<p><strong>ಮುಂಬೈ:</strong> ಭಾರತೀಯ ಜನತಾ ಪಕ್ಷದೊಂದಿಗಿನ (ಬಿಜೆಪಿ) ಮೈತ್ರಿಯಿಂದ ಶಿವಸೇನಾ 25 ವರ್ಷಗಳನ್ನು ವ್ಯರ್ಥ ಮಾಡಿದೆ ಎಂದು ನಾನು ಈಗಲೂ ನಂಬಿದ್ದೇನೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ.</p>.<p>ಶಿವಸೇನೆಯುಸ್ವತಂತ್ರವಾಗಿ ಚುನಾವಣೆ ಎದುರಿಸಬೇಕು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಸವಾಲನ್ನು ಸ್ವೀಕರಿಸಿದ್ದೇನೆ. ಮಹಾರಾಷ್ಟ್ರದ ಹೊರಗೂ ಪಕ್ಷವನ್ನುವಿಸ್ತರಿಸಿ ದೇಶ ರಾಜಕಾರಣದಲ್ಲೂ ಪ್ರಮುಖ ಪಾತ್ರ ವಹಿಸುತ್ತೇವೆಎಂದು ಹೇಳಿದ್ದಾರೆ.</p>.<p>ಇದನ್ನೂ ಓದಿ:<a href="https://www.prajavani.net/india-news/shah-rakes-up-hindu-exodus-issue-again-seeks-votes-in-the-name-of-modi-bharat-mata-904480.html" itemprop="url">ಉತ್ತರ ಪ್ರದೇಶ: ಮತ್ತೆ ಮುನ್ನೆಲೆಗೆ ಬಂದ ಹಿಂದೂಗಳ ವಲಸೆ ವಿಚಾರ </a></p>.<p>'ಅಧಿಕಾರದ ಮೂಲಕ ಹಿಂದುತ್ವ ಅಜೆಂಡಾವನ್ನು ಮುಂದಕ್ಕೆ ಕೊಂಡೊಯ್ಯಲು ಬಿಜೆಪಿಯೊಂದಿಗೆ ಶಿವಸೇನಾ ಮೈತ್ರಿ ಮಾಡಿಕೊಂಡಿತ್ತು. ಶಿವಸೇನಾ ವೋಟಿಗಾಗಿ ಹಿಂದುತ್ವವನ್ನು ಎಂದೂ ಬಳಕೆ ಮಾಡಿಲ್ಲ. ಇನ್ನೊಂದೆಡೆ ಬಿಜೆಪಿ ರಾಜಕೀಯ ಲಾಭಕ್ಕಾಗಿ ಹಿಂದುತ್ವವನ್ನು ಬಳಸಿಕೊಂಡಿದೆ' ಎಂದು ಟೀಕಿಸಿದರು.</p>.<p>'ಬಿಜೆಪಿ ರಾಜಕೀಯವಾಗಿ ಬೆಳೆಯುತ್ತಿರುವಾಗ ಶಿವಸೇನಾ ಸೇರಿದಂತೆ ಹಲವು ಪ್ರಾದೇಶಿಕ ಪಕ್ಷಗಳೊಂದಿಗೆ ಹೊಂದಾಣಿಕೆ ಮಾಡಿಕೊಂಡಿತ್ತು. ಆಗ ಬಿಜೆಪಿ ಹಲವು ಕಡೆಗಳಲ್ಲಿ ಠೇವಣಿ ಕಳೆದುಕೊಂಡಿತ್ತು. ಹಿಂದುತ್ವಕ್ಕಾಗಿ ಅಧಿಕಾರ ಬೇಕು ಎಂಬ ಕಾರಣಕ್ಕೆ ಶಿವಸೇನಾ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿತ್ತು. ಸೇನೆಯು ಬಿಜೆಪಿಯೊಂದಿಗಿನ ಮೈತ್ರಿ ಕಡಿದುಕೊಂಡಿದೆ, ಹಿಂದುತ್ವವನ್ನಲ್ಲ! ಬಿಜೆಪಿಯ ಅವಕಾಶವಾದಿ ಹಿಂದುತ್ವ ಅಧಿಕಾರಕ್ಕಾಗಿ ಮಾತ್ರವಾಗಿದೆ' ಎಂದು ಆರೋಪಿಸಿದರು.</p>.<p>'ಅವಕಾಶವಾದಿ ರಾಜಕಾರಣದಿಂದಲೇ ಕಾಶ್ಮೀರದಲ್ಲಿ ಪಿಡಿಪಿ ಹಾಗೂ ಬಿಹಾರದಲ್ಲಿ ಸಂಘ ಮುಕ್ತಿಗಾಗಿ (ಆರ್ಎಸ್ಎಸ್) ಹೇಳಿಕೆ ನೀಡಿರುವ ನಿತೀಶ್ ಕುಮಾರ್ ಜೊತೆ ಬಿಜೆಪಿ ಮೈತ್ರಿ ಮಾಡಿಕೊಂಡಿತ್ತು. 2019ರಲ್ಲಿ ಸೇನೆಯು ಕಾಂಗ್ರೆಸ್ ಹಾಗೂ ಎನ್ಸಿಪಿ ಜೊತೆ ಸೇರಿಕೊಂಡು 'ಮಹಾ ವಿಕಾಸ್ ಆಘಾಡಿ' ಮೈತ್ರಿಕೂಟವನ್ನು ರಚಿಸಿದೆ. ಇನ್ನೊಂದೆಡೆ ಬಿಜೆಪಿ ಪಕ್ಷಗಳಲ್ಲಿ ಒಡಕು ಸೃಷ್ಟಿಸಿ ಚುನಾಯಿತ ಸರ್ಕಾರಗಳನ್ನು ಅಧಿಕಾರದಿಂದ ಕೆಡವಿದೆ' ಎಂದು ವಾಗ್ದಾಳಿ ನಡೆಸಿದರು.</p>.<p>'ರಾಷ್ಟ್ರೀಯ ಹಿತಾಸಕ್ತಿಯನ್ನು ಬೆಂಬಲಿಸಲು ನಾವು ಪೂರ್ಣ ಹೃದಯದಿಂದ ಬಿಜೆಪಿಯನ್ನು ಬೆಂಬಲಿಸಿದೆವು. ಅವರು ರಾಷ್ಟ್ರಮಟ್ಟದಲ್ಲಿ ಮತ್ತು ನಾವು ಮಹಾರಾಷ್ಟ್ರದಲ್ಲಿ ಮುನ್ನಡೆಸಲಿದ್ದೇವೆ ಎಂಬ ಸ್ಪಷ್ಟ ತಿಳುವಳಿಕೆಯಿತ್ತು. ಆದರೆ ಅವರು ನಮಗೆ ದ್ರೋಹ ಬಗೆದರು ಮತ್ತು ನಮ್ಮನ್ನು ನಿರ್ನಾಮ ಮಾಡುವ ಪ್ರಯತ್ನ ಮಾಡಿದರು. ಈಗ ಅವರಿಗೆ ತಿರುಗೇಟು ನೀಡಿದ್ದೇವೆ. ಬಿಜೆಪಿ ಎಂದರೆ ಹಿಂದುತ್ವವಲ್ಲ. ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು 25 ವರ್ಷಗಳನ್ನು ವ್ಯರ್ಥ ಮಾಡಿದ್ದೇವೆಎಂಬ ಹೇಳಿಕೆಗೆ ನಾನು ಬದ್ಧನಾಗಿದ್ದೇನೆ' ಎಂದು ಪುನರುಚ್ಛರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಭಾರತೀಯ ಜನತಾ ಪಕ್ಷದೊಂದಿಗಿನ (ಬಿಜೆಪಿ) ಮೈತ್ರಿಯಿಂದ ಶಿವಸೇನಾ 25 ವರ್ಷಗಳನ್ನು ವ್ಯರ್ಥ ಮಾಡಿದೆ ಎಂದು ನಾನು ಈಗಲೂ ನಂಬಿದ್ದೇನೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ.</p>.<p>ಶಿವಸೇನೆಯುಸ್ವತಂತ್ರವಾಗಿ ಚುನಾವಣೆ ಎದುರಿಸಬೇಕು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಸವಾಲನ್ನು ಸ್ವೀಕರಿಸಿದ್ದೇನೆ. ಮಹಾರಾಷ್ಟ್ರದ ಹೊರಗೂ ಪಕ್ಷವನ್ನುವಿಸ್ತರಿಸಿ ದೇಶ ರಾಜಕಾರಣದಲ್ಲೂ ಪ್ರಮುಖ ಪಾತ್ರ ವಹಿಸುತ್ತೇವೆಎಂದು ಹೇಳಿದ್ದಾರೆ.</p>.<p>ಇದನ್ನೂ ಓದಿ:<a href="https://www.prajavani.net/india-news/shah-rakes-up-hindu-exodus-issue-again-seeks-votes-in-the-name-of-modi-bharat-mata-904480.html" itemprop="url">ಉತ್ತರ ಪ್ರದೇಶ: ಮತ್ತೆ ಮುನ್ನೆಲೆಗೆ ಬಂದ ಹಿಂದೂಗಳ ವಲಸೆ ವಿಚಾರ </a></p>.<p>'ಅಧಿಕಾರದ ಮೂಲಕ ಹಿಂದುತ್ವ ಅಜೆಂಡಾವನ್ನು ಮುಂದಕ್ಕೆ ಕೊಂಡೊಯ್ಯಲು ಬಿಜೆಪಿಯೊಂದಿಗೆ ಶಿವಸೇನಾ ಮೈತ್ರಿ ಮಾಡಿಕೊಂಡಿತ್ತು. ಶಿವಸೇನಾ ವೋಟಿಗಾಗಿ ಹಿಂದುತ್ವವನ್ನು ಎಂದೂ ಬಳಕೆ ಮಾಡಿಲ್ಲ. ಇನ್ನೊಂದೆಡೆ ಬಿಜೆಪಿ ರಾಜಕೀಯ ಲಾಭಕ್ಕಾಗಿ ಹಿಂದುತ್ವವನ್ನು ಬಳಸಿಕೊಂಡಿದೆ' ಎಂದು ಟೀಕಿಸಿದರು.</p>.<p>'ಬಿಜೆಪಿ ರಾಜಕೀಯವಾಗಿ ಬೆಳೆಯುತ್ತಿರುವಾಗ ಶಿವಸೇನಾ ಸೇರಿದಂತೆ ಹಲವು ಪ್ರಾದೇಶಿಕ ಪಕ್ಷಗಳೊಂದಿಗೆ ಹೊಂದಾಣಿಕೆ ಮಾಡಿಕೊಂಡಿತ್ತು. ಆಗ ಬಿಜೆಪಿ ಹಲವು ಕಡೆಗಳಲ್ಲಿ ಠೇವಣಿ ಕಳೆದುಕೊಂಡಿತ್ತು. ಹಿಂದುತ್ವಕ್ಕಾಗಿ ಅಧಿಕಾರ ಬೇಕು ಎಂಬ ಕಾರಣಕ್ಕೆ ಶಿವಸೇನಾ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿತ್ತು. ಸೇನೆಯು ಬಿಜೆಪಿಯೊಂದಿಗಿನ ಮೈತ್ರಿ ಕಡಿದುಕೊಂಡಿದೆ, ಹಿಂದುತ್ವವನ್ನಲ್ಲ! ಬಿಜೆಪಿಯ ಅವಕಾಶವಾದಿ ಹಿಂದುತ್ವ ಅಧಿಕಾರಕ್ಕಾಗಿ ಮಾತ್ರವಾಗಿದೆ' ಎಂದು ಆರೋಪಿಸಿದರು.</p>.<p>'ಅವಕಾಶವಾದಿ ರಾಜಕಾರಣದಿಂದಲೇ ಕಾಶ್ಮೀರದಲ್ಲಿ ಪಿಡಿಪಿ ಹಾಗೂ ಬಿಹಾರದಲ್ಲಿ ಸಂಘ ಮುಕ್ತಿಗಾಗಿ (ಆರ್ಎಸ್ಎಸ್) ಹೇಳಿಕೆ ನೀಡಿರುವ ನಿತೀಶ್ ಕುಮಾರ್ ಜೊತೆ ಬಿಜೆಪಿ ಮೈತ್ರಿ ಮಾಡಿಕೊಂಡಿತ್ತು. 2019ರಲ್ಲಿ ಸೇನೆಯು ಕಾಂಗ್ರೆಸ್ ಹಾಗೂ ಎನ್ಸಿಪಿ ಜೊತೆ ಸೇರಿಕೊಂಡು 'ಮಹಾ ವಿಕಾಸ್ ಆಘಾಡಿ' ಮೈತ್ರಿಕೂಟವನ್ನು ರಚಿಸಿದೆ. ಇನ್ನೊಂದೆಡೆ ಬಿಜೆಪಿ ಪಕ್ಷಗಳಲ್ಲಿ ಒಡಕು ಸೃಷ್ಟಿಸಿ ಚುನಾಯಿತ ಸರ್ಕಾರಗಳನ್ನು ಅಧಿಕಾರದಿಂದ ಕೆಡವಿದೆ' ಎಂದು ವಾಗ್ದಾಳಿ ನಡೆಸಿದರು.</p>.<p>'ರಾಷ್ಟ್ರೀಯ ಹಿತಾಸಕ್ತಿಯನ್ನು ಬೆಂಬಲಿಸಲು ನಾವು ಪೂರ್ಣ ಹೃದಯದಿಂದ ಬಿಜೆಪಿಯನ್ನು ಬೆಂಬಲಿಸಿದೆವು. ಅವರು ರಾಷ್ಟ್ರಮಟ್ಟದಲ್ಲಿ ಮತ್ತು ನಾವು ಮಹಾರಾಷ್ಟ್ರದಲ್ಲಿ ಮುನ್ನಡೆಸಲಿದ್ದೇವೆ ಎಂಬ ಸ್ಪಷ್ಟ ತಿಳುವಳಿಕೆಯಿತ್ತು. ಆದರೆ ಅವರು ನಮಗೆ ದ್ರೋಹ ಬಗೆದರು ಮತ್ತು ನಮ್ಮನ್ನು ನಿರ್ನಾಮ ಮಾಡುವ ಪ್ರಯತ್ನ ಮಾಡಿದರು. ಈಗ ಅವರಿಗೆ ತಿರುಗೇಟು ನೀಡಿದ್ದೇವೆ. ಬಿಜೆಪಿ ಎಂದರೆ ಹಿಂದುತ್ವವಲ್ಲ. ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು 25 ವರ್ಷಗಳನ್ನು ವ್ಯರ್ಥ ಮಾಡಿದ್ದೇವೆಎಂಬ ಹೇಳಿಕೆಗೆ ನಾನು ಬದ್ಧನಾಗಿದ್ದೇನೆ' ಎಂದು ಪುನರುಚ್ಛರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>