‘ಪ್ರವಾಹದ ರಭಸದಿಂದ ಸ್ಥಳದಲ್ಲಿ ಸಂಗ್ರಹವಾಗಿರುವ ಅವಶೇಷಗಳನ್ನು ಸಿಬ್ಬಂದಿ ತೆರವುಗೊಳಿಸುತ್ತಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಶ್ವಾನ ದಳ ಗುರುತಿಸಿದ ಸ್ಥಳಗಳಲ್ಲಿ ಅವಶೇಷಗಳನ್ನು ತೆರವು ಮಾಡಲಾಗಿದೆ. ಬದುಕುಳಿದವರನ್ನು ರಕ್ಷಿಸುವ ವಿಶ್ವಾಸವಿದೆ. ಆದರೆ, ಅವಶೇಷಗಳಡಿ ಬದುಕುಳಿದಿದ್ದರೆ ಅದು ಪವಾಡವೇ ಸರಿ. ಕಾಣೆಯಾದವರು ಜೀವಂತವಿರುವ ಸುಳಿವು ಈವರೆಗೆ ಸಿಕ್ಕಿಲ್ಲ. ಘಟನಾ ಸ್ಥಳದಲ್ಲಿ ಹೊಸದಾಗಿ ಯಾವುದೇ ಮೃತ ದೇಹವೂ ಪತ್ತೆಯಾಗಿಲ್ಲ’ಎಂದು ರಾಜ್ಯ ವಿಪತ್ತು ಸ್ಪಂದನಾ ಪಡೆ (ಎಸ್ಡಿಆರ್ಎಫ್) ಅಧಿಕಾರಿಗಳು ಹೇಳಿದ್ದಾರೆ.