<p><strong>ನವದೆಹಲಿ</strong>: ಅಧಿಕಾರ ದುರ್ಬಳಕೆ ಮತ್ತು ಸೇವಾ ನಿಯಮಗಳನ್ನು ಉಲ್ಲಂಘಿಸಿದ ಆರೋಪದ ಹಿನ್ನೆಲೆಯಲ್ಲಿ ಸಿಬಿಐ ಮಾಜಿ ನಿರ್ದೇಶಕ ಅಲೋಕ್ ವರ್ಮಾ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಕೇಂದ್ರ ಗೃಹ ಸಚಿವಾಲಯ ಶಿಫಾರಸು ಮಾಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>"ಈ ಕುರಿತು ಕೇಂದ್ರ ಗೃಹ ಸಚಿವಾಲಯವು ಸಿಬ್ಬಂದಿ ಮತ್ತು ತರಬೇತಿ ಇಲಾಖೆಗೆ(ಡಿಒಪಿಟಿ) ಪತ್ರ ಬರೆದಿದ್ದು, ಅಲೋಕ್ ವರ್ಮಾ ವಿರುದ್ಧ ಅಗತ್ಯ ಶಿಸ್ತು ಕ್ರಮಕೈಗೊಳ್ಳುವಂತೆ ಸೂಚಿಸಿದೆ‘ ಎಂದು ಅವರು ಹೇಳಿದ್ದಾರೆ.</p>.<p>ಡಿಒಪಿಟಿ ಇಲಾಖೆಯು ಗೃಹ ಸಚಿವಾಲಯದ ಈ ಶಿಫಾರಸನ್ನು ಐಪಿಎಸ್ ಅಧಿಕಾರಿಗಳ ನೇಮಕಾತಿ ಸಂಸ್ಥೆಯಾದ ಕೇಂದ್ರ ಲೋಕಸೇವಾ ಆಯೋಗಕ್ಕೆ (ಯುಪಿಎಸ್ಸಿ) ರವಾನಿಸಿದೆ ಎಂದು ಅವರು ಹೇಳಿದ್ದಾರೆ.</p>.<p>ಒಂದೊಮ್ಮೆ ಗೃಹ ಸಚಿವಾಲಯದ ಈ ಕ್ರಮ ಅನುಮೋದನೆಗೊಂಡರೆ, ವರ್ಮಾ ಅವರ ಪಿಂಚಣಿ ಮತ್ತು ನಿವೃತ್ತಿಯ ನಂತರ ದೊರೆಯುವ ಸೌಲಭ್ಯಗಳನ್ನು ತಾತ್ಕಾಲಿಕ ಅಥವಾ ಶಾಶ್ವತವಾಗಿ ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳುವ ಸಾಧ್ಯತೆ ಇದೆ.</p>.<p>1979-ಬ್ಯಾಚ್ನ (ನಿವೃತ್ತ) ಐಪಿಎಸ್ ಅಧಿಕಾರಿ ವರ್ಮಾ, 2018ರಲ್ಲಿ ಸಿಬಿಐನಲ್ಲಿ ನಿರ್ದೇಶಕರಾಗಿದ್ದ ವೇಳೆ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಗುಜರಾತ್-ಕೇಡರ್ ಐಪಿಎಸ್ ಅಧಿಕಾರಿ ರಾಕೇಶ್ ಅಸ್ತಾನಾ ಅವರೊಂದಿಗೆ ಸಂಘರ್ಷ ನಡೆದಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಅಧಿಕಾರ ದುರ್ಬಳಕೆ ಮತ್ತು ಸೇವಾ ನಿಯಮಗಳನ್ನು ಉಲ್ಲಂಘಿಸಿದ ಆರೋಪದ ಹಿನ್ನೆಲೆಯಲ್ಲಿ ಸಿಬಿಐ ಮಾಜಿ ನಿರ್ದೇಶಕ ಅಲೋಕ್ ವರ್ಮಾ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಕೇಂದ್ರ ಗೃಹ ಸಚಿವಾಲಯ ಶಿಫಾರಸು ಮಾಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>"ಈ ಕುರಿತು ಕೇಂದ್ರ ಗೃಹ ಸಚಿವಾಲಯವು ಸಿಬ್ಬಂದಿ ಮತ್ತು ತರಬೇತಿ ಇಲಾಖೆಗೆ(ಡಿಒಪಿಟಿ) ಪತ್ರ ಬರೆದಿದ್ದು, ಅಲೋಕ್ ವರ್ಮಾ ವಿರುದ್ಧ ಅಗತ್ಯ ಶಿಸ್ತು ಕ್ರಮಕೈಗೊಳ್ಳುವಂತೆ ಸೂಚಿಸಿದೆ‘ ಎಂದು ಅವರು ಹೇಳಿದ್ದಾರೆ.</p>.<p>ಡಿಒಪಿಟಿ ಇಲಾಖೆಯು ಗೃಹ ಸಚಿವಾಲಯದ ಈ ಶಿಫಾರಸನ್ನು ಐಪಿಎಸ್ ಅಧಿಕಾರಿಗಳ ನೇಮಕಾತಿ ಸಂಸ್ಥೆಯಾದ ಕೇಂದ್ರ ಲೋಕಸೇವಾ ಆಯೋಗಕ್ಕೆ (ಯುಪಿಎಸ್ಸಿ) ರವಾನಿಸಿದೆ ಎಂದು ಅವರು ಹೇಳಿದ್ದಾರೆ.</p>.<p>ಒಂದೊಮ್ಮೆ ಗೃಹ ಸಚಿವಾಲಯದ ಈ ಕ್ರಮ ಅನುಮೋದನೆಗೊಂಡರೆ, ವರ್ಮಾ ಅವರ ಪಿಂಚಣಿ ಮತ್ತು ನಿವೃತ್ತಿಯ ನಂತರ ದೊರೆಯುವ ಸೌಲಭ್ಯಗಳನ್ನು ತಾತ್ಕಾಲಿಕ ಅಥವಾ ಶಾಶ್ವತವಾಗಿ ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳುವ ಸಾಧ್ಯತೆ ಇದೆ.</p>.<p>1979-ಬ್ಯಾಚ್ನ (ನಿವೃತ್ತ) ಐಪಿಎಸ್ ಅಧಿಕಾರಿ ವರ್ಮಾ, 2018ರಲ್ಲಿ ಸಿಬಿಐನಲ್ಲಿ ನಿರ್ದೇಶಕರಾಗಿದ್ದ ವೇಳೆ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಗುಜರಾತ್-ಕೇಡರ್ ಐಪಿಎಸ್ ಅಧಿಕಾರಿ ರಾಕೇಶ್ ಅಸ್ತಾನಾ ಅವರೊಂದಿಗೆ ಸಂಘರ್ಷ ನಡೆದಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>