<p>ಶಶಿ ತರೂರ್ ಬಣ ಬಿಜೆಪಿ ಸೇರುತ್ತದೆ ಎಂಬ ಅಸ್ಸಾಂ ಮುಖ್ಯಮಂತ್ರಿ ಹಿಮವಂತ್ ಬಿಸ್ವಾ ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಮುಖಂಡ ಸಲ್ಮಾನ್ ಅನೀಸ್, ತಾನು ಕೂಡ ಶಶಿ ತರೂರ್ಗೆ ಮತ ಹಾಕಿದ್ದು ಯಾವುದೇ ಕಾರಣಕ್ಕೆ ಬಿಜೆಪಿ ಸೇರುವುದಿಲ್ಲ ಎಂದು ತಿರುಗೇಟು ನೀಡಿದ್ದಾರೆ.</p>.<p>ಈ ಬಗ್ಗೆ ಟ್ವೀಟ್ ಮಾಡಿರುವ ಅನೀಸ್, ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಶಶಿ ತರೂರ್ಗೆ ಮತ ಹಾಕಿರುವ 1072 ಮಂದಿಯಲ್ಲಿ ನಾನು ಒಬ್ಬ. ನಾವು ಸೋತಿದ್ದೇವೆ. ಆದರೆ ಪಕ್ಷದ ಆಂತರಿಕ ಪ್ರಜಾಪ್ರಭುತ್ವ ಗೆದ್ದಿದೆ. ಕೇವಲ ಬಿಜೆಪಿ ಒಂದೇ ಉಳಿದುಕೊಂಡರು ಕೂಡ ಆ ಪಕ್ಷ ಸೇರುವುದಿಲ್ಲ. ಅದು ಸಾಕಷ್ಟು ಮತಾಂಧರು, ಹೇಡಿಗಳು ಮತ್ತು ಅವಕಾಶವಾದಿಗಳನ್ನು ಹೊಂದಿರುವ ಪಕ್ಷ ಎಂದಿದ್ದಾರೆ.</p>.<p>ಜೈರಾಂ ರಮೇಶ್ ಪ್ರತಿಕ್ರಿಯಿಸಿ ಹಿಮವಂತ್ ರೀತಿಯ ಬಕ್ವಾಸ್ಗಳಿಗೆ ಯಾವುದೇ ಮಿತಿಯಿಲ್ಲ ಎಂದಿದ್ದಾರೆ. ಖಾಸಗಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅಸ್ಸಾ ಮುಖ್ಯಮಂತ್ರಿ ಹಿಮವಂತ್ ಬಿಸ್ವಾ ಶಶಿ ತರೂರ್ಗೆ ಮತ ಚಲಾಯಿಸಿದ್ದ 1000 ಕಾಂಗ್ರೆಸ್ ಮುಖಂಡರು ಬಿಜೆಪಿ ಸೇರುತ್ತಾರೆ ಎಂದಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಶಿ ತರೂರ್ ಬಣ ಬಿಜೆಪಿ ಸೇರುತ್ತದೆ ಎಂಬ ಅಸ್ಸಾಂ ಮುಖ್ಯಮಂತ್ರಿ ಹಿಮವಂತ್ ಬಿಸ್ವಾ ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಮುಖಂಡ ಸಲ್ಮಾನ್ ಅನೀಸ್, ತಾನು ಕೂಡ ಶಶಿ ತರೂರ್ಗೆ ಮತ ಹಾಕಿದ್ದು ಯಾವುದೇ ಕಾರಣಕ್ಕೆ ಬಿಜೆಪಿ ಸೇರುವುದಿಲ್ಲ ಎಂದು ತಿರುಗೇಟು ನೀಡಿದ್ದಾರೆ.</p>.<p>ಈ ಬಗ್ಗೆ ಟ್ವೀಟ್ ಮಾಡಿರುವ ಅನೀಸ್, ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಶಶಿ ತರೂರ್ಗೆ ಮತ ಹಾಕಿರುವ 1072 ಮಂದಿಯಲ್ಲಿ ನಾನು ಒಬ್ಬ. ನಾವು ಸೋತಿದ್ದೇವೆ. ಆದರೆ ಪಕ್ಷದ ಆಂತರಿಕ ಪ್ರಜಾಪ್ರಭುತ್ವ ಗೆದ್ದಿದೆ. ಕೇವಲ ಬಿಜೆಪಿ ಒಂದೇ ಉಳಿದುಕೊಂಡರು ಕೂಡ ಆ ಪಕ್ಷ ಸೇರುವುದಿಲ್ಲ. ಅದು ಸಾಕಷ್ಟು ಮತಾಂಧರು, ಹೇಡಿಗಳು ಮತ್ತು ಅವಕಾಶವಾದಿಗಳನ್ನು ಹೊಂದಿರುವ ಪಕ್ಷ ಎಂದಿದ್ದಾರೆ.</p>.<p>ಜೈರಾಂ ರಮೇಶ್ ಪ್ರತಿಕ್ರಿಯಿಸಿ ಹಿಮವಂತ್ ರೀತಿಯ ಬಕ್ವಾಸ್ಗಳಿಗೆ ಯಾವುದೇ ಮಿತಿಯಿಲ್ಲ ಎಂದಿದ್ದಾರೆ. ಖಾಸಗಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅಸ್ಸಾ ಮುಖ್ಯಮಂತ್ರಿ ಹಿಮವಂತ್ ಬಿಸ್ವಾ ಶಶಿ ತರೂರ್ಗೆ ಮತ ಚಲಾಯಿಸಿದ್ದ 1000 ಕಾಂಗ್ರೆಸ್ ಮುಖಂಡರು ಬಿಜೆಪಿ ಸೇರುತ್ತಾರೆ ಎಂದಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>