ಬಹುತೇಕ ಚುನಾವಣಾ ರ್ಯಾಲಿಗಳಲ್ಲಿ ಅವರು ಆರ್ಜೆಡಿ ವಿರುದ್ಧ ಎನ್ಡಿಎ ನಡೆಸುತ್ತಿದ್ದ ಟೀಕೆ, ಆರೋಪಗಳಿಗೆ ಪ್ರತಿಕ್ರಿಯಿಸದೆ ಮತದಾರರ ಸಮಸ್ಯೆಗಳನ್ನು ಆಲಿಸಿ ಅದಕ್ಕೆ ಪರಿಹಾರ ಒದಗಿಸುವ ಭರವಸೆ ನೀಡುತ್ತಿದ್ದರು. ಪ್ರತಿ ದಿನ 15 ರ್ಯಾಲಿಗಳಲ್ಲಿ ಭಾಗವಹಿಸುತ್ತಿದ್ದ ತೇಜಸ್ವಿ, ವಲಸೆ ಕಾರ್ಮಿಕರ ಸಮಸ್ಯೆ, ನಿರುದ್ಯೋಗ ಸಮಸ್ಯೆಯ ಬಗ್ಗೆಯೇ ಮಾತನಾಡುತ್ತಿದ್ದರು.