<p><strong>ಶಿಮ್ಲಾ: </strong>ಹಿಮಾಚಲ ಪ್ರದೇಶ ವಿಧಾನಸಭೆ ಆವರಣದಲ್ಲಿ ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರ ಮೇಲೆ ಕಾಂಗ್ರೆಸ್ ಶಾಸಕರು ಶುಕ್ರವಾರ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.</p>.<p>ಘಟನೆಗೆ ಸಂಬಂಧಿಸಿದಂತೆ ಐವರು ಕಾಂಗ್ರೆಸ್ ಶಾಸಕರನ್ನು ಈ ಬಜೆಟ್ ಅಧಿವೇಶನ ಮುಗಿಯುವವರೆಗೆ ಅಮಾನತು ಮಾಡಲಾಗಿದೆ.</p>.<p>‘ಸಂಸದೀಯ ವ್ಯವಹಾರಗಳ ಸಚಿವ ಸುರೇಶ್ ಭಾರದ್ವಾಜ್ ಅವರು ಮಂಡಿಸಿದ ಸೂಚನೆಯನ್ನು ಪರಿಗಣಿಸಿ, ವಿರೋಧ ಪಕ್ಷದ ನಾಯಕ ಮುಕೇಶ್ ಅಗ್ನಿಹೋತ್ರಿ, ಹರ್ಷವರ್ಧನ್ ಚೌಹಾಣ್, ಸುಂದರ್ಸಿಂಗ್ ಠಾಕೂರ್, ಸತ್ಪಾಲ್ ರಾಯ್ಜಾದ ಹಾಗೂ ವಿನಯಕುಮಾರ್ ಅವರನ್ನು ಅಮಾನತು ಮಾಡಲಾಗಿದೆ’ ಎಂದು ಸ್ಪೀಕರ್ ವಿಪಿನ್ ಪರ್ಮಾರ್ ಪ್ರಕಟಿಸಿದರು.</p>.<p>ಅಮಾನತುಗೊಳಿಸಿರುವ ವಿಷಯವನ್ನು ಪ್ರಕಟಿಸಿದ ಸಂದರ್ಭದಲ್ಲಿ ಕಾಂಗ್ರೆಸ್ನ ಶಾಸಕರು ಸದನದಲ್ಲಿ ಇರಲಿಲ್ಲ.</p>.<p>ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ಸದನವನ್ನು ಉದ್ಧೇಶಿಸಿ ಮಾತನಾಡಿದ ನಂತರ ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರು ನಿರ್ಗಮಿಸುತ್ತಿದ್ದರು. ಅವರು ಸ್ಪೀಕರ್ ಅವರ ಕೊಠಡಿ ಬಳಿ ಸಾಗುತ್ತಿದ್ದಾಗ ವಿರೋಧ ಪಕ್ಷದ ಶಾಸಕರು ಅವರನ್ನು ತಡೆಯಲು ಯತ್ನಿಸಿದರು ಎನ್ನಲಾಗಿದೆ.</p>.<p>‘ಇತ್ತೀಚೆಗೆ ನಡೆದ ಪಂಚಾಯತ್ ಚುನಾವಣೆಯಲ್ಲಿ ಪಕ್ಷ ಕಳಪೆ ಸಾಧನೆ ಮಾಡಿದೆ. ಇದರಿಂದ ಹತಾಶೆಗೊಂಡಿರುವ ಕಾಂಗ್ರೆಸ್ ಶಾಸಕರು ಇಂಥ ಕೃತ್ಯವೆಸಗಿದ್ದಾರೆ. ಶಾಸಕರ ಈ ಕೃತ್ಯ ರಾಜ್ಯಪಾಲರ ಮೇಲೆ ನಡೆಸಿದ ಹಲ್ಲೆ ಎಂದು ಮುಖ್ಯಮಂತ್ರಿ ಜೈರಾಮ್ ಠಾಕೂರ್ ಹೇಳಿದ್ದಾರೆ’ ಎಂದು ಸಚಿವ ಭಾರದ್ವಾಜ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಮ್ಲಾ: </strong>ಹಿಮಾಚಲ ಪ್ರದೇಶ ವಿಧಾನಸಭೆ ಆವರಣದಲ್ಲಿ ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರ ಮೇಲೆ ಕಾಂಗ್ರೆಸ್ ಶಾಸಕರು ಶುಕ್ರವಾರ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.</p>.<p>ಘಟನೆಗೆ ಸಂಬಂಧಿಸಿದಂತೆ ಐವರು ಕಾಂಗ್ರೆಸ್ ಶಾಸಕರನ್ನು ಈ ಬಜೆಟ್ ಅಧಿವೇಶನ ಮುಗಿಯುವವರೆಗೆ ಅಮಾನತು ಮಾಡಲಾಗಿದೆ.</p>.<p>‘ಸಂಸದೀಯ ವ್ಯವಹಾರಗಳ ಸಚಿವ ಸುರೇಶ್ ಭಾರದ್ವಾಜ್ ಅವರು ಮಂಡಿಸಿದ ಸೂಚನೆಯನ್ನು ಪರಿಗಣಿಸಿ, ವಿರೋಧ ಪಕ್ಷದ ನಾಯಕ ಮುಕೇಶ್ ಅಗ್ನಿಹೋತ್ರಿ, ಹರ್ಷವರ್ಧನ್ ಚೌಹಾಣ್, ಸುಂದರ್ಸಿಂಗ್ ಠಾಕೂರ್, ಸತ್ಪಾಲ್ ರಾಯ್ಜಾದ ಹಾಗೂ ವಿನಯಕುಮಾರ್ ಅವರನ್ನು ಅಮಾನತು ಮಾಡಲಾಗಿದೆ’ ಎಂದು ಸ್ಪೀಕರ್ ವಿಪಿನ್ ಪರ್ಮಾರ್ ಪ್ರಕಟಿಸಿದರು.</p>.<p>ಅಮಾನತುಗೊಳಿಸಿರುವ ವಿಷಯವನ್ನು ಪ್ರಕಟಿಸಿದ ಸಂದರ್ಭದಲ್ಲಿ ಕಾಂಗ್ರೆಸ್ನ ಶಾಸಕರು ಸದನದಲ್ಲಿ ಇರಲಿಲ್ಲ.</p>.<p>ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ಸದನವನ್ನು ಉದ್ಧೇಶಿಸಿ ಮಾತನಾಡಿದ ನಂತರ ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರು ನಿರ್ಗಮಿಸುತ್ತಿದ್ದರು. ಅವರು ಸ್ಪೀಕರ್ ಅವರ ಕೊಠಡಿ ಬಳಿ ಸಾಗುತ್ತಿದ್ದಾಗ ವಿರೋಧ ಪಕ್ಷದ ಶಾಸಕರು ಅವರನ್ನು ತಡೆಯಲು ಯತ್ನಿಸಿದರು ಎನ್ನಲಾಗಿದೆ.</p>.<p>‘ಇತ್ತೀಚೆಗೆ ನಡೆದ ಪಂಚಾಯತ್ ಚುನಾವಣೆಯಲ್ಲಿ ಪಕ್ಷ ಕಳಪೆ ಸಾಧನೆ ಮಾಡಿದೆ. ಇದರಿಂದ ಹತಾಶೆಗೊಂಡಿರುವ ಕಾಂಗ್ರೆಸ್ ಶಾಸಕರು ಇಂಥ ಕೃತ್ಯವೆಸಗಿದ್ದಾರೆ. ಶಾಸಕರ ಈ ಕೃತ್ಯ ರಾಜ್ಯಪಾಲರ ಮೇಲೆ ನಡೆಸಿದ ಹಲ್ಲೆ ಎಂದು ಮುಖ್ಯಮಂತ್ರಿ ಜೈರಾಮ್ ಠಾಕೂರ್ ಹೇಳಿದ್ದಾರೆ’ ಎಂದು ಸಚಿವ ಭಾರದ್ವಾಜ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>