ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಕಪಿಲ್ ಸಿಬಲ್, ರಾಷ್ಟ್ರದಲ್ಲಿ ಇಂದು ಅಘೋಷಿತ ತುರ್ತು ಪರಿಸ್ಥಿತಿ ಇದೆ. ಸಂಸ್ಥೆಗಳ ಕತ್ತು ಹಿಸುಕಲಾಗುತ್ತಿದೆ. ಪ್ರತಿನಿತ್ಯ ಕಾನೂನು ಉಲ್ಲಂಘನೆಗಳು ಸಂಭವಿಸುತ್ತಿವೆ. ಬಿಜೆಪಿಯು ಕೇವಲ ಕಾಂಗ್ರೆಸ್ ಮುಕ್ತ ಭಾರತವನ್ನು ಬಯಸುತ್ತಿಲ್ಲ, ಪ್ರತಿಪಕ್ಷಗಳೇ ಇಲ್ಲದ ಭಾರತವನ್ನು ಬಯಸುತ್ತಿದೆ ಎಂದು ಆರೋಪಿಸಿದರು.