<p><strong>ಹೈದರಾಬಾದ್:</strong> ಜಮ್ಮು ಮತ್ತು ಕಾಶ್ಮೀರದ ಯುವಕರು ಭಯೋತ್ಪಾದನೆಯತ್ತ ಹೊರಳದಂತೆ ಆರಂಭಿಕ ಹಂತದಲ್ಲೇ ಅಲ್ಲಿನ ತಾಯಂದಿರನ್ನು, ಮಹಿಳೆಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯನಿರ್ವಹಿಸಿ ಎಂದು ಮಹಿಳಾ ಪೊಲೀಸ್ ಸಿಬ್ಬಂದಿಯನ್ನುಪ್ರಧಾನಿ ನರೇಂದ್ರ ಮೋದಿ ಅವರು ಪ್ರೇರೇಪಿಸಿದರು.</p>.<p>ಆನ್ಲೈನ್ ಮುಖಾಂತರಸರ್ದಾರ್ ವಲ್ಲಭಬಾಯಿ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯ ಐಪಿಎಸ್ ಪರೀಕ್ಷಣಾವಧಿ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಕೋವಿಡ್–19 ಪಿಡುಗಿನ ಸಂದರ್ಭದಲ್ಲಿ ಪೊಲೀಸರ ಮಾನವೀಯತೆಯನ್ನು ದೇಶದ ಜನರು ಗಮನಿಸಿದ್ದಾರೆ’ ಎಂದರು.</p>.<p>ಪರೀಕ್ಷಣಾವಧಿ ಮಹಿಳಾ ಅಧಿಕಾರಿಯೊಬ್ಬರ ಪ್ರಶ್ನೆಗೆ ಉತ್ತರಿಸಿದ ಮೋದಿ, ‘ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರದ ಜನರು ನನಗೆ ಅಚ್ಚುಮೆಚ್ಚು. ಇವರೊಂದಿಗೆ ನಾನು ನಿಕಟ ಸಂಪರ್ಕ ಹೊಂದಿದ್ದೇನೆ. ಅವರು ಎಲ್ಲರನ್ನೂ ಪ್ರೀತಿಯಿಂದ ನೋಡುತ್ತಾರೆ. ಹೀಗಾಗಿ, ಅಲ್ಲಿ ತಪ್ಪು ದಾರಿ ಹಿಡುಯುತ್ತಿರುವವರನ್ನು ನಾವು ತಡೆಯಬೇಕು. ಈ ಕೆಲಸ ಮಹಿಳೆಯರಿಂದಷ್ಟೇ ಸಾಧ್ಯ. ಮಹಿಳಾ ಸಿಬ್ಬಂದಿ ಅಲ್ಲಿನ ತಾಯಂದಿರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಯುವಕರು ಭಯೋತ್ಪಾದನೆಯತ್ತ ಸಾಗುವುದನ್ನು ತಪ್ಪಿಸಬಹುದು, ಆರಂಭಿಕ ಹಂತದಲ್ಲೇ ಇದನ್ನು ಮಾಡುವುದರಿಂದ ಬಹಳಷ್ಟು ಸಹಕಾರಿಯಾಗಲಿದೆ’ ಎಂದರು.</p>.<p>ಸೇವೆಯ ಮೇಲಿನ ಬದ್ಧತೆ ಸ್ಫೂರ್ತಿ: ಅಧಿಕಾರಿಗಳನ್ನು ಅಭಿನಂದಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಸೇವೆಯ ಮೇಲೆ ಇರುವ ಐಪಿಎಸ್ ಅಧಿಕಾರಿಗಳ ಬದ್ಧತೆಯು ಇತರೆ ಯುವಜನರು ಪೊಲೀಸ್ ಸೇವೆಗೆ ಸೇರಲು ಸ್ಫೂರ್ತಿಯಾಗಿದೆ ಎಂದು ಶ್ಲಾಘಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್:</strong> ಜಮ್ಮು ಮತ್ತು ಕಾಶ್ಮೀರದ ಯುವಕರು ಭಯೋತ್ಪಾದನೆಯತ್ತ ಹೊರಳದಂತೆ ಆರಂಭಿಕ ಹಂತದಲ್ಲೇ ಅಲ್ಲಿನ ತಾಯಂದಿರನ್ನು, ಮಹಿಳೆಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯನಿರ್ವಹಿಸಿ ಎಂದು ಮಹಿಳಾ ಪೊಲೀಸ್ ಸಿಬ್ಬಂದಿಯನ್ನುಪ್ರಧಾನಿ ನರೇಂದ್ರ ಮೋದಿ ಅವರು ಪ್ರೇರೇಪಿಸಿದರು.</p>.<p>ಆನ್ಲೈನ್ ಮುಖಾಂತರಸರ್ದಾರ್ ವಲ್ಲಭಬಾಯಿ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯ ಐಪಿಎಸ್ ಪರೀಕ್ಷಣಾವಧಿ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಕೋವಿಡ್–19 ಪಿಡುಗಿನ ಸಂದರ್ಭದಲ್ಲಿ ಪೊಲೀಸರ ಮಾನವೀಯತೆಯನ್ನು ದೇಶದ ಜನರು ಗಮನಿಸಿದ್ದಾರೆ’ ಎಂದರು.</p>.<p>ಪರೀಕ್ಷಣಾವಧಿ ಮಹಿಳಾ ಅಧಿಕಾರಿಯೊಬ್ಬರ ಪ್ರಶ್ನೆಗೆ ಉತ್ತರಿಸಿದ ಮೋದಿ, ‘ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರದ ಜನರು ನನಗೆ ಅಚ್ಚುಮೆಚ್ಚು. ಇವರೊಂದಿಗೆ ನಾನು ನಿಕಟ ಸಂಪರ್ಕ ಹೊಂದಿದ್ದೇನೆ. ಅವರು ಎಲ್ಲರನ್ನೂ ಪ್ರೀತಿಯಿಂದ ನೋಡುತ್ತಾರೆ. ಹೀಗಾಗಿ, ಅಲ್ಲಿ ತಪ್ಪು ದಾರಿ ಹಿಡುಯುತ್ತಿರುವವರನ್ನು ನಾವು ತಡೆಯಬೇಕು. ಈ ಕೆಲಸ ಮಹಿಳೆಯರಿಂದಷ್ಟೇ ಸಾಧ್ಯ. ಮಹಿಳಾ ಸಿಬ್ಬಂದಿ ಅಲ್ಲಿನ ತಾಯಂದಿರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಯುವಕರು ಭಯೋತ್ಪಾದನೆಯತ್ತ ಸಾಗುವುದನ್ನು ತಪ್ಪಿಸಬಹುದು, ಆರಂಭಿಕ ಹಂತದಲ್ಲೇ ಇದನ್ನು ಮಾಡುವುದರಿಂದ ಬಹಳಷ್ಟು ಸಹಕಾರಿಯಾಗಲಿದೆ’ ಎಂದರು.</p>.<p>ಸೇವೆಯ ಮೇಲಿನ ಬದ್ಧತೆ ಸ್ಫೂರ್ತಿ: ಅಧಿಕಾರಿಗಳನ್ನು ಅಭಿನಂದಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಸೇವೆಯ ಮೇಲೆ ಇರುವ ಐಪಿಎಸ್ ಅಧಿಕಾರಿಗಳ ಬದ್ಧತೆಯು ಇತರೆ ಯುವಜನರು ಪೊಲೀಸ್ ಸೇವೆಗೆ ಸೇರಲು ಸ್ಫೂರ್ತಿಯಾಗಿದೆ ಎಂದು ಶ್ಲಾಘಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>