ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಈ ಸಂಪ್ರದಾಯ ಆರಂಭವಾಗಿದೆ. 2017ರಲ್ಲಿ 51,000 ದೀಪಗಳನ್ನು ಬೆಳಗಲಾಗಿತ್ತು. 2019ರಲ್ಲಿ 4.10 ಲಕ್ಷ, 2020ರಲ್ಲಿ 6 ಲಕ್ಷ, 2021ರಲ್ಲಿ 9 ಲಕ್ಷ ಹಣತೆಗಳನ್ನು ಬೆಳಗುವ ಮೂಲಕ ಗಿನ್ನೆಸ್ ದಾಖಲೆ ನಿರ್ಮಿಸಲಾಗಿತ್ತು. ಈ ವರ್ಷ 14 ಲಕ್ಷ ದೀಪಗಳನ್ನು ಬೆಳಗುವ ಮೂಲಕ ಹೊಸ ದಾಖಲೆ ನಿರ್ಮಿಸಲು ಸಿದ್ಧತೆ ನಡೆಸಲಾಗುತ್ತಿದೆ.