<p><strong>ನವದೆಹಲಿ</strong>: ‘ಭಾರತ ದೇಶದ 130 ಕೋಟಿ ಜನ ಒಗ್ಗಟ್ಟಿನಿಂದ ಇರುವುದೇ ನಿಜವಾದ ಹಿಂದುತ್ವ’ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.</p>.<p>ಖಾಸಗಿ ಸುದ್ದಿವಾಹಿನಿಗೆ ನೀಡಿರುವ ಸಂದರ್ಶನದಲ್ಲಿ ಅವರು, ತಾವು ಮೃದು ಹಿಂದುತ್ವದತ್ತ ಹೊರಳುತ್ತಿರುವುದನ್ನುತಳ್ಳಿ ಹಾಕಿದ್ದಾರೆ. ‘ಮೃದು ಹಿಂದುತ್ವ ಎಂಬುದು ನನಗೆ ಗೊತ್ತಿಲ್ಲ. ಬೇಕಾಗಿರುವುದು ನಿಜವಾದ ಹಿಂದುತ್ವ. ಈ ದೇಶದ 130 ಕೋಟಿ ಜನ ಒಬ್ಬರಿಗೊಬ್ಬರು ಮಾನವೀಯತೆಯಿಂದ ಬದುಕುವುದೇ ನಿಜವಾದ ಹಿಂದುತ್ವ. ಇದನ್ನೇ ನಮ್ಮ ಪಕ್ಷ ಬೆಂಬಲಿಸುತ್ತದೆ’ಎಂದು ತಿಳಿಸಿದ್ದಾರೆ.</p>.<p>ಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್ ಹಾಗೂ ಗೋವಾ ರಾಜ್ಯಗಳ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವುದಾಗಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಘೋಷಿಸಿದೆ. ಈ ಚುನಾವಣೆಗಳಿಗಾಗಿ ಮತದಾರರನ್ನು ಸೆಳೆಯಲುಕೇಜ್ರಿವಾಲ್ ಮೃದು ಹಿಂದುತ್ವದತ್ತ ವಾಲುತ್ತಿದ್ದಾರೆ ಎನ್ನಲಾಗಿದೆ. ಇತ್ತೀಚೆಗಷ್ಟೇ ಅವರು ಅಯೋಧ್ಯೆ ರಾಮಜನ್ಮಭೂಮಿಗೂ ಭೇಟಿ ನೀಡಿದ್ದರು. ಅಲ್ಲದೇ ದೆಹಲಿ ಹಿರಿಯ ನಾಗರಿಕರಿಗೆ ಉಚಿತ ತೀರ್ಥಯಾತ್ರೆಗಾಗಿ ಯೋಜನೆ ಪ್ರಕಟಿಸಿದ್ದರು.</p>.<p>‘ಧರ್ಮದ ಹೆಸರಿನಲ್ಲಿ ಜನರನ್ನು ಬೇರ್ಪಡಿಸುವುದು, ಗಲಭೆಗಳನ್ನು ಹುಟ್ಟುಹಾಕುವುದು, ದಲಿತರ ಮೇಲೆ ಹಲ್ಲೆ ಮಾಡುವುದು ಹಿಂದುತ್ವ ಅಲ್ಲ. ಎಲ್ಲರೂ ಪರಸ್ಪರ ಮಾನವೀಯತೆಯಿಂದ ಬದುಕುವುದೇ ಹಿಂದುತ್ವ’ಎಂದು ಕೇಜ್ರಿವಾಲ್ ಪ್ರತಿಪಾದಿಸಿದ್ದಾರೆ.</p>.<p>‘ಅಯೋಧ್ಯೆಯಲ್ಲಿ ರಾಮನ ದರ್ಶನ ಮಾಡಿದರೆ, ದೀಪಾವಳಿ ಆಚರಿಸಿದರೇ ಅದೇನು ಪಾಪವೇ?‘ ಎಂದು ಪ್ರಶ್ನಿಸಿರುವ ಅವರು, ‘ಇವತ್ತು ದೇಶದಲ್ಲಿ ಹಿಂದುತ್ವದ ಹೆಸರಿನಲ್ಲಿ ನಡೆಯುತ್ತಿರುವುದು ನಿಜವಾದ ಹಿಂದುತ್ವ ಅಲ್ಲ’ಎಂದು ಪರೋಕ್ಷವಾಗಿ ಹೇಳಿದ್ದಾರೆ.</p>.<p>‘ದೇಶದಲ್ಲಿ ಜನ ದೆಹಲಿ ಮಾದರಿ ಸರ್ಕಾರ ಬೇಕು ಎಂಬ ಕನಸು ಕಾಣುತ್ತಿದ್ದಾರೆ. ಈ ನಿಟ್ಟಿನಲ್ಲಿಉತ್ತರಾಖಂಡ, ಪಂಜಾಬ್ ಹಾಗೂ ಗೋವಾ ರಾಜ್ಯಗಳ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲಾಗುತ್ತಿದೆ’ಎಂದು ಹೇಳಿದ್ದಾರೆ.</p>.<p><strong>ಇದನ್ನೂ ಓದಿ:<a href="https://www.prajavani.net/karnataka-news/central-home-ministry-secret-investigating-hacking-shree-krishna-who-involved-in-bitcoin-hacking-and-882702.html" target="_blank">ಬಿಟ್ ಕಾಯಿನ್: ‘ಅಮಿತ’ ತನಿಖೆ, ಕೇಂದ್ರ ಗೃಹ ಸಚಿವಾಲಯದಿಂದ ರಹಸ್ಯ ಕಾರ್ಯಾಚರಣೆ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ‘ಭಾರತ ದೇಶದ 130 ಕೋಟಿ ಜನ ಒಗ್ಗಟ್ಟಿನಿಂದ ಇರುವುದೇ ನಿಜವಾದ ಹಿಂದುತ್ವ’ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.</p>.<p>ಖಾಸಗಿ ಸುದ್ದಿವಾಹಿನಿಗೆ ನೀಡಿರುವ ಸಂದರ್ಶನದಲ್ಲಿ ಅವರು, ತಾವು ಮೃದು ಹಿಂದುತ್ವದತ್ತ ಹೊರಳುತ್ತಿರುವುದನ್ನುತಳ್ಳಿ ಹಾಕಿದ್ದಾರೆ. ‘ಮೃದು ಹಿಂದುತ್ವ ಎಂಬುದು ನನಗೆ ಗೊತ್ತಿಲ್ಲ. ಬೇಕಾಗಿರುವುದು ನಿಜವಾದ ಹಿಂದುತ್ವ. ಈ ದೇಶದ 130 ಕೋಟಿ ಜನ ಒಬ್ಬರಿಗೊಬ್ಬರು ಮಾನವೀಯತೆಯಿಂದ ಬದುಕುವುದೇ ನಿಜವಾದ ಹಿಂದುತ್ವ. ಇದನ್ನೇ ನಮ್ಮ ಪಕ್ಷ ಬೆಂಬಲಿಸುತ್ತದೆ’ಎಂದು ತಿಳಿಸಿದ್ದಾರೆ.</p>.<p>ಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್ ಹಾಗೂ ಗೋವಾ ರಾಜ್ಯಗಳ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವುದಾಗಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಘೋಷಿಸಿದೆ. ಈ ಚುನಾವಣೆಗಳಿಗಾಗಿ ಮತದಾರರನ್ನು ಸೆಳೆಯಲುಕೇಜ್ರಿವಾಲ್ ಮೃದು ಹಿಂದುತ್ವದತ್ತ ವಾಲುತ್ತಿದ್ದಾರೆ ಎನ್ನಲಾಗಿದೆ. ಇತ್ತೀಚೆಗಷ್ಟೇ ಅವರು ಅಯೋಧ್ಯೆ ರಾಮಜನ್ಮಭೂಮಿಗೂ ಭೇಟಿ ನೀಡಿದ್ದರು. ಅಲ್ಲದೇ ದೆಹಲಿ ಹಿರಿಯ ನಾಗರಿಕರಿಗೆ ಉಚಿತ ತೀರ್ಥಯಾತ್ರೆಗಾಗಿ ಯೋಜನೆ ಪ್ರಕಟಿಸಿದ್ದರು.</p>.<p>‘ಧರ್ಮದ ಹೆಸರಿನಲ್ಲಿ ಜನರನ್ನು ಬೇರ್ಪಡಿಸುವುದು, ಗಲಭೆಗಳನ್ನು ಹುಟ್ಟುಹಾಕುವುದು, ದಲಿತರ ಮೇಲೆ ಹಲ್ಲೆ ಮಾಡುವುದು ಹಿಂದುತ್ವ ಅಲ್ಲ. ಎಲ್ಲರೂ ಪರಸ್ಪರ ಮಾನವೀಯತೆಯಿಂದ ಬದುಕುವುದೇ ಹಿಂದುತ್ವ’ಎಂದು ಕೇಜ್ರಿವಾಲ್ ಪ್ರತಿಪಾದಿಸಿದ್ದಾರೆ.</p>.<p>‘ಅಯೋಧ್ಯೆಯಲ್ಲಿ ರಾಮನ ದರ್ಶನ ಮಾಡಿದರೆ, ದೀಪಾವಳಿ ಆಚರಿಸಿದರೇ ಅದೇನು ಪಾಪವೇ?‘ ಎಂದು ಪ್ರಶ್ನಿಸಿರುವ ಅವರು, ‘ಇವತ್ತು ದೇಶದಲ್ಲಿ ಹಿಂದುತ್ವದ ಹೆಸರಿನಲ್ಲಿ ನಡೆಯುತ್ತಿರುವುದು ನಿಜವಾದ ಹಿಂದುತ್ವ ಅಲ್ಲ’ಎಂದು ಪರೋಕ್ಷವಾಗಿ ಹೇಳಿದ್ದಾರೆ.</p>.<p>‘ದೇಶದಲ್ಲಿ ಜನ ದೆಹಲಿ ಮಾದರಿ ಸರ್ಕಾರ ಬೇಕು ಎಂಬ ಕನಸು ಕಾಣುತ್ತಿದ್ದಾರೆ. ಈ ನಿಟ್ಟಿನಲ್ಲಿಉತ್ತರಾಖಂಡ, ಪಂಜಾಬ್ ಹಾಗೂ ಗೋವಾ ರಾಜ್ಯಗಳ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲಾಗುತ್ತಿದೆ’ಎಂದು ಹೇಳಿದ್ದಾರೆ.</p>.<p><strong>ಇದನ್ನೂ ಓದಿ:<a href="https://www.prajavani.net/karnataka-news/central-home-ministry-secret-investigating-hacking-shree-krishna-who-involved-in-bitcoin-hacking-and-882702.html" target="_blank">ಬಿಟ್ ಕಾಯಿನ್: ‘ಅಮಿತ’ ತನಿಖೆ, ಕೇಂದ್ರ ಗೃಹ ಸಚಿವಾಲಯದಿಂದ ರಹಸ್ಯ ಕಾರ್ಯಾಚರಣೆ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>