<p><strong>ಶ್ರೀನಗರ: </strong>ಭಾರತೀಯ ವಾಯುಪಡೆಯು (ಐಎಎಫ್) ಇದೇ 26ರಂದು ಇಲ್ಲಿನ ಪ್ರಸಿದ್ಧ ದಾಲ್ ಸರೋವರದ ಮೇಲೆ ‘ಏರ್ ಶೋ’ ನಡೆಸಲಿದೆ.</p>.<p>ಜಮ್ಮು ಮತ್ತು ಕಾಶ್ಮೀರದ ಯುವ ಸಮುದಾಯವನ್ನು ಐಎಎಫ್ ಸೇರುವಂತೆ ಪ್ರೇರೇಪಿಸುವುದು ಈ ಕಾರ್ಯಕ್ರಮದ ಉದ್ದೇಶ ಎಂದು ಐಎಎಫ್ನ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ವಿವಿಧ ಶಾಲಾ, ಕಾಲೇಜುಗಳ 3 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರದರ್ಶನದಲ್ಲಿ ಭಾಗವಹಿಸಲಿದ್ದಾರೆ ಎಂದ ಅವರು ಹೇಳಿದ್ದಾರೆ.</p>.<p>ಈ ಕುರಿತು ಮಾಹಿತಿ ನೀಡಿದ ಕಾಶ್ಮೀರದ ವಿಭಾಗೀಯ ಆಯುಕ್ತ ಪಾಂಡುರಂಗ ಕೆ. ಪೋಲ್ ಅವರು, ವಾಯು ಪ್ರದರ್ಶನದ ಮುಖ್ಯ ಉದ್ದೇಶವು ಕಣಿವೆಯ ಯುವ ಸಮುದಾಯವನ್ನು ಭಾರತೀಯ ವಾಯುಪಡೆಗೆ ಸೇರಲು ಪ್ರೇರೇಪಿಸುವುದು ಹಾಗೂ ಈ ಪ್ರದೇಶದಲ್ಲಿನ ಪ್ರವಾಸೋದ್ಯಮವನ್ನು ಉತ್ತೇಜಿಸುವುದಾಗಿದೆ ಎಂದರು.</p>.<p>‘ಆಜಾದಿ ಕಾ ಅಮೃತ್ ಮಹೋತ್ಸವ’ ಆಚರಣೆಯ ಭಾಗವಾಗಿ ಐಎಎಫ್ ಈ ಪ್ರದರ್ಶನ ಏರ್ಪಡಿಸಿದೆ. ‘ನಿಮ್ಮ ಕನಸುಗಳಿಗೆ ರೆಕ್ಕೆ ನೀಡಿ’ ಎಂಬುದು ಈ ಕಾರ್ಯಕ್ರಮದ ‘ಥೀಮ್’ ಆಗಿದೆ ಎಂದು ಅವರು ತಿಳಿಸಿದರು. ವಿದ್ಯಾರ್ಥಿಗಳೊಂದಿಗೆ 700 ಶಿಕ್ಷಕರೂ ಪ್ರದರ್ಶನ ವೀಕ್ಷಿಸಲಿದ್ದಾರೆ.</p>.<p><strong>ಇದನ್ನೂ ಓದಿ... <a href="https://www.prajavani.net/india-news/india-top-source-of-social-media-misinformation-on-covid-19-study-866760.html" target="_blank">ಕೋವಿಡ್ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ತಪ್ಪು ಮಾಹಿತಿ, ಭಾರತವೇ ಮುಂದು: ಅಧ್ಯಯನ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ: </strong>ಭಾರತೀಯ ವಾಯುಪಡೆಯು (ಐಎಎಫ್) ಇದೇ 26ರಂದು ಇಲ್ಲಿನ ಪ್ರಸಿದ್ಧ ದಾಲ್ ಸರೋವರದ ಮೇಲೆ ‘ಏರ್ ಶೋ’ ನಡೆಸಲಿದೆ.</p>.<p>ಜಮ್ಮು ಮತ್ತು ಕಾಶ್ಮೀರದ ಯುವ ಸಮುದಾಯವನ್ನು ಐಎಎಫ್ ಸೇರುವಂತೆ ಪ್ರೇರೇಪಿಸುವುದು ಈ ಕಾರ್ಯಕ್ರಮದ ಉದ್ದೇಶ ಎಂದು ಐಎಎಫ್ನ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ವಿವಿಧ ಶಾಲಾ, ಕಾಲೇಜುಗಳ 3 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರದರ್ಶನದಲ್ಲಿ ಭಾಗವಹಿಸಲಿದ್ದಾರೆ ಎಂದ ಅವರು ಹೇಳಿದ್ದಾರೆ.</p>.<p>ಈ ಕುರಿತು ಮಾಹಿತಿ ನೀಡಿದ ಕಾಶ್ಮೀರದ ವಿಭಾಗೀಯ ಆಯುಕ್ತ ಪಾಂಡುರಂಗ ಕೆ. ಪೋಲ್ ಅವರು, ವಾಯು ಪ್ರದರ್ಶನದ ಮುಖ್ಯ ಉದ್ದೇಶವು ಕಣಿವೆಯ ಯುವ ಸಮುದಾಯವನ್ನು ಭಾರತೀಯ ವಾಯುಪಡೆಗೆ ಸೇರಲು ಪ್ರೇರೇಪಿಸುವುದು ಹಾಗೂ ಈ ಪ್ರದೇಶದಲ್ಲಿನ ಪ್ರವಾಸೋದ್ಯಮವನ್ನು ಉತ್ತೇಜಿಸುವುದಾಗಿದೆ ಎಂದರು.</p>.<p>‘ಆಜಾದಿ ಕಾ ಅಮೃತ್ ಮಹೋತ್ಸವ’ ಆಚರಣೆಯ ಭಾಗವಾಗಿ ಐಎಎಫ್ ಈ ಪ್ರದರ್ಶನ ಏರ್ಪಡಿಸಿದೆ. ‘ನಿಮ್ಮ ಕನಸುಗಳಿಗೆ ರೆಕ್ಕೆ ನೀಡಿ’ ಎಂಬುದು ಈ ಕಾರ್ಯಕ್ರಮದ ‘ಥೀಮ್’ ಆಗಿದೆ ಎಂದು ಅವರು ತಿಳಿಸಿದರು. ವಿದ್ಯಾರ್ಥಿಗಳೊಂದಿಗೆ 700 ಶಿಕ್ಷಕರೂ ಪ್ರದರ್ಶನ ವೀಕ್ಷಿಸಲಿದ್ದಾರೆ.</p>.<p><strong>ಇದನ್ನೂ ಓದಿ... <a href="https://www.prajavani.net/india-news/india-top-source-of-social-media-misinformation-on-covid-19-study-866760.html" target="_blank">ಕೋವಿಡ್ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ತಪ್ಪು ಮಾಹಿತಿ, ಭಾರತವೇ ಮುಂದು: ಅಧ್ಯಯನ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>