<p><strong>ನವದೆಹಲಿ:</strong> ಪ್ರತಿಭಟನಾ ನಿರತ ರೈತರ ಜತೆ ಅನೌಪಚಾರಿಕ ಮಾತುಕತೆ ನಡೆಸುವುದಿಲ್ಲ ಎಂದು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ.</p>.<p>ಪ್ರತಿಭಟನಾ ಸ್ಥಳಗಳಲ್ಲಿ ಬ್ಯಾರಿಕೇಡ್ಗಳನ್ನು ಹಾಕಿರುವುದು ಮತ್ತು ಸುತ್ತಲಿನ ಪ್ರದೇಶಗಳಲ್ಲಿ ಅಂತರ್ಜಾಲ ಸೇವೆ ಸ್ಥಗಿತಗೊಳಿಸಿರುವುದು ಕಾನೂನು ಸುವ್ಯವಸ್ಥೆ ಕಾಪಾಡುವುದು, ಸ್ಥಳೀಯಾಡಳಿತಕ್ಕೆ ಸಂಬಂಧಿಸಿದ ವಿಚಾರ ಎಂದು ಅವರು ಹೇಳಿದ್ದಾರೆ.</p>.<p><strong>ಓದಿ:</strong><a href="https://www.prajavani.net/india-news/group-of-academicians-seeks-repeal-of-farm-laws-says-these-pose-major-threat-to-farming-communities-802024.html" itemprop="url">ನೂತನ ಕೃಷಿ ಕಾಯ್ದೆ ರದ್ದತಿಗೆ ಶಿಕ್ಷಣ ತಜ್ಞರು, ವಿದೇಶಿ ವಿ.ವಿ.ಗಳ ಒತ್ತಾಯ</a></p>.<p>ಪ್ರತಿಭಟನಾ ನಿರತ 41 ರೈತ ಸಂಘಟನೆಗಳ ಜತೆ ಜನವರಿ 22ರಂದು ಕೇಂದ್ರವು ನಡೆಸಿದ 11ನೇ ಸುತ್ತಿನ ಮಾತುಕತೆ ವಿಫಲವಾಗಿತ್ತು. ಕೃಷಿ ಕಾಯ್ದೆಗಳನ್ನು 18 ತಿಂಗಳ ಕಾಲ ಅಮಾನತಿನಲ್ಲಿಡುವ ಸರ್ಕಾರದ ಪ್ರಸ್ತಾವವನ್ನು ಪರಿಗಣಿಸುವಂತೆ ರೈತ ಮುಖಂಡರಿಗೆ ಸರ್ಕಾರ ಸೂಚಿಸಿತ್ತು.</p>.<p>ಮುಂದಿನ ಸುತ್ತಿನ ಮಾತುಕತೆ ನಡೆಸಲಾಗುತ್ತದೆಯೇ, ಸರ್ಕಾರವು ಅನೌಪಚಾರಿಕವಾಗಿ ಮಾತುಕತೆ ನಡೆಸಲಿದೆಯೇ ಎಂದು ಕೇಳಲಾದ ಪ್ರಶ್ನೆಗೆ ಸಚಿವರು ‘ಇಲ್ಲ’ ಎಂದು ಉತ್ತರಿಸಿದ್ದಾರೆ.</p>.<p>‘ಔಪಚಾರಿಕ ಮಾತುಕತೆ ಯಾವಾಗ ನಡೆಯಲಿದೆ ಎಂಬ ಬಗ್ಗೆ ಮಾಹಿತಿ ನೀಡಲಿದ್ದೇವೆ’ ಎಂದೂ ಸಚಿವರು ತಿಳಿಸಿದ್ದಾರೆ.</p>.<p><strong>ಓದಿ:</strong><a href="https://www.prajavani.net/india-news/ascertain-facts-before-commenting-mea-reacts-to-rihanna-greta-thunbergs-remarks-802017.html" itemprop="url">ಹೇಳಿಕೆ ನೀಡುವ ಮುನ್ನ ವಾಸ್ತವ ತಿಳಿಯಿರಿ: ವಿದೇಶಿ ಗಣ್ಯರಿಗೆ ವಿದೇಶಾಂಗ ಸಚಿವಾಲಯ</a></p>.<p>ಪೊಲೀಸರು ಮತ್ತು ಆಡಳಿತವು ಪ್ರತಿಭಟನೆ ನಡೆಸುತ್ತಿರುವ ರೈತರ ಮೇಲಿನ ದೌರ್ಜನ್ಯ ನಿಲ್ಲಿಸದೆ, ಬಂಧಿತ ರೈತ ನಾಯಕರ ಬಿಡುಗಡೆ ಮಾಡದೆ ಔಪಚಾರಿಕ ಮಾತುಕತೆ ನಡೆಸುವುದಿಲ್ಲ ಎಂಬ ರೈತ ಸಂಘಟನೆಗಳ ಹೇಳಿಕೆ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ಈ ಕುರಿತು ಅವರು ಪೊಲೀಸ್ ಆಯುಕ್ತರ ಬಳಿ ಮಾತುಕತೆ ನಡೆಸಲಿ. ಕಾನೂನು ಸುವ್ಯವಸ್ಥೆ ಬಗ್ಗೆ ನಾನು ಪ್ರತಿಕ್ರಿಯಿಸಲಾರೆ. ಅದು ನನಗೆ ಸಂಬಂಧಿಸಿದ್ದಲ್ಲ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಪ್ರತಿಭಟನಾ ನಿರತ ರೈತರ ಜತೆ ಅನೌಪಚಾರಿಕ ಮಾತುಕತೆ ನಡೆಸುವುದಿಲ್ಲ ಎಂದು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ.</p>.<p>ಪ್ರತಿಭಟನಾ ಸ್ಥಳಗಳಲ್ಲಿ ಬ್ಯಾರಿಕೇಡ್ಗಳನ್ನು ಹಾಕಿರುವುದು ಮತ್ತು ಸುತ್ತಲಿನ ಪ್ರದೇಶಗಳಲ್ಲಿ ಅಂತರ್ಜಾಲ ಸೇವೆ ಸ್ಥಗಿತಗೊಳಿಸಿರುವುದು ಕಾನೂನು ಸುವ್ಯವಸ್ಥೆ ಕಾಪಾಡುವುದು, ಸ್ಥಳೀಯಾಡಳಿತಕ್ಕೆ ಸಂಬಂಧಿಸಿದ ವಿಚಾರ ಎಂದು ಅವರು ಹೇಳಿದ್ದಾರೆ.</p>.<p><strong>ಓದಿ:</strong><a href="https://www.prajavani.net/india-news/group-of-academicians-seeks-repeal-of-farm-laws-says-these-pose-major-threat-to-farming-communities-802024.html" itemprop="url">ನೂತನ ಕೃಷಿ ಕಾಯ್ದೆ ರದ್ದತಿಗೆ ಶಿಕ್ಷಣ ತಜ್ಞರು, ವಿದೇಶಿ ವಿ.ವಿ.ಗಳ ಒತ್ತಾಯ</a></p>.<p>ಪ್ರತಿಭಟನಾ ನಿರತ 41 ರೈತ ಸಂಘಟನೆಗಳ ಜತೆ ಜನವರಿ 22ರಂದು ಕೇಂದ್ರವು ನಡೆಸಿದ 11ನೇ ಸುತ್ತಿನ ಮಾತುಕತೆ ವಿಫಲವಾಗಿತ್ತು. ಕೃಷಿ ಕಾಯ್ದೆಗಳನ್ನು 18 ತಿಂಗಳ ಕಾಲ ಅಮಾನತಿನಲ್ಲಿಡುವ ಸರ್ಕಾರದ ಪ್ರಸ್ತಾವವನ್ನು ಪರಿಗಣಿಸುವಂತೆ ರೈತ ಮುಖಂಡರಿಗೆ ಸರ್ಕಾರ ಸೂಚಿಸಿತ್ತು.</p>.<p>ಮುಂದಿನ ಸುತ್ತಿನ ಮಾತುಕತೆ ನಡೆಸಲಾಗುತ್ತದೆಯೇ, ಸರ್ಕಾರವು ಅನೌಪಚಾರಿಕವಾಗಿ ಮಾತುಕತೆ ನಡೆಸಲಿದೆಯೇ ಎಂದು ಕೇಳಲಾದ ಪ್ರಶ್ನೆಗೆ ಸಚಿವರು ‘ಇಲ್ಲ’ ಎಂದು ಉತ್ತರಿಸಿದ್ದಾರೆ.</p>.<p>‘ಔಪಚಾರಿಕ ಮಾತುಕತೆ ಯಾವಾಗ ನಡೆಯಲಿದೆ ಎಂಬ ಬಗ್ಗೆ ಮಾಹಿತಿ ನೀಡಲಿದ್ದೇವೆ’ ಎಂದೂ ಸಚಿವರು ತಿಳಿಸಿದ್ದಾರೆ.</p>.<p><strong>ಓದಿ:</strong><a href="https://www.prajavani.net/india-news/ascertain-facts-before-commenting-mea-reacts-to-rihanna-greta-thunbergs-remarks-802017.html" itemprop="url">ಹೇಳಿಕೆ ನೀಡುವ ಮುನ್ನ ವಾಸ್ತವ ತಿಳಿಯಿರಿ: ವಿದೇಶಿ ಗಣ್ಯರಿಗೆ ವಿದೇಶಾಂಗ ಸಚಿವಾಲಯ</a></p>.<p>ಪೊಲೀಸರು ಮತ್ತು ಆಡಳಿತವು ಪ್ರತಿಭಟನೆ ನಡೆಸುತ್ತಿರುವ ರೈತರ ಮೇಲಿನ ದೌರ್ಜನ್ಯ ನಿಲ್ಲಿಸದೆ, ಬಂಧಿತ ರೈತ ನಾಯಕರ ಬಿಡುಗಡೆ ಮಾಡದೆ ಔಪಚಾರಿಕ ಮಾತುಕತೆ ನಡೆಸುವುದಿಲ್ಲ ಎಂಬ ರೈತ ಸಂಘಟನೆಗಳ ಹೇಳಿಕೆ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ಈ ಕುರಿತು ಅವರು ಪೊಲೀಸ್ ಆಯುಕ್ತರ ಬಳಿ ಮಾತುಕತೆ ನಡೆಸಲಿ. ಕಾನೂನು ಸುವ್ಯವಸ್ಥೆ ಬಗ್ಗೆ ನಾನು ಪ್ರತಿಕ್ರಿಯಿಸಲಾರೆ. ಅದು ನನಗೆ ಸಂಬಂಧಿಸಿದ್ದಲ್ಲ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>