ವ್ಯಾಟ್ಸ್ಆ್ಯಪ್ನಲ್ಲಿ ಪ್ರಸಾರವಾದ ವಿಡಿಯೊದಲ್ಲಿ ಗುಪ್ತಾ ಅವರು ಹಿಂದಿ ಭಾಷೆಯಲ್ಲಿ, ‘ಜೆಎನ್ಯು ಕ್ಯಾಂಪಸ್ನಲ್ಲಿ ನಿತ್ಯವೂ ಕೇಸರಿ ಬಣ್ಣಕ್ಕೆ ಅವಮಾನ ಮಾಡಲಾಗುತ್ತಿದೆ. ಇದನ್ನು ಮಾಡುತ್ತಿರುವವರಿಗೆ ಎಚ್ಚರಿಕೆ ನೀಡಲು ನಾವು ಬಯಸುತ್ತೇವೆ. ನಾವು ಇದನ್ನು ಸಹಿಸುವುದಿಲ್ಲ. ನಾವು ನಿಮ್ಮ ಸಿದ್ಧಾಂತ ಮತ್ತು ಪ್ರತಿಯೊಂದು ಧರ್ಮವನ್ನೂ ಗೌರವಿಸುತ್ತೇವೆ. ಆದರೆ, ಕೇಸರಿಗೆ ಅವಮಾನ ಮಾಡಿದರೆ ಕಠಿಣ ಕ್ರಮ ಎದುರಿಸಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದ್ದಾರೆ.