ಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್ ಹಾಗೂ ಗೋವಾ ರಾಜ್ಯಗಳ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವುದಾಗಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಘೋಷಿಸಿದೆ. ಈ ಚುನಾವಣೆಗಳಿಗಾಗಿ ಮತದಾರರನ್ನು ಸೆಳೆಯಲುಕೇಜ್ರಿವಾಲ್ ಮೃದು ಹಿಂದುತ್ವದತ್ತ ವಾಲುತ್ತಿದ್ದಾರೆ ಎನ್ನಲಾಗಿದೆ. ಇತ್ತೀಚೆಗಷ್ಟೇ ಅವರು ಅಯೋಧ್ಯೆ ರಾಮಜನ್ಮಭೂಮಿಗೂ ಭೇಟಿ ನೀಡಿದ್ದರು. ಅಲ್ಲದೇ ದೆಹಲಿ ಹಿರಿಯ ನಾಗರಿಕರಿಗೆ ಉಚಿತ ತೀರ್ಥಯಾತ್ರೆಗಾಗಿ ಯೋಜನೆ ಪ್ರಕಟಿಸಿದ್ದರು.