<p><strong>ಶ್ರೀನಗರ</strong>: ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಶುಕ್ರವಾರ ಭದ್ರತಾ ಪಡೆಗಳು ಹಾಗೂ ಉಗ್ರರ ನಡುವಿನ ಗುಂಡಿನ ಚಕಮಕಿಯಲ್ಲಿ ಹಿಜ್ಬುಲ್–ಮುಜಾಹಿದ್ದೀನ್(ಎಚ್ಎಂ) ಸಂಘಟನೆಯ ಅತ್ಯುನ್ನತ ಕಮಾಂಡರ್ ಸೇರಿ ಮೂವರು ಉಗ್ರರು ಹತರಾಗಿದ್ದಾರೆ.</p>.<p>ಹಿಜ್ಬುಲ್ ಮುಜಾಹಿದ್ದೀನ್ ಕಮಾಂಡರ್ ಮೊಹಮ್ಮದ್ ಆಶ್ರಫ್ ಖಾನ್ ಅಲಿಯಾಸ್ ಮೌಲ್ವಿ (57), ಸ್ಥಳೀಯ ಉಗ್ರರಾದ ರೋಷನ್ ಜಮೀರ್ ಹಾಗೂ ರಫಿಕ್ ಅಹ್ಮದ್ ಹತ್ಯೆಯಾದವರು.</p>.<p>‘ಭಾರತೀಯ ಸೇನೆಯ 19–ರಾಷ್ಟ್ರೀಯ ರೈಫಲ್ಸ್, ಸಿಆರ್ಪಿಎಫ್ ಹಾಗೂ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಅನಂತನಾಗ್ ಜಿಲ್ಲೆಯ ಪಹಲ್ಗಾಮ್ ಸಮೀಪದ ಬಾಟ್ಕೂಟ್ ಎಂಬ ಅರಣ್ಯ ಪ್ರದೇಶದಲ್ಲಿ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಮೂವರು ಉಗ್ರರು ಹತರಾಗಿದ್ದಾರೆ’ ಎಂದು ಪೊಲೀಸರು ತಿಳಿಸಿದರು.</p>.<p>‘ದೀರ್ಘಕಾಲ ಉಗ್ರ ಚಟುವಟಿಕೆಯಲ್ಲಿ ತೊಡಗಿದ್ದ ಹಿಜ್ಬುಲ್–ಮುಜಾಹಿದ್ದೀನ್ ಸಂಘಟನೆಯ ಉಗ್ರ ಆಶ್ರಫ್ ಮೌಲ್ವಿ ಸೇರಿದಂತೆ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದ್ದು, ಯಾತ್ರಾ ಮಾರ್ಗದಲ್ಲಿ ನಡೆದ ಕಾರ್ಯಾಚರಣೆಯು ನಮಗೆ ಸಿಕ್ಕ ದೊಡ್ಡ ಯಶಸ್ಸು’ ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿದ್ದಾರೆ.</p>.<p>ಕಳೆದ ವರ್ಷ ಆಗಸ್ಟ್ 2 ರಂದು ಜಮ್ಮು–ಕಾಶ್ಮೀರ ಪೊಲೀಸರು ಬಿಡುಗಡೆ ಮಾಡಿದ್ದ ಟಾಪ್– 10 ಭಯೋತ್ಪಾದಕರ ಪಟ್ಟಿಯಲ್ಲಿ ಆತನ ಹೆಸರು ಕಾಣಿಸಿಕೊಂಡಿತ್ತು.ಎ++ ವರ್ಗದ ಉಗ್ರನಾಗಿರುವ ಅನಂತನಾಗ್ ಮೂಲದ ಮೌಲ್ವಿಯು 2013ರಿಂದ ಉಗ್ರ ಚಟುವಟಿಕೆಯಲ್ಲಿ ಸಕ್ರಿಯನಾಗಿದ್ದ.ಸ್ಥಳೀಯರನ್ನು ಉಗ್ರರ ಪಡೆಗೆ ಸೇರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ.2020ರಲ್ಲಿ ಪುಲ್ವಾಮಾ ಜಿಲ್ಲೆಯಲ್ಲಿ ಕಮಾಂಡರ್ ರಿಯಾಜ್ ನೈಕೂನನ್ನು ಭದ್ರತಾ ಪಡೆಗಳು ಹತ್ಯೆಗೈದ ನಂತರ ಹಿಜ್ಬುಲ್ ಮುಖ್ಯಸ್ಥನಾಗಿ ಮೌಲ್ವಿ ನೇಮಕಗೊಂಡಿದ್ದ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ</strong>: ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಶುಕ್ರವಾರ ಭದ್ರತಾ ಪಡೆಗಳು ಹಾಗೂ ಉಗ್ರರ ನಡುವಿನ ಗುಂಡಿನ ಚಕಮಕಿಯಲ್ಲಿ ಹಿಜ್ಬುಲ್–ಮುಜಾಹಿದ್ದೀನ್(ಎಚ್ಎಂ) ಸಂಘಟನೆಯ ಅತ್ಯುನ್ನತ ಕಮಾಂಡರ್ ಸೇರಿ ಮೂವರು ಉಗ್ರರು ಹತರಾಗಿದ್ದಾರೆ.</p>.<p>ಹಿಜ್ಬುಲ್ ಮುಜಾಹಿದ್ದೀನ್ ಕಮಾಂಡರ್ ಮೊಹಮ್ಮದ್ ಆಶ್ರಫ್ ಖಾನ್ ಅಲಿಯಾಸ್ ಮೌಲ್ವಿ (57), ಸ್ಥಳೀಯ ಉಗ್ರರಾದ ರೋಷನ್ ಜಮೀರ್ ಹಾಗೂ ರಫಿಕ್ ಅಹ್ಮದ್ ಹತ್ಯೆಯಾದವರು.</p>.<p>‘ಭಾರತೀಯ ಸೇನೆಯ 19–ರಾಷ್ಟ್ರೀಯ ರೈಫಲ್ಸ್, ಸಿಆರ್ಪಿಎಫ್ ಹಾಗೂ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಅನಂತನಾಗ್ ಜಿಲ್ಲೆಯ ಪಹಲ್ಗಾಮ್ ಸಮೀಪದ ಬಾಟ್ಕೂಟ್ ಎಂಬ ಅರಣ್ಯ ಪ್ರದೇಶದಲ್ಲಿ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಮೂವರು ಉಗ್ರರು ಹತರಾಗಿದ್ದಾರೆ’ ಎಂದು ಪೊಲೀಸರು ತಿಳಿಸಿದರು.</p>.<p>‘ದೀರ್ಘಕಾಲ ಉಗ್ರ ಚಟುವಟಿಕೆಯಲ್ಲಿ ತೊಡಗಿದ್ದ ಹಿಜ್ಬುಲ್–ಮುಜಾಹಿದ್ದೀನ್ ಸಂಘಟನೆಯ ಉಗ್ರ ಆಶ್ರಫ್ ಮೌಲ್ವಿ ಸೇರಿದಂತೆ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದ್ದು, ಯಾತ್ರಾ ಮಾರ್ಗದಲ್ಲಿ ನಡೆದ ಕಾರ್ಯಾಚರಣೆಯು ನಮಗೆ ಸಿಕ್ಕ ದೊಡ್ಡ ಯಶಸ್ಸು’ ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿದ್ದಾರೆ.</p>.<p>ಕಳೆದ ವರ್ಷ ಆಗಸ್ಟ್ 2 ರಂದು ಜಮ್ಮು–ಕಾಶ್ಮೀರ ಪೊಲೀಸರು ಬಿಡುಗಡೆ ಮಾಡಿದ್ದ ಟಾಪ್– 10 ಭಯೋತ್ಪಾದಕರ ಪಟ್ಟಿಯಲ್ಲಿ ಆತನ ಹೆಸರು ಕಾಣಿಸಿಕೊಂಡಿತ್ತು.ಎ++ ವರ್ಗದ ಉಗ್ರನಾಗಿರುವ ಅನಂತನಾಗ್ ಮೂಲದ ಮೌಲ್ವಿಯು 2013ರಿಂದ ಉಗ್ರ ಚಟುವಟಿಕೆಯಲ್ಲಿ ಸಕ್ರಿಯನಾಗಿದ್ದ.ಸ್ಥಳೀಯರನ್ನು ಉಗ್ರರ ಪಡೆಗೆ ಸೇರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ.2020ರಲ್ಲಿ ಪುಲ್ವಾಮಾ ಜಿಲ್ಲೆಯಲ್ಲಿ ಕಮಾಂಡರ್ ರಿಯಾಜ್ ನೈಕೂನನ್ನು ಭದ್ರತಾ ಪಡೆಗಳು ಹತ್ಯೆಗೈದ ನಂತರ ಹಿಜ್ಬುಲ್ ಮುಖ್ಯಸ್ಥನಾಗಿ ಮೌಲ್ವಿ ನೇಮಕಗೊಂಡಿದ್ದ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>