<p class="bodytext"><strong>ನವದೆಹಲಿ</strong>: ಕೋವಿಡ್ ಚಿಕಿತ್ಸೆ ಔಷಧಗಳ ಅಕ್ರಮ ದಾಸ್ತಾನು, ವಿತರಣೆಗೆ ಸಂಬಂಧಿಸಿ ಬಿಜೆಪಿ ಸಂಸದ ಗೌತಮ್ ಗಂಭೀರ್ ಅವರ ಪ್ರತಿಷ್ಠಾನದ ವಿರುದ್ಧದ ತನಿಖೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.</p>.<p class="bodytext">ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್ ಮತ್ತು ಎಂ.ಆರ್.ಶಾ ಅವರಿದ್ದ ಪೀಠವು, ‘ಜನರು ಔಷಧಕ್ಕಾಗಿ ಪರಿತಪಿಸುತ್ತಿದ್ದ ವೇಳೆಯಲ್ಲಿ ಏಕಾಏಕಿ ಟ್ರಸ್ಟ್ ಮುಂದೆ ಬಂದು ಔಷಧ ಒದಗಿಸುವ ಭರವಸೆ ನೀಡುತ್ತದೆ’ ಎಂದಿತು.</p>.<p>‘ಇಂಥದ್ದು ಆಗಬಾರದು. ನಾವು ಈ ಬಗ್ಗೆ ಏನನ್ನೂ ಹೇಳಲು ಬಯಸುವುದಿಲ್ಲ’ ಎಂದೂ ಹೇಳಿದ ಪೀಠವು, ಸೂಕ್ತ ಪರಿಹಾರಕ್ಕಾಗಿ ದೆಹಲಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿತು.</p>.<p>ಪ್ರತಿಷ್ಠಾನವನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಕೈಲಾಶ್ ವಾಸುದೇವ್ ಅರ್ಜಿ ಸಲ್ಲಿಸಿದ್ದು, ಪೀಠದ ನಿರಾಕರಣೆಯನ್ನು ಗಮನಿಸಿ ನಂತರ ಅರ್ಜಿಯನ್ನು ಹಿಂತೆಗೆದುಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="bodytext"><strong>ನವದೆಹಲಿ</strong>: ಕೋವಿಡ್ ಚಿಕಿತ್ಸೆ ಔಷಧಗಳ ಅಕ್ರಮ ದಾಸ್ತಾನು, ವಿತರಣೆಗೆ ಸಂಬಂಧಿಸಿ ಬಿಜೆಪಿ ಸಂಸದ ಗೌತಮ್ ಗಂಭೀರ್ ಅವರ ಪ್ರತಿಷ್ಠಾನದ ವಿರುದ್ಧದ ತನಿಖೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.</p>.<p class="bodytext">ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್ ಮತ್ತು ಎಂ.ಆರ್.ಶಾ ಅವರಿದ್ದ ಪೀಠವು, ‘ಜನರು ಔಷಧಕ್ಕಾಗಿ ಪರಿತಪಿಸುತ್ತಿದ್ದ ವೇಳೆಯಲ್ಲಿ ಏಕಾಏಕಿ ಟ್ರಸ್ಟ್ ಮುಂದೆ ಬಂದು ಔಷಧ ಒದಗಿಸುವ ಭರವಸೆ ನೀಡುತ್ತದೆ’ ಎಂದಿತು.</p>.<p>‘ಇಂಥದ್ದು ಆಗಬಾರದು. ನಾವು ಈ ಬಗ್ಗೆ ಏನನ್ನೂ ಹೇಳಲು ಬಯಸುವುದಿಲ್ಲ’ ಎಂದೂ ಹೇಳಿದ ಪೀಠವು, ಸೂಕ್ತ ಪರಿಹಾರಕ್ಕಾಗಿ ದೆಹಲಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿತು.</p>.<p>ಪ್ರತಿಷ್ಠಾನವನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಕೈಲಾಶ್ ವಾಸುದೇವ್ ಅರ್ಜಿ ಸಲ್ಲಿಸಿದ್ದು, ಪೀಠದ ನಿರಾಕರಣೆಯನ್ನು ಗಮನಿಸಿ ನಂತರ ಅರ್ಜಿಯನ್ನು ಹಿಂತೆಗೆದುಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>