ಮಮತಾ ಬ್ಯಾನರ್ಜಿಯವರ ಕಲ್ಚರಲ್ ಬ್ರಿಗೇಡ್ನ ಪ್ರಮುಖ ಸದಸ್ಯರಲ್ಲೊಬ್ಬರಾಗಿದ್ದ ಶತಾಬ್ದಿರಾಯ್ ಅವರು, ‘ನನ್ನ ಕ್ಷೇತ್ರದಲ್ಲಿ ನಡೆಯುವ ಪಕ್ಷದ ಕಾರ್ಯಕ್ರಮಗಳ ಬಗ್ಗೆ ತನಗೆ ಮಾಹಿತಿ ನೀಡುವುದಿಲ್ಲ. ಇದರಿಂದ ನನಗೆ ಬಹಳ ಬೇಸರವಾಗಿದೆ. ಹಾಗಾಗಿ ನಾನು ಪ್ರಮುಖ ನಿರ್ಧಾರ ಕೈಗೊಳ್ಳುತ್ತಿದ್ದೇನೆ. ಅದನ್ನು ಶನಿವಾರ 2 ಗಂಟೆಯೊಳಗೆ ತಿಳಿಸುತ್ತೇನೆ‘ ಎಂದು ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿದ್ದರು.