<p><strong>ಹೈದರಾಬಾದ್:</strong> ಜಮ್ಮು ಮತ್ತು ಕಾಶ್ಮೀರದ ಯುವಕರು ಭಯೋತ್ಪಾದನೆಗೆ ಸೇರದಂತೆ ತಡೆಯಲು, ಅಲ್ಲಿನ ತಾಯಂದಿರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಮಹಿಳಾ ಪೊಲೀಸ್ ಸಿಬ್ಬಂದಿಗೆ ಸಲಹೆ ನೀಡಿದರು.</p>.<p>ಹೈದರಾಬಾದ್ನ ಸರ್ದಾರ್ ವಲ್ಲಭಭಾಯಿ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯ ಐಪಿಎಸ್ ಪ್ರೊಬೇಷನರಿ ಅಧಿಕಾರಿಗಳೊಂದಿಗೆ ಶುಕ್ರವಾರ ನಡೆದ ವಿಡಿಯೊ ಸಂವಾದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರು ಮಾತನಾಡಿದರು.</p>.<p>ಕೊರೊನಾ ಪಿಡುಗಿನ ವೇಳೆ ಪೊಲೀಸರ ಮಾನವೀಯತೆಯನ್ನು ಜನರು ನೋಡಿದ್ದಾರೆ ಎಂದರು.</p>.<p>‘ಜಮ್ಮು–ಕಾಶ್ಮೀರದ ಜನರ ಮನಸ್ಸು ಬಹಳ ಸುಂದರವಾಗಿದೆ. ಅಲ್ಲಿನ ಜನರೊಂದಿಗೆ ನಾನು ನಿಕಟ ಸಂಪರ್ಕ ಹೊಂದಿದ್ದೇನೆ. ಅವರು ಎಲ್ಲರನ್ನೂ ಪ್ರೀತಿಯಿಂದ ನೋಡುತ್ತಾರೆ. ಹಾಗಾಗಿ, ಅಲ್ಲಿ ತಪ್ಪು ದಾರಿ ಹಿಡಿಯುವವರನ್ನು ನಾವು ತಡೆಯಬೇಕು. ಮಹಿಳಾ ಪೊಲೀಸ್ ಸಿಬ್ಬಂದಿಯಿಂದ ಈ ಕೆಲಸ ಸಾಧ್ಯ. ಯುವಕರು ಭಯೋತ್ಪಾದನೆಯತ್ತ ಸಾಗುವುದನ್ನುತಾಯಂದಿರ ನೆರವಿನಿಂದ ತಡೆಯಬಹುದು. ಈ ಮೂಲಕ ಆರಂಭಿಕ ಹಂತದಲ್ಲೇ ಭಯೋತ್ಪಾದನೆಯನ್ನು ತಡೆಯಬಹುದು’ ಎಂದು ಅವರು ಕಿವಿಮಾತು ಹೇಳಿದರು.</p>.<p>ಯೋಗ ಮತ್ತು ಪ್ರಾಣಾಯಾಮಗಳು ಒತ್ತಡವನ್ನು ನಿವಾರಿಸಲು ಉತ್ತಮ ಮಾರ್ಗಗಳಾಗಿವೆ ಎಂದು ಅವರು ಇದೇ ವೇಳೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್:</strong> ಜಮ್ಮು ಮತ್ತು ಕಾಶ್ಮೀರದ ಯುವಕರು ಭಯೋತ್ಪಾದನೆಗೆ ಸೇರದಂತೆ ತಡೆಯಲು, ಅಲ್ಲಿನ ತಾಯಂದಿರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಮಹಿಳಾ ಪೊಲೀಸ್ ಸಿಬ್ಬಂದಿಗೆ ಸಲಹೆ ನೀಡಿದರು.</p>.<p>ಹೈದರಾಬಾದ್ನ ಸರ್ದಾರ್ ವಲ್ಲಭಭಾಯಿ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯ ಐಪಿಎಸ್ ಪ್ರೊಬೇಷನರಿ ಅಧಿಕಾರಿಗಳೊಂದಿಗೆ ಶುಕ್ರವಾರ ನಡೆದ ವಿಡಿಯೊ ಸಂವಾದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರು ಮಾತನಾಡಿದರು.</p>.<p>ಕೊರೊನಾ ಪಿಡುಗಿನ ವೇಳೆ ಪೊಲೀಸರ ಮಾನವೀಯತೆಯನ್ನು ಜನರು ನೋಡಿದ್ದಾರೆ ಎಂದರು.</p>.<p>‘ಜಮ್ಮು–ಕಾಶ್ಮೀರದ ಜನರ ಮನಸ್ಸು ಬಹಳ ಸುಂದರವಾಗಿದೆ. ಅಲ್ಲಿನ ಜನರೊಂದಿಗೆ ನಾನು ನಿಕಟ ಸಂಪರ್ಕ ಹೊಂದಿದ್ದೇನೆ. ಅವರು ಎಲ್ಲರನ್ನೂ ಪ್ರೀತಿಯಿಂದ ನೋಡುತ್ತಾರೆ. ಹಾಗಾಗಿ, ಅಲ್ಲಿ ತಪ್ಪು ದಾರಿ ಹಿಡಿಯುವವರನ್ನು ನಾವು ತಡೆಯಬೇಕು. ಮಹಿಳಾ ಪೊಲೀಸ್ ಸಿಬ್ಬಂದಿಯಿಂದ ಈ ಕೆಲಸ ಸಾಧ್ಯ. ಯುವಕರು ಭಯೋತ್ಪಾದನೆಯತ್ತ ಸಾಗುವುದನ್ನುತಾಯಂದಿರ ನೆರವಿನಿಂದ ತಡೆಯಬಹುದು. ಈ ಮೂಲಕ ಆರಂಭಿಕ ಹಂತದಲ್ಲೇ ಭಯೋತ್ಪಾದನೆಯನ್ನು ತಡೆಯಬಹುದು’ ಎಂದು ಅವರು ಕಿವಿಮಾತು ಹೇಳಿದರು.</p>.<p>ಯೋಗ ಮತ್ತು ಪ್ರಾಣಾಯಾಮಗಳು ಒತ್ತಡವನ್ನು ನಿವಾರಿಸಲು ಉತ್ತಮ ಮಾರ್ಗಗಳಾಗಿವೆ ಎಂದು ಅವರು ಇದೇ ವೇಳೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>