ಹೈದರಾಬಾದ್: ಕೋವಿಡ್ ಪ್ರಕರಣಗಳು ಏರುತ್ತಿರುವ ಹಿನ್ನೆಲೆಯಲ್ಲಿ ತೆಲಂಗಾಣದ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಜನವರಿ 8 ರಿಂದ 16 ರವರೆಗೆ ರಜೆ ಘೋಷಿಸಲಾಗಿದೆ.
ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಸೋಮವಾರ ಈ ಘೋಷಣೆ ಮಾಡಿದ್ದಾರೆ.
ತೆಲಂಗಾಣದಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳ ಕುರಿತು ಸಚಿವರು ಮತ್ತು ಅಧಿಕಾರಿಗಳೊಂದಿಗೆ ರಾವ್ ಸೋಮವಾರ ಸಭೆ ನಡೆಸಿದರು. ಕೋವಿಡ್ ಎದುರಿಸಲು ಬೆಡ್, ಆಕ್ಸಿಜನ್ ಬೆಡ್, ಔಷಧಿಗಳು ಮತ್ತು ಪರೀಕ್ಷಾ ಕಿಟ್ಗಳನ್ನು ಖರೀದಿಸಬೇಕು ಎಂದು ಅವರು ಅಧಿಕಾರಿಗಳಿಗೆ ತಿಳಿಸಿದ್ದಾರೆ.
ಸಾಮಾನ್ಯ ಜನರಿಗೆ ವೈದ್ಯಕೀಯ ಸೇವೆಗಳನ್ನು ಒದಗಿಸಲು ರಾಜ್ಯದಾದ್ಯಂತ ಹೆಚ್ಚಿನ ವಸತಿ ಪ್ರದೇಶಗಳಲ್ಲಿ ಕ್ಲಿನಿಕ್ಗಳನ್ನು ಸ್ಥಾಪಿಸಲು ಮುಖ್ಯಮಂತ್ರಿ ನಿರ್ಧರಿಸಿದ್ದಾರೆ ಎಂದು ಸರ್ಕಾರದ ಪ್ರಕಟಣೆಯಲ್ಲಿ ಹೇಳಲಾಗಿದೆ.
ಕೇಂದ್ರದ ಮಾರ್ಗಸೂಚಿಗಳ ಪ್ರಕಾರ ಸದ್ಯಕ್ಕೆ ಲಾಕ್ಡೌನ್ ಅಗತ್ಯವಿಲ್ಲ ಎಂದು ಸಭೆಯಲ್ಲಿ ಆರೋಗ್ಯ ಅಧಿಕಾರಿಗಳು ರಾವ್ ಅವರಿಗೆ ತಿಳಿಸಿದರು.