಪ್ರಾಕೃತಿಕ ವಿಕೋಪಗಳ ಸಂದರ್ಭದಲ್ಲಿ ತ್ವರಿತ ರಕ್ಷಣಾ ಕಾರ್ಯಾಚರಣೆ ನಡೆಸಲು ಅನುವಾಗುವ ಉದ್ದೇಶದಿಂದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯು (ಎನ್ಡಿಆರ್ಎಫ್) ಹಿಮಾಲಯದ ಅತಿ ಎತ್ತರದ ಪ್ರದೇಶಗಳಲ್ಲಿ ನುರಿತ ಪರ್ವತಾರೋಹಿಗಳ ತಂಡವನ್ನು ನಿಯೋಜಿಸಲು ನಿರ್ಧರಿಸಿದೆ.