<p><strong>ಸಿಂಧ್:</strong> ಪಾಕಿಸ್ತಾನದ ಆಗ್ನೇಯ ಸಿಂಧ್ ಪ್ರಾಂತ್ಯದಲ್ಲಿ ವ್ಯಕ್ತಿಯೊಬ್ಬ ಹಿಂದು ದೇಗುಲ ಧ್ವಂಸ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಶನಿವಾರ ಬದಿನ್ ಜಿಲ್ಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ಅಲ್ಲದೆ, ಪ್ರಕರಣವನ್ನೂ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿರುವುದಾಗಿ ‘ದಿ ಎಕ್ಸ್ಪ್ರೆಸ್ ಟ್ರಿಬ್ಯೂನ್’ ವರದಿ ಮಾಡಿದೆ.</p>.<p>ಬದಿನ್ ಜಿಲ್ಲೆಯ ತಾತ್ಕಾಲಿಕ ದೇವಾಲಯದಲ್ಲಿ ಇರಿಸಲಾಗಿದ್ದ ವಿಗ್ರಹಗಳನ್ನು ಮುಹಮ್ಮದ್ ಇಸ್ಮಾಯಿಲ್ ಎಂಬಾತ ಭಗ್ನಗೊಳಿಸಿ ಪರಾರಿಯಾಗಿದ್ದಾನೆ ಎಂದು ಅಶೋಕ್ ಕುಮಾರ್ ಎಂಬುವವರು ದೂರು ನೀಡಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.</p>.<p>ದೂರು ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಬದಿನ್ ಪೊಲೀಸ್ ವಕ್ತಾರರು ತಿಳಿಸಿದ್ದಾರೆ.<br />‘ಇಸ್ಮಾಯಿಲ್ ಮಾನಸಿಕವಾಗಿ ಸ್ಥಿರವಾಗಿದ್ದಾನೆಯೇ, ಮೂರ್ತಿಗಳನ್ನು ಉದ್ದೇಶಪೂರ್ವಕವಾಗಿ ನಾಶಪಡಿಸಿದ್ದಾನೆಯೇ ಎಂಬುದನ್ನು ನಾವು ಇನ್ನಷ್ಟೇ ಖಾತರಿಪಡಿಸಿಕೊಳ್ಳಬೇಕಿದೆ,’ ಎಂದು ಅಧಿಕಾರಿ ಹೇಳಿದರು.</p>.<p>ಈ ಮಧ್ಯೆ, ಬಾದಿನ್ ಪೊಲೀಸ್ ವರಿಷ್ಠಾಧಿಕಾರಿ ಶಬೀರ್ ಸೇಥರ್ 24 ಗಂಟೆಗಳ ಒಳಗೆ ತನಿಖಾ ವರದಿ ನೀಡಲು ಸ್ಥಳೀಯ ಪೊಲೀಸರಿಗೆ ಸೂಚನೆ ನೀಡಿದ್ದಾರೆ.</p>.<p>ಹಿಂದುಗಳು ಪಾಕಿಸ್ತಾನದ ಅತಿದೊಡ್ಡ ಅಲ್ಪಸಂಖ್ಯಾತ ಸಮುದಾಯವಾಗಿದೆ.</p>.<p>ಅಧಿಕೃತ ಅಂಕಿ ಅಂಶಗಳ ಪ್ರಕಾರ, 75 ಲಕ್ಷ ಹಿಂದುಗಳು ಪಾಕಿಸ್ತಾನದಲ್ಲಿ ವಾಸಿಸುತ್ತಿದ್ದಾರೆ, ಈ ಪೈಕಿ ಬಹುತೇಕರು ಸಿಂಧ್ ಪ್ರಾಂತ್ಯದಕ್ಕೇ ನೆಲೆಸಿದ್ದಾರೆ.</p>.<p>ಸಿಂಧ್ನ ಪ್ರಾಂತ್ಯದಲ್ಲಿ ಅಲ್ಪಸಂಖ್ಯಾತರ ವಿರುದ್ಧದ ಹಿಂಸಾಚಾರದಂಥ ಘಟನೆಗಳು ಆಗಾಗ್ಗೆ ವರದಿಯಾಗುತ್ತಿರುತ್ತವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿಂಧ್:</strong> ಪಾಕಿಸ್ತಾನದ ಆಗ್ನೇಯ ಸಿಂಧ್ ಪ್ರಾಂತ್ಯದಲ್ಲಿ ವ್ಯಕ್ತಿಯೊಬ್ಬ ಹಿಂದು ದೇಗುಲ ಧ್ವಂಸ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಶನಿವಾರ ಬದಿನ್ ಜಿಲ್ಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ಅಲ್ಲದೆ, ಪ್ರಕರಣವನ್ನೂ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿರುವುದಾಗಿ ‘ದಿ ಎಕ್ಸ್ಪ್ರೆಸ್ ಟ್ರಿಬ್ಯೂನ್’ ವರದಿ ಮಾಡಿದೆ.</p>.<p>ಬದಿನ್ ಜಿಲ್ಲೆಯ ತಾತ್ಕಾಲಿಕ ದೇವಾಲಯದಲ್ಲಿ ಇರಿಸಲಾಗಿದ್ದ ವಿಗ್ರಹಗಳನ್ನು ಮುಹಮ್ಮದ್ ಇಸ್ಮಾಯಿಲ್ ಎಂಬಾತ ಭಗ್ನಗೊಳಿಸಿ ಪರಾರಿಯಾಗಿದ್ದಾನೆ ಎಂದು ಅಶೋಕ್ ಕುಮಾರ್ ಎಂಬುವವರು ದೂರು ನೀಡಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.</p>.<p>ದೂರು ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಬದಿನ್ ಪೊಲೀಸ್ ವಕ್ತಾರರು ತಿಳಿಸಿದ್ದಾರೆ.<br />‘ಇಸ್ಮಾಯಿಲ್ ಮಾನಸಿಕವಾಗಿ ಸ್ಥಿರವಾಗಿದ್ದಾನೆಯೇ, ಮೂರ್ತಿಗಳನ್ನು ಉದ್ದೇಶಪೂರ್ವಕವಾಗಿ ನಾಶಪಡಿಸಿದ್ದಾನೆಯೇ ಎಂಬುದನ್ನು ನಾವು ಇನ್ನಷ್ಟೇ ಖಾತರಿಪಡಿಸಿಕೊಳ್ಳಬೇಕಿದೆ,’ ಎಂದು ಅಧಿಕಾರಿ ಹೇಳಿದರು.</p>.<p>ಈ ಮಧ್ಯೆ, ಬಾದಿನ್ ಪೊಲೀಸ್ ವರಿಷ್ಠಾಧಿಕಾರಿ ಶಬೀರ್ ಸೇಥರ್ 24 ಗಂಟೆಗಳ ಒಳಗೆ ತನಿಖಾ ವರದಿ ನೀಡಲು ಸ್ಥಳೀಯ ಪೊಲೀಸರಿಗೆ ಸೂಚನೆ ನೀಡಿದ್ದಾರೆ.</p>.<p>ಹಿಂದುಗಳು ಪಾಕಿಸ್ತಾನದ ಅತಿದೊಡ್ಡ ಅಲ್ಪಸಂಖ್ಯಾತ ಸಮುದಾಯವಾಗಿದೆ.</p>.<p>ಅಧಿಕೃತ ಅಂಕಿ ಅಂಶಗಳ ಪ್ರಕಾರ, 75 ಲಕ್ಷ ಹಿಂದುಗಳು ಪಾಕಿಸ್ತಾನದಲ್ಲಿ ವಾಸಿಸುತ್ತಿದ್ದಾರೆ, ಈ ಪೈಕಿ ಬಹುತೇಕರು ಸಿಂಧ್ ಪ್ರಾಂತ್ಯದಕ್ಕೇ ನೆಲೆಸಿದ್ದಾರೆ.</p>.<p>ಸಿಂಧ್ನ ಪ್ರಾಂತ್ಯದಲ್ಲಿ ಅಲ್ಪಸಂಖ್ಯಾತರ ವಿರುದ್ಧದ ಹಿಂಸಾಚಾರದಂಥ ಘಟನೆಗಳು ಆಗಾಗ್ಗೆ ವರದಿಯಾಗುತ್ತಿರುತ್ತವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>