ಹೈದರಾಬಾದ್: ಬಿಜೆಪಿಯ ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರನ್ನು ಬೆಂಬಲಿಸಿ ತೆಲಂಗಾಣದ ಸಿಕಂದರಾಬಾದ್ನ ಬೊವೆನ್ಪಲ್ಲಿಯ ಹಸ್ಮತ್ಪೇಟ್ ಪ್ರದೇಶದಲ್ಲಿ ಹಲವರು ರ್ಯಾಲಿ ನಡೆಸಿದ್ದಾರೆ. ಇದಕ್ಕೆ ಮತ್ತೊಂದು ಗುಂಪು ಆಕ್ಷೇಪ ವ್ಯಕ್ತಪಡಿಸಿ ಘೋಷಣೆಗಳನ್ನು ಕೂಗಿದ್ದು, ಉದ್ವಿಗ್ನ ಪರಿಸ್ಥಿತಿ ಸೃಷ್ಟಿಯಾಗಿತ್ತು. ಈ ವಿಚಾರವಾಗಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.