ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭವಿಷ್ಯದಲ್ಲಿ ಕಾಶ್ಮೀರಿ ಪಂಡಿತರ ಸ್ಥಳಾಂತರ ನಡೆಯದಿರಲಿ: ಹೊಸಬಾಳೆ ವಿಶ್ವಾಸ

Last Updated 15 ಏಪ್ರಿಲ್ 2021, 5:06 IST
ಅಕ್ಷರ ಗಾತ್ರ

ನವದೆಹಲಿ: ಭವಿಷ್ಯದಲ್ಲಿ ಕಣಿವೆ ರಾಜ್ಯದಿಂದ ಕಾಶ್ಮೀರಿ ಪಂಡಿತರ ಸ್ಥಳಾಂತರ ಇರುವುದಿಲ್ಲ ಎಂಬ ವಿಶ್ವಾಸ ಹೊಂದಿರುವುದಾಗಿ ಆರ್‌ಎಸ್ಎಸ್‌ನ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಬುಧವಾರ ಹೇಳಿದರು.

ಅಲ್ಲದೇ, ಈಗಾಗಲೇ ಕಾಶ್ಮೀರವನ್ನು ತೊರೆದಿರುವ ಪಂಡಿತರ ಪುನರ್ವಸತಿ ಕಾರ್ಯವೂ ತ್ವರಿತವಾಗಿ ನಡೆಯಲಿದೆ ಎಂಬ ವಿಶ್ವಾಸವೂ ಇದೆ ಎಂದರು.

ಜಮ್ಮು ಮೂಲದ ಸಂಜೀವಿನಿ ಶಾರದಾ ಕೇಂದ್ರವು ‘ಕಾಶ್ಮೀರಿ ಪಂಡಿತರು ಮರಳಿ ಕಣಿವೆ ರಾಜ್ಯಕ್ಕೆ’ ಎಂಬ ವಿಷಯ ಕುರಿತು ಏರ್ಪಡಿಸಿದ್ದ ಸಂವಾದದ ಸಮಾರೋಪ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಕಾಶ್ಮೀರಿ ಪಂಡಿತರು ತಮ್ಮ ಹೊಸ ವರ್ಷವಾದ ನವರೇಹ್‌ವನ್ನು ಮುಂದಿನ ವರ್ಷ ಕಾಶ್ಮೀರದಲ್ಲಿಯೇ ಆಚರಿಸುವಂತಾಗಲಿ ಎಂದು ಆಶಿಸುವೆ’ ಎಂದು ಹೊಸಬಾಳೆ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT