ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪದ್ಮವಿಭೂಷಣ, ಪದ್ಮಭೂಷಣ, ಮತ್ತು ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ 54 ಗಣ್ಯರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಬುಧವಾರ ಔತಣಕೂಟ ಏರ್ಪಡಿಸಿದ್ದರು.
2023 ರ ಗೌರವಾನ್ವಿತ ಪದ್ಮ ಪ್ರಶಸ್ತಿ ಪುರಸ್ಕೃರಿಗೆ ಔತಣಕೂಟವನ್ನು ಆಯೋಜಿಸಿರುವುದು ಸಂತೋಷವಾಗಿದೆ. ಅವರು ಆಯ್ಕೆ ಮಾಡಿಕೊಂಡಿರುವ ವೃತ್ತಿ ವಲಯದಲ್ಲಿ ಬಹಳ ಉತ್ಸಾಹವನ್ನು ಹೊಂದಿದ್ದಾರೆ. ಇಂತಹ ಅದ್ಭುತ ವ್ಯಕ್ತಿಗಳೊಂದಿಗಿನ ಮಾತುಕತೆ ಮಹತ್ವದ ಅನುಭವ ನೀಡಿದೆ ಎಂದು #PeoplesPadma ಹ್ಯಾಶ್ಟ್ಯಾಗ್ ಬಳಸಿ ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.
Had the pleasure of hosting a dinner for the esteemed Padma Awardees of 2023. It was a great experience to converse with these amazing individuals who are filled with so much enthusiasm for their chosen fields of work.#PeoplesPadmapic.twitter.com/2ik89RfQ4g
ಜನವರಿ 25 ರಂದು 106 ಗಣ್ಯರಿಗೆ ಪದ್ಮ ಪ್ರಶಸ್ತಿಗಳನ್ನು ಘೋಷಣೆ ಮಾಡಲಾಗಿತ್ತು.
ಮೂವರಿಗೆ ಪದ್ಮವಿಭೂಷಣ, ನಾಲ್ವರಿಗೆ ಪದ್ಮಭೂಷಣ ಹಾಗೂ 47 ಗಣ್ಯರಿಗೆ ಪದ್ಮಶ್ರೀ ಪ್ರಶಸ್ತಿ ಸೇರಿದಂತೆ 54 ಜನರಿಗೆ ಪ್ರಶಸ್ತಿ ಪ್ರಧಾನ ಮಾಡಲಾಗಿದೆ. ಉಳಿದ 52 ಗಣ್ಯರಿಗೆ ಮತ್ತೊಂದು ಕಾರ್ಯಕ್ರಮದಲ್ಲಿ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ.
ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್. ಎಂ ಕೃಷ್ಣ, ಖ್ಯಾತ ಕೈಗಾರಿಕೋದ್ಯಮಿ ಕುಮಾರ್ ಮಂಗಲಂ ಬಿರ್ಲಾ ಮತ್ತು ಜನಪ್ರಿಯ ಹಿನ್ನಲೆ ಗಾಯಕ ಸುಮನ್ ಕಲ್ಯಾಣ್ಪುರ ರಾಷ್ಟ್ರಪತಿಗಳಿಂದ ಸನ್ಮಾನಿಸಲ್ಪಟ್ಟ ಪ್ರಶಸ್ತಿ ಪುರಸ್ಕೃತರಾಗಿದ್ದಾರೆ.