ಆಗಸ್ಟ್ 2ರಂದು ಕೊರೊನಾ ವೈರಸ್ ಸೋಂಕು ತಗುಲಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಬಳಿಕ ಆಗಸ್ಟ್ 14ರಂದು ನಡೆಸಿದ ಸೋಂಕಿನ ಪರೀಕ್ಷಾ ವರದಿ ನೆಗೆಟಿವ್ ಬಂದಿದ್ದರಿಂದ ಗುರುಗ್ರಾಮದಲ್ಲಿರುವ ಮೆದಾಂತ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು. ಬಳಿಕ ಬಳಲಿಕೆ ಮತ್ತು ಮೈಕೈ ನೋವಿಂದಾಗಿ ಅವರನ್ನು ಮತ್ತೆ ಏಮ್ಸ್ಗೆ ದಾಖಲಿಸಲಾಗಿತ್ತು.