<p class="title"><strong>ಮಥುರಾ: </strong>ತಂದೆಯಿಂದಲೇ ಕೊಲೆಯಾದ ಮರ್ಯಾದೆಗೇಡು ಹತ್ಯೆ ಸಂತ್ರಸ್ತೆ, ದೆಹಲಿ ಮೂಲದ ಮಹಿಳೆಆಯುಷಿ ಯಾದವ್ (21) ಮೃತದೇಹದ ಮರಣೋತ್ತರ ಪರೀಕ್ಷೆ ನಡೆದಿದ್ದು, ಆಕೆಯ ಮೇಲೆ ಎರಡು ಬಾರಿ ಗುಂಡು ಹಾರಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.</p>.<p class="title">ಒಂದು ಗುಂಡು ಆಕೆಯ ಎದೆ ಸೀಳಿ ಹೊರಬಂದರೆ, ಮತ್ತೊಂದು ಆಕೆಯ ಬುರುಡೆಯಲ್ಲಿ ಹೊಕ್ಕಿದೆ ಎಂದು ಹೇಳಿದ್ದಾರೆ.</p>.<p class="bodytext">ಬಿಸಿಎ ವ್ಯಾಸಂಗ ಮಾಡುತ್ತಿದ್ದ ಆಯುಷಿಯನ್ನು ಆಕೆಯ ತಂದೆಯೇ ಗುಂಡಿಕ್ಕಿ ಹತ್ಯೆ ಮಾಡಿ, ಬಳಿಕ ಮೃತದೇಹವನ್ನು ಟ್ರಾಲಿ ಚೀಲದಲ್ಲಿ ಇರಿಸಿ ಯಮುನಾ ಎಕ್ಸ್ಪ್ರೆಸ್ ಹೆದ್ದಾರಿ ಬಳಿ ಎಸೆದಿದ್ದ. ಆತನನ್ನು ಭಾನುವಾರವೇ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದರು.</p>.<p class="bodytext">ಈ ಮೊಕದ್ದಮೆ ಕುರಿತು ಮತ್ತಷ್ಟು ಮಾಹಿತಿಯನ್ನು ಪೊಲೀಸರು ನೀಡಿದ್ದಾರೆ.ಆಯುಷಿ ತನ್ನ ಸಹಪಾಠಿ ಛತ್ರಪಾಲ್ ಗುರ್ಜಾರ್ ಎಂಬುವವರನ್ನು ವರ್ಷದ ಹಿಂದೆ ಆರ್ಯ ಸಮಾಜ ದೇವಾಲಯದಲ್ಲಿ ಮದುವೆಯಾಗಿದ್ದಳು. ಇದು ಅಂತರ್ಜಾತಿ ವಿವಾಹವಾದ ಕಾರಣ ಆಕೆಯ ಪೋಷಕರು ಈ ಮದುವೆಯನ್ನು ಒಪ್ಪಿರಲಿಲ್ಲ. ಮದುವೆ ಬಳಿಕ ಆಕೆ ತನ್ನ ಗಂಡನ ಮನೆಗೆ ಹೋಗಿ ಬರುತ್ತಿದ್ದಳು. ಇದರಿಂದ ತಮ್ಮ ಸಾಮಾಜಿಕ ಸ್ಥಾನಮಾನಕ್ಕೆ ಕುತ್ತು ಬರುತ್ತದೆ ಎಂದು ಅವರು ಭಾವಿಸಿದ್ದರು.ಆಕೆ ಗಂಡನ ಮನೆಯಿಂದ ತವರು ಮನೆಗೆಗುರುವಾರ ಬಂದಿದ್ದಳು. ಆ ದಿನವೇ ರಿವಾಲ್ವರ್ ಬಂದೂಕು ಆಕೆಯ ತಂದೆ ಆಕೆಯನ್ನು ಹತ್ಯೆ ಮಾಡಿದ ಎಂದು ಪೊಲೀಸರು ತಿಳಿಸಿದ್ದಾರೆ.</p>.<p class="bodytext">ಹತ್ಯೆಗೆ ಬಳಸಿದ ಬಂದೂಕು ಮತ್ತು ಮೃತದೇಹ ಸಾಗಿಸಲು ಬಳಸಿದ ಕಾರನ್ನು ವಶಪಡಿಸಿಕೊಂಡ ಬಳಿಕ ಸೋಮವಾರ ಸಂತ್ರಸ್ತೆಯ ತಾಯಿಯನ್ನೂ ವಶಕ್ಕೆ ತೆಗೆದುಕೊಳ್ಳಲಾಯಿತು. ಈ ಅಪರಾಧದಲ್ಲಿ ಆಕೆಯ ಸಮಪಾಲು ಇದೆ ಎಂದು ಪರಿಗಣಿಸಲಾಗಿದೆ ಎಂದರು.</p>.<p class="bodytext">ಆಕೆಯ ಮೃತದೇಹದ ಅಂತಿಮ ಸಂಸ್ಕಾರವನ್ನು ಆಕೆಯ ಪೋಷಕರು ಸೋಮವಾರ ನೆರವೇರಿಸಿದರು. ಆಕೆಯ ತಂದೆಯೇ ಚಿತೆಗೆ ಅಗ್ನಿಸ್ಪರ್ಶ ಮಾಡಿದ ಎಂದು ಪೊಲೀಸರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಮಥುರಾ: </strong>ತಂದೆಯಿಂದಲೇ ಕೊಲೆಯಾದ ಮರ್ಯಾದೆಗೇಡು ಹತ್ಯೆ ಸಂತ್ರಸ್ತೆ, ದೆಹಲಿ ಮೂಲದ ಮಹಿಳೆಆಯುಷಿ ಯಾದವ್ (21) ಮೃತದೇಹದ ಮರಣೋತ್ತರ ಪರೀಕ್ಷೆ ನಡೆದಿದ್ದು, ಆಕೆಯ ಮೇಲೆ ಎರಡು ಬಾರಿ ಗುಂಡು ಹಾರಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.</p>.<p class="title">ಒಂದು ಗುಂಡು ಆಕೆಯ ಎದೆ ಸೀಳಿ ಹೊರಬಂದರೆ, ಮತ್ತೊಂದು ಆಕೆಯ ಬುರುಡೆಯಲ್ಲಿ ಹೊಕ್ಕಿದೆ ಎಂದು ಹೇಳಿದ್ದಾರೆ.</p>.<p class="bodytext">ಬಿಸಿಎ ವ್ಯಾಸಂಗ ಮಾಡುತ್ತಿದ್ದ ಆಯುಷಿಯನ್ನು ಆಕೆಯ ತಂದೆಯೇ ಗುಂಡಿಕ್ಕಿ ಹತ್ಯೆ ಮಾಡಿ, ಬಳಿಕ ಮೃತದೇಹವನ್ನು ಟ್ರಾಲಿ ಚೀಲದಲ್ಲಿ ಇರಿಸಿ ಯಮುನಾ ಎಕ್ಸ್ಪ್ರೆಸ್ ಹೆದ್ದಾರಿ ಬಳಿ ಎಸೆದಿದ್ದ. ಆತನನ್ನು ಭಾನುವಾರವೇ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದರು.</p>.<p class="bodytext">ಈ ಮೊಕದ್ದಮೆ ಕುರಿತು ಮತ್ತಷ್ಟು ಮಾಹಿತಿಯನ್ನು ಪೊಲೀಸರು ನೀಡಿದ್ದಾರೆ.ಆಯುಷಿ ತನ್ನ ಸಹಪಾಠಿ ಛತ್ರಪಾಲ್ ಗುರ್ಜಾರ್ ಎಂಬುವವರನ್ನು ವರ್ಷದ ಹಿಂದೆ ಆರ್ಯ ಸಮಾಜ ದೇವಾಲಯದಲ್ಲಿ ಮದುವೆಯಾಗಿದ್ದಳು. ಇದು ಅಂತರ್ಜಾತಿ ವಿವಾಹವಾದ ಕಾರಣ ಆಕೆಯ ಪೋಷಕರು ಈ ಮದುವೆಯನ್ನು ಒಪ್ಪಿರಲಿಲ್ಲ. ಮದುವೆ ಬಳಿಕ ಆಕೆ ತನ್ನ ಗಂಡನ ಮನೆಗೆ ಹೋಗಿ ಬರುತ್ತಿದ್ದಳು. ಇದರಿಂದ ತಮ್ಮ ಸಾಮಾಜಿಕ ಸ್ಥಾನಮಾನಕ್ಕೆ ಕುತ್ತು ಬರುತ್ತದೆ ಎಂದು ಅವರು ಭಾವಿಸಿದ್ದರು.ಆಕೆ ಗಂಡನ ಮನೆಯಿಂದ ತವರು ಮನೆಗೆಗುರುವಾರ ಬಂದಿದ್ದಳು. ಆ ದಿನವೇ ರಿವಾಲ್ವರ್ ಬಂದೂಕು ಆಕೆಯ ತಂದೆ ಆಕೆಯನ್ನು ಹತ್ಯೆ ಮಾಡಿದ ಎಂದು ಪೊಲೀಸರು ತಿಳಿಸಿದ್ದಾರೆ.</p>.<p class="bodytext">ಹತ್ಯೆಗೆ ಬಳಸಿದ ಬಂದೂಕು ಮತ್ತು ಮೃತದೇಹ ಸಾಗಿಸಲು ಬಳಸಿದ ಕಾರನ್ನು ವಶಪಡಿಸಿಕೊಂಡ ಬಳಿಕ ಸೋಮವಾರ ಸಂತ್ರಸ್ತೆಯ ತಾಯಿಯನ್ನೂ ವಶಕ್ಕೆ ತೆಗೆದುಕೊಳ್ಳಲಾಯಿತು. ಈ ಅಪರಾಧದಲ್ಲಿ ಆಕೆಯ ಸಮಪಾಲು ಇದೆ ಎಂದು ಪರಿಗಣಿಸಲಾಗಿದೆ ಎಂದರು.</p>.<p class="bodytext">ಆಕೆಯ ಮೃತದೇಹದ ಅಂತಿಮ ಸಂಸ್ಕಾರವನ್ನು ಆಕೆಯ ಪೋಷಕರು ಸೋಮವಾರ ನೆರವೇರಿಸಿದರು. ಆಕೆಯ ತಂದೆಯೇ ಚಿತೆಗೆ ಅಗ್ನಿಸ್ಪರ್ಶ ಮಾಡಿದ ಎಂದು ಪೊಲೀಸರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>