ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರದ ನಿರ್ದೇಶಕ ಎಸ್. ಕೆ. ಸಿಂಗ್ ನೇತೃತ್ವದ 6 ಸದಸ್ಯರ ತಂಡವು ಇಂದು ಕೇರಳ ತಲುಪಲಿದ್ದು, ಕೋವಿಡ್ ಪ್ರಕರಣಗಳು ಹೆಚ್ಚಿರುವ ಜಿಲ್ಲೆಗಳಿಗೆ ಭೇಟಿ ನೀಡಲಿದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ. ಕೋವಿಡ್ ಹರಡುವಿಕೆ ತಡೆಯುವ ನಿಟ್ಟಿನಲ್ಲಿ ಕೇರಳ ಸರ್ಕಾರಕ್ಕೆ ಕೇಂದ್ರ ತಂಡ ನೆರವು ನೀಡಲಿದೆ.