ಪೊಲೀಸರು ಮತ್ತು ಆಡಳಿತವು ಪ್ರತಿಭಟನೆ ನಡೆಸುತ್ತಿರುವ ರೈತರ ಮೇಲಿನ ದೌರ್ಜನ್ಯ ನಿಲ್ಲಿಸದೆ, ಬಂಧಿತ ರೈತ ನಾಯಕರ ಬಿಡುಗಡೆ ಮಾಡದೆ ಔಪಚಾರಿಕ ಮಾತುಕತೆ ನಡೆಸುವುದಿಲ್ಲ ಎಂಬ ರೈತ ಸಂಘಟನೆಗಳ ಹೇಳಿಕೆ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ಈ ಕುರಿತು ಅವರು ಪೊಲೀಸ್ ಆಯುಕ್ತರ ಬಳಿ ಮಾತುಕತೆ ನಡೆಸಲಿ. ಕಾನೂನು ಸುವ್ಯವಸ್ಥೆ ಬಗ್ಗೆ ನಾನು ಪ್ರತಿಕ್ರಿಯಿಸಲಾರೆ. ಅದು ನನಗೆ ಸಂಬಂಧಿಸಿದ್ದಲ್ಲ’ ಎಂದು ಹೇಳಿದ್ದಾರೆ.