ಇಲ್ಲಿಗೆ ಸಮೀಪದ ದುಂಡಿಗಲ್ನಲ್ಲಿನ ವಾಯುಪಡೆ ಅಕಾಡೆಮಿಯಲ್ಲಿ ನಡೆದ ಪದವಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,‘ಹೆಲಿಕಾಪ್ಟರ್ ದುರಂತಕ್ಕೆ ಕಾರಣಗಳೇನು? ಮುಂದಿನ ಪರಿಹಾರ ಕ್ರಮಗಳು ಯಾವುವು ಎಂಬುದರ ಕುರಿತು ತರಾತುರಿಯಾಗಿ ಹೇಳಲು ಸಾಧ್ಯವಿಲ್ಲ. ನ್ಯಾಯಾಲಯವು ನೇಮಿಸಿದ ತನಿಖಾ ತಂಡವು ಈ ಕುರಿತು ತನಿಖೆ ನಡೆಸುತ್ತಿದ್ದು, ತನಿಖೆ ಪೂರ್ಣವಾಗದ ಹೊರತು ಪೂರ್ವಭಾವಿಯಾಗಿ ನಾನು ಯಾವುದೇ ವಿವರ, ಮಾಹಿತಿಯನ್ನು ಹಂಚಿಕೊಳ್ಳಲು ಬರುವುದಿಲ್ಲ’ ಎಂದೂ ಅವರು ತಿಳಿಸಿದ್ದಾರೆ.