ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿಂದೂಗಳು ಯಾರ ವಿರೋಧಿಗಳು ಅಲ್ಲ: ಮೋಹನ್ ಭಾಗವತ್

Last Updated 10 ಫೆಬ್ರುವರಿ 2022, 1:37 IST
ಅಕ್ಷರ ಗಾತ್ರ

ಹೈದರಾಬಾದ್: ಹಿಂದೂಗಳು ಯಾರ ವಿರೋಧಿಗಳು ಅಲ್ಲ. ಹಿಂದೂಗಳು ಎಷ್ಟು ಶಕ್ತರೆಂದರೆ ಅವರ ವಿರುದ್ಧ ನಿಲ್ಲುವ ಶಕ್ತಿ ಯಾರಿಗೂ ಇಲ್ಲ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.

ಹಿಂದೂ ಧರ್ಮ ಶತಮಾನಗಳಿಂದ ತನ್ನ ಅಸ್ತಿತ್ವವನ್ನು ಉಳಿಸಿಕೊಂಡು ಬಂದಿದ್ದು, ಪ್ರಗತಿ ಸಾಧಿಸಿದೆ ಎಂದವರು ಹೇಳಿದರು.

'ಶತಮಾನದಿಂದ ವಿಶ್ವದಾದ್ಯಂತ ಹಿಂದೂಗಳನ್ನು ನಾಶ ಮಾಡಲು ಪ್ರಯತ್ನಿಸಿದವರು ತಮ್ಮಲ್ಲೇ ಜಗಳವಾಡುತ್ತಿದ್ದಾರೆ. ನಮ್ಮನ್ನು ನಾಶ ಮಾಡಲು ಪ್ರಯತ್ನಿಸಲಾಯಿತು. ಆದರೆ ಅದು ಸಫಲವಾಗಲಿಲ್ಲ. ಇಂದಿಗೂ ಭಾರತದ ಸನಾತನ ಧಾರ್ಮಿಕ ಜೀವನವನ್ನು ಯಥಾಸ್ಥಿತಿಯಲ್ಲಿ ಕಾಣಬಹುದು. ಇಷ್ಟೆಲ್ಲ ದೌರ್ಜನ್ಯಗಳ ನಡುವೆಯೂ ನಮ್ಮಲ್ಲಿ 'ಮಂತ್ರ ಭೂಮಿ' ಇದೆ. ನಮ್ಮಲ್ಲಿ ಸಾಕಷ್ಟು ಸಂಪನ್ಮೂಲಗಳು ಇರುವಾಗ ಏಕೆ ಭಯಪಡಬೇಕು? ಏಕೆಂದರೆ ನಮ್ಮನ್ನು ನಾವು ಮರೆಯುತ್ತೇವೆ. ಜೀವನದ ಬಗೆಗಿನ ನಮ್ಮ ಸಮಗ್ರ ದೃಷ್ಟಿಕೋನವನ್ನು ಮರೆತಿರುವುದು ದೌರ್ಬಲ್ಯಕ್ಕೆ ಕಾರಣವಾಗಿದೆ' ಎಂದು ತಿಳಿಸಿದರು.

'ಅನೇಕ ದಾಳಿ, ದೌರ್ಜನ್ಯಕ್ಕೆ ಒಳಗಾಗಿರುವ ಹೊರತಾಗಿಯೂ ಹಿಂದೂಗಳು ಶೇ 80ರಷ್ಟು ಇದ್ದೇವೆ. ದೇಶದಲ್ಲಿ ಆಡಳಿತ, ರಾಜಕೀಯ ನಡೆಸುತ್ತಿರುವವರಲ್ಲಿ ಹೆಚ್ಚಿನವರು ಹಿಂದೂಗಳು. ಇಂದಿಗೂ ದೇಶದಲ್ಲಿ ದೇವಸ್ಥಾನಗಳನ್ನು ನಿರ್ಮಿಸಲಾಗುತ್ತಿದೆ. ನಮ್ಮ ಸಂಪ್ರದಾಯಗಳು ನಮಗೆ ಕಲಿಸಿದ್ದು ಶಾಶ್ವತವಾಗಿದೆ' ಎಂದು ಹೇಳಿದರು.

'ಕುಟುಂಬ, ಪಂಥ, ಜಾತಿ, ಭಾಷೆಗಿಂತಲೂ ಮಿಗಿಲಾಗಿ ರಾಷ್ಟ್ರೀಯ ಹಿತಾಸಕ್ತಿಗೆ ಮೊದಲ ಆದ್ಯತೆ ನೀಡಬೇಕು. 'ಹಿಂದೂ ಹಿತ ಅಂದರೆ ರಾಷ್ಟ್ರ ಹಿತ'. ಈ ಮೂಲಕ ಬಲಿಷ್ಠ ಹಾಗೂ ಸಮರ್ಥ ರಾಷ್ಟ್ರವಾಗಲು ಸಾಧ್ಯ' ಎಂದು ಉಲ್ಲೇಖಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT