‘ಕಳೆದ ತಿಂಗಳು ಜಹಾಂಗೀರಪುರದ ಜನತೆ ಪಾಲಿಗೆ ಕಷ್ಟಕರವಾಗಿತ್ತು. ಈದ್ ಉಲ್ ಫಿತ್ರ್ ಸಂದರ್ಭದಲ್ಲಿ ಕುಶಲ್ ಚೌಕದಲ್ಲಿ ಎರಡೂ ಧರ್ಮದವರು ಸೇರಿ ಹಬ್ಬದ ಸಂಭ್ರಮ ಹಂಚಿಕೊಂಡಿದ್ದೇವೆ. ಈ ಮೂಲಕ ಶಾಂತಿ ಮತ್ತು ಸಾಮರಸ್ಯದ ಸಂದೇಶ ಸಾರಿದ್ದೇವೆ. ಇದು ಜಹಾಂಗೀರಪುರದ ಜನರು ಹೇಗೆಭಾವೈಕ್ಯತೆಯಿಂದ ಬದುಕುತ್ತಾರೆ ಮತ್ತು ಅವರವರ ಧರ್ಮವನ್ನು ಹೇಗೆ ಗೌರವಿಸುತ್ತಾರೆ ಎಂಬುದಕ್ಕೆ ಸಾಕ್ಷಿಯಾಗಿದೆ ಎಂದು ಮುಸ್ಲಿಂ ಮುಖಂಡ ತಬ್ರೇಜ್ ಖಾನ್ ಹಾಗೂ ಹಿಂದೂ ಮುಖಂಡರಾದ ಇಂದ್ರಾಮಣಿ ತಿವಾರಿ ಹೇಳಿದರು.