<p><strong>ನವದೆಹಲಿ: </strong>ದೇಶದಲ್ಲಿ 100 ಕೋಟಿ ಡೋಸ್ ಕೋವಿಡ್–19 ಲಸಿಕೆ ವಿತರಣೆಯನ್ನು ಸಂಭ್ರಮಿಸಲು ಭಾರತೀಯ ಪುರಾತತ್ವ ಸರ್ವೇಕ್ಷಣಾ ಸಂಸ್ಥೆ (ಎಎಸ್ಐ) ತನ್ನ 100 ಪಾರಂಪರಿಕ ಸ್ಮಾರಕಗಳನ್ನು ರಾಷ್ಟ್ರ ಧ್ವಜದ ಬಣ್ಣದಲ್ಲಿ ಬೆಳಗಿಸಲಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.</p>.<p>ಕೆಂಪು ಕೋಟೆ, ಕುತುಬ್ ಮಿನಾರ್, ಹುಮಾಯೂನ್ ಸಮಾಧಿ, ತುಘಲಕಾಬಾದ್ ಕೋಟೆ, ಪುರಾನಾ ಕಿಲಾ, ಫತೇಪುರ್ ಸಿಕ್ರಿ, ರಾಮಪ್ಪ ದೇವಸ್ಥಾನ, ಹಂಪಿ, ಧೋಲವಿರಾ (ಗುಜರಾತ್), ಪುರಾತನ ಲೆಹ್ ಅರಮನೆ ಕೋಲ್ಕತ್ತಾದ ಕರೆನ್ಸಿ ಕಟ್ಟಡ ಮತ್ತು ಮೆಟ್ಕಾಲ್ಫ್ ಹಾಲ್; ಖಜುರಾಹೊ ದೇವಸ್ಥಾನಗಳು (ಎಂಪಿ), ಮತ್ತು ಹೈದರಾಬಾದ್ನ ಗೋಲ್ಕೊಂಡ ಕೋಟೆ ಸೇರಿದಂತೆ ಯುನೆಸ್ಕೊದ ಹದಿನೇಳು ಪಾರಂಪರಿಕ ತಾಣಗಳು ಸೇರಿ 100 ಸ್ಮಾರಕಗಳು ತ್ರಿವರ್ಣದಿಂದ ಪ್ರಕಾಶಿಸಲ್ಪಡುತ್ತವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಇದು ಆರೋಗ್ಯ ವೃತ್ತಿಪರರು, ಮುಂಚೂಣಿಯ ಕಾರ್ಯಕರ್ತರು, ವಿಜ್ಞಾನಿಗಳು, ಲಸಿಕೆ ತಯಾರಕರು ಮತ್ತು ಸಾಂಕ್ರಾಮಿಕ ರೋಗದ ವಿರುದ್ಧ ಧೈರ್ಯದಿಂದ ಹೋರಾಡಿದ ದೇಶದ ನಾಗರಿಕರಿಗೆ ನೀಡುತ್ತಿರುವ ಗೌರವವಾಗಿದೆ ಎಂದು ಅವರು ಹೇಳಿದ್ದಾರೆ.</p>.<p>ಇದು ದೇಶದಾದ್ಯಂತ ಕೋವಿಡ್ ಲಸಿಕೆಯ ಮೈಲಿಗಲ್ಲನ್ನು ಸ್ಮರಣೀಯವಾಗಿಸಲು ಆಯೋಜಿಸಿರುವ ಚಟುವಟಿಕೆಗಳ ಭಾಗವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ದೇಶದ ಕೋವಿಡ್ -19 ಲಸಿಕೆ ಅಭಿಯಾನವು ಗುರುವಾರ 100 ಕೋಟಿ ಡೋಸ್ ಮೈಲಿಗಲ್ಲನ್ನು ದಾಟಿದೆ.</p>.<p>ಈ ಸಾಧನೆಗಾಗಿ ಕೇಂದ್ರ ಆರೋಗ್ಯ ಸಚಿವ ಮನಸುಖ್ ಮಾಂಡವೀಯ ಅವರು ದೇಶದ ಜನರನ್ನು ಅಭಿನಂದಿಸಿದರು. ಇದು ಪ್ರಧಾನಿ ನರೇಂದ್ರ ಮೋದಿಯವರ ಸಮರ್ಥ ನಾಯಕತ್ವದ ಫಲಿತಾಂಶ ಎಂದು ಅವರು ಹೇಳಿದ್ದಾರೆ.</p>.<p>ಅಧಿಕೃತ ಮೂಲಗಳ ಪ್ರಕಾರ, ದೇಶದ ವಯಸ್ಕರಲ್ಲಿ ಶೇ 75ರಷ್ಟು ಜನರು ಮೊದಲ ಡೋಸ್ ಪಡೆದಿದ್ದರೆ, ಶೇ 31ರಷ್ಟು ಜನರು ಎರಡೂ ಡೋಸ್ಗಳನ್ನು ಪಡೆದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ದೇಶದಲ್ಲಿ 100 ಕೋಟಿ ಡೋಸ್ ಕೋವಿಡ್–19 ಲಸಿಕೆ ವಿತರಣೆಯನ್ನು ಸಂಭ್ರಮಿಸಲು ಭಾರತೀಯ ಪುರಾತತ್ವ ಸರ್ವೇಕ್ಷಣಾ ಸಂಸ್ಥೆ (ಎಎಸ್ಐ) ತನ್ನ 100 ಪಾರಂಪರಿಕ ಸ್ಮಾರಕಗಳನ್ನು ರಾಷ್ಟ್ರ ಧ್ವಜದ ಬಣ್ಣದಲ್ಲಿ ಬೆಳಗಿಸಲಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.</p>.<p>ಕೆಂಪು ಕೋಟೆ, ಕುತುಬ್ ಮಿನಾರ್, ಹುಮಾಯೂನ್ ಸಮಾಧಿ, ತುಘಲಕಾಬಾದ್ ಕೋಟೆ, ಪುರಾನಾ ಕಿಲಾ, ಫತೇಪುರ್ ಸಿಕ್ರಿ, ರಾಮಪ್ಪ ದೇವಸ್ಥಾನ, ಹಂಪಿ, ಧೋಲವಿರಾ (ಗುಜರಾತ್), ಪುರಾತನ ಲೆಹ್ ಅರಮನೆ ಕೋಲ್ಕತ್ತಾದ ಕರೆನ್ಸಿ ಕಟ್ಟಡ ಮತ್ತು ಮೆಟ್ಕಾಲ್ಫ್ ಹಾಲ್; ಖಜುರಾಹೊ ದೇವಸ್ಥಾನಗಳು (ಎಂಪಿ), ಮತ್ತು ಹೈದರಾಬಾದ್ನ ಗೋಲ್ಕೊಂಡ ಕೋಟೆ ಸೇರಿದಂತೆ ಯುನೆಸ್ಕೊದ ಹದಿನೇಳು ಪಾರಂಪರಿಕ ತಾಣಗಳು ಸೇರಿ 100 ಸ್ಮಾರಕಗಳು ತ್ರಿವರ್ಣದಿಂದ ಪ್ರಕಾಶಿಸಲ್ಪಡುತ್ತವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಇದು ಆರೋಗ್ಯ ವೃತ್ತಿಪರರು, ಮುಂಚೂಣಿಯ ಕಾರ್ಯಕರ್ತರು, ವಿಜ್ಞಾನಿಗಳು, ಲಸಿಕೆ ತಯಾರಕರು ಮತ್ತು ಸಾಂಕ್ರಾಮಿಕ ರೋಗದ ವಿರುದ್ಧ ಧೈರ್ಯದಿಂದ ಹೋರಾಡಿದ ದೇಶದ ನಾಗರಿಕರಿಗೆ ನೀಡುತ್ತಿರುವ ಗೌರವವಾಗಿದೆ ಎಂದು ಅವರು ಹೇಳಿದ್ದಾರೆ.</p>.<p>ಇದು ದೇಶದಾದ್ಯಂತ ಕೋವಿಡ್ ಲಸಿಕೆಯ ಮೈಲಿಗಲ್ಲನ್ನು ಸ್ಮರಣೀಯವಾಗಿಸಲು ಆಯೋಜಿಸಿರುವ ಚಟುವಟಿಕೆಗಳ ಭಾಗವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ದೇಶದ ಕೋವಿಡ್ -19 ಲಸಿಕೆ ಅಭಿಯಾನವು ಗುರುವಾರ 100 ಕೋಟಿ ಡೋಸ್ ಮೈಲಿಗಲ್ಲನ್ನು ದಾಟಿದೆ.</p>.<p>ಈ ಸಾಧನೆಗಾಗಿ ಕೇಂದ್ರ ಆರೋಗ್ಯ ಸಚಿವ ಮನಸುಖ್ ಮಾಂಡವೀಯ ಅವರು ದೇಶದ ಜನರನ್ನು ಅಭಿನಂದಿಸಿದರು. ಇದು ಪ್ರಧಾನಿ ನರೇಂದ್ರ ಮೋದಿಯವರ ಸಮರ್ಥ ನಾಯಕತ್ವದ ಫಲಿತಾಂಶ ಎಂದು ಅವರು ಹೇಳಿದ್ದಾರೆ.</p>.<p>ಅಧಿಕೃತ ಮೂಲಗಳ ಪ್ರಕಾರ, ದೇಶದ ವಯಸ್ಕರಲ್ಲಿ ಶೇ 75ರಷ್ಟು ಜನರು ಮೊದಲ ಡೋಸ್ ಪಡೆದಿದ್ದರೆ, ಶೇ 31ರಷ್ಟು ಜನರು ಎರಡೂ ಡೋಸ್ಗಳನ್ನು ಪಡೆದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>