ಶ್ರೀನಗರ: ಪ್ರಸ್ತುತ ಇರುವಂಥ ಸರ್ವಾಧಿಕಾರಿ ಆಡಳಿತದ ವಿರುದ್ಧ ನಿಂತಿರುವ ರಾಹುಲ್ ಗಾಂಧಿ ಅವರನ್ನು ಇತಿಹಾಸ ನೆನಪಿಸಿಕೊಳ್ಳಲಿದೆ ಎಂದು ಪೀಪಲ್ಸ್ ಡೆಮಾಕ್ರಟಿಕ್ ಪಕ್ಷ(ಪಿಡಿಪಿ) ಅಧ್ಯಕ್ಷೆ, ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಶನಿವಾರ ಹೇಳಿದರು.
‘ನವಭಾರತವು ಕೆಲವರ ಹಿಡಿತದಲ್ಲಿದೆ. ರಾಹುಲ್ ಗಾಂಧಿ ಅವರನ್ನು ಅಪಹಾಸ್ಯ ಮಾಡುವುದಷ್ಟೇ ನಿಮಗೆ ಬೇಕಾಗಿದೆ. ಆದರೆ ಇಂತಹ ಸಂದರ್ಭದಲ್ಲಿ ಸತ್ಯವನ್ನು ಹೇಳುವ ಧೈರ್ಯ ಮಾಡುವ ಏಕೈಕ ರಾಜಕಾರಣಿ ರಾಹುಲ್ ಗಾಂಧಿ’ ಎಂದು ಟ್ವೀಟ್ ಮೂಲಕ ಮುಫ್ತಿ ಶ್ಲಾಘಿಸಿದ್ದಾರೆ.
Ridicule Rahul Gandhi all you want but he’s the only politician who dares to speak the truth. Its a fact that new India is in the grip of a select few & crony capitalists. History will remember him for standing upto the present dictatorial regime.
ಮೂರು ಕೃಷಿ ಕಾಯ್ದೆಗಳ ವಿರುದ್ಧ ಹೋರಾಟ ನಡೆಸುತ್ತಿರುವ ಕೃಷಿ ಸಂಘಟನೆಗಳ ವಿರುದ್ಧ ಕೇಂದ್ರ ಸರ್ಕಾರವು ರಾಷ್ಟ್ರೀಯ ತನಿಖಾ ಸಂಸ್ಥೆಯನ್ನು ಛೂ ಬಿಟ್ಟಿದೆ’ ಎಂದು ಮತ್ತೊಂದು ಟ್ವೀಟ್ನಲ್ಲಿ ಮುಫ್ತಿ ಆರೋಪಿಸಿದ್ದಾರೆ.