ಕೇಂದ್ರ ಸರ್ಕಾರ ಅಂಗೀಕರಿಸಿರುವ ಮೂರು ಕೃಷಿ ಸುಧಾರಣಾ ಕಾನೂನುಗಳನ್ನು ಸಂಪೂರ್ಣವಾಗಿ ರದ್ದುಗೊಳಿಸಬೇಕು ಎಂದು ಕಳೆದ 17 ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ರೈತರು, ಇಂದು ದೆಹಲಿ–ಜೈಪುರ ಹೆದ್ದಾರಿ ಬಂದ್ ಮಾಡಲು ನಿರ್ಧರಿಸಿದ್ದಾರೆ. ಹಾಗೆಯೇ ಸೋಮವಾರ (ಡಿ.14) ರಾಷ್ಟ್ರವ್ಯಾಪಿ ಪ್ರತಿಭಟನೆ ವಿಸ್ತರಿಸಲು ಯೋಜಿಸಿದ್ದಾರೆ.