‘ದೇಶವು ವಿಶ್ವಾಸ ಹಾಗೂ ದೃಢಸಂಕಲ್ಪದಿಂದ ಮುನ್ನಡೆಯುತ್ತಿದೆ. ವಿಶ್ವದ ವಿವಿಧ ಕ್ಷೇತ್ರಗಳ ತಜ್ಞರು ಭಾರತದ ಭವಿಷ್ಯದ ಬಗ್ಗೆ ಆಶಾವಾದದಿಂದ ಇರುವಾಗ ದೇಶದ ಬಗ್ಗೆ ಕೀಳಾಗಿ ಮಾತನಾಡುವುದು, ನಿರಾಶೆಯ ಮಾತುಗಳನ್ನಾಡುವ ಮೂಲಕ ರಾಷ್ಟ್ರದ ನೈತಿಕಸ್ಥೈರ್ಯ ಕುಗ್ಗಿಸುವ ಪ್ರಯತ್ನಗಳು ನಡೆಯುತ್ತಿವೆ’ ಎಂದು ಮೋದಿ ಹೇಳಿದರು.