ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹರಿಯಾಣದ ಮೂರು ಜಿಲ್ಲೆಗಳಲ್ಲಿ ಶುಕ್ರವಾರದ ವರೆಗೂ ಇಂಟರ್‌ನೆಟ್ ಸೇವೆ ಕಡಿತ

Last Updated 28 ಜನವರಿ 2021, 14:02 IST
ಅಕ್ಷರ ಗಾತ್ರ

ಚಂಡೀಗಡ: ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ರಾಜ್ಯದ ಮೂರು ಜಿಲ್ಲೆಗಳಲ್ಲಿ ಹೇರಲಾಗಿರುವ ಇಂಟರ್‌ನೆಟ್ ಸೇವೆ ಕಡಿತವನ್ನು ಶುಕ್ರವಾರದ ವರೆಗೂ ಮುಂದುವರಿಸಲು ಹರಿಯಾಣ ಸರ್ಕಾರ ನಿರ್ಧರಿಸಿದೆ.

ಹರಿಯಾಣದ ಸೋನಿಪತ್, ಜಾಜ್ಜರ್ ಹಾಗೂ ಪಲ್ವಾಲ್ ಜಿಲ್ಲೆಗಳಲ್ಲಿ ಶುಕ್ರವಾರ ಸಂಜೆ 5 ಗಂಟೆಯ ವರೆಗೂ ನಿರ್ಬಂಧ ಮುಂದುವರಿಯಲಿದೆ.

ಕೇಂದ್ರ ಸರ್ಕಾರದ ಮೂರು ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಗಣರಾಜ್ಯೋತ್ಸವದ ದಿನದಂದು ರೈತರು ರಾಷ್ಟ್ರ ರಾಜಧಾನಿಯಲ್ಲಿ ನಡೆಸಿದ ಟ್ರ್ಯಾಕ್ಟರ್ ರ‍್ಯಾಲಿಯಲ್ಲಿ ಹಿಂಸಾಚಾರ ಭುಗಿಲೆದ್ದ ಬೆನ್ನಲ್ಲೇ ಹರಿಯಾಣದ ಗಡಿ ಜಿಲ್ಲೆಗಳಲ್ಲಿ ಹೈ-ಅಲರ್ಟ್ ಘೋಷಿಸಲಾಗಿದ್ದು, ಮೊಬೈಲ್ ಇಂಟರ್‌ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.

ದೆಹಲಿ ಸಮೀಪದ ಹರಿಯಾಣ ಗಡಿ ಭಾಗಗಳಲ್ಲಿ ಉದ್ವಿಗ್ನಪರಿಸ್ಥಿತಿ ಮುಂದುವರಿದಿದ್ದು, ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡಲು ಮೊಬೈಲ್ ಇಂಟರ್‌ನೆಟ್ ಸೇವೆಯನ್ನು ಕಡಿತಗೊಳಿಸಲಾಗಿದೆ ಎಂದು ಹರಿಯಾಣ ಗೃಹ ಇಲಾಖೆ ತಿಳಿಸಿದೆ. ಈ ಜಿಲ್ಲೆಗಳ ವ್ಯಾಪ್ತಿಯಲ್ಲಿ ವಾಯ್ಸ್ ಕಾಲ್ ಸೌಲಭ್ಯ ಮಾತ್ರ ಲಭ್ಯವಿರಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT