<p><strong>ನವದೆಹಲಿ: </strong>ಕೋವಿಡ್ನಿಂದ ಮೃತರಾದವರ ಲೆಕ್ಕಾಚಾರದಲ್ಲಿ ಏರುಪೇರಾಗಿರುವ ಕುರಿತು ಗೊಂದಲ ಉಂಟಾಗಿದ್ದು, ಪ್ರತಿಯೊಂದು ಸಾವಿನ ಲೆಕ್ಕಪರಿಶೋಧನೆ ಆಗಬೇಕು ಎಂದು ಎಲ್ಲ ಜಿಲ್ಲಾಡಳಿತಗಳಿಗೆ ಭಾರತೀಯ ವೈದ್ಯಕೀಯ ಸಂಶೋಧನಾ ಪರಿಷತ್ (ಐಸಿಎಂಆರ್) ಸೂಚನೆ ನೀಡಿದೆ.</p>.<p>ಸಾವಿನ ಲೆಕ್ಕಪರಿಶೋಧನೆಯಿಂದ ಸಮುದಾಯ ಮತ್ತು ಆಸ್ಪತ್ರೆಯ ಮಟ್ಟದಲ್ಲಿ ತಡೆಗಟ್ಟಬಹುದಾಗಿದ್ದ ಸಾವಿನ ಕಾರಣಗಳನ್ನು ಗುರುತಿಸಬಹುದು. ಅಲ್ಲದೇ ಆಂಬ್ಯುಲೆನ್ಸ್ಗಳ ಲಭ್ಯತೆ ಮತ್ತು ಚಿಕಿತ್ಸೆಯಲ್ಲಿನ ನ್ಯೂನತೆಗಳನ್ನು ಸಹ ತಿಳಿಬಹುದು ಎಂದು ವರದಿ ತಿಳಿಸಿದೆ.</p>.<p>ಪಟ್ನಾ ಹೈಕೋರ್ಟ್ನ ಸೂಚನೆಯ ಮೇರೆಗೆ ಪ್ರತಿ ಜಿಲ್ಲೆಯಲ್ಲೂ ಸಾವಿನ ಲೆಕ್ಕಪರಿಶೋಧನೆ ನಡೆಸಿದ್ದ ಬಿಹಾರದಲ್ಲಿ ಕೋವಿಡ್ ಸಾವಿನ ಸಂಖ್ಯೆಯಲ್ಲಿ ಭಾರಿ ವ್ಯತ್ಯಾಸ ಕಂಡುಬಂದಿತ್ತು. ಇದೇ ಸಮಯದಲ್ಲಿ ಚೆನ್ನೈನಲ್ಲಿರುವ ಐಸಿಎಂಆರ್ನ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಎಪಿಡೆಮಿಯಾಲಜಿ ಸಿದ್ಧಪಡಿಸಿದ ವರದಿಯೂ ಪ್ರಕಟವಾಗಿದೆ.</p>.<p>ಕಳೆದ ಮೂರು ದಿನಗಳಿಂದ, ಮಹಾರಾಷ್ಟ್ರವು ತನ್ನ ಕೋವಿಡ್ ಸಾವಿನ ಸಂಖ್ಯೆಗಳನ್ನು ಪರಿಷ್ಕರಿಸುತ್ತಿದೆ. ಕಳೆದ 72 ಗಂಟೆಗಳಲ್ಲಿ 6,490 ಕೋವಿಡ್ ಸಾವುಗಳನ್ನು ಪಟ್ಟಿಗೆ ಸೇರಿಸಿದೆ. ಮಧ್ಯಪ್ರದೇಶ ಮತ್ತು ಗುಜರಾತ್ ಮಂಡಿಸಿದ ಅಧಿಕೃತ ಕೋವಿಡ್-19 ಸಾವಿನ ಸಂಖ್ಯೆಯಲ್ಲಿ ಅನುಮಾನ ಮೂಡುತ್ತಿರುವ ವರದಿಗಳಿವೆ.</p>.<p>ಕಡಿಮೆ ಸಂಖ್ಯೆಯ ದೈನಂದಿನ ಸಾವುಗಳನ್ನು ನಿರಂತರವಾಗಿ ವರದಿ ಮಾಡುವ ರಾಜ್ಯಗಳು ತಮ್ಮ ದತ್ತಾಂಶವನ್ನು ಮರುಪರಿಶೀಲಿಸುವಂತೆ ಕೇಳಿಕೊಳ್ಳಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.</p>.<p>‘ಕೋವಿಡ್ನಂತಹ ದೀರ್ಘಕಾಲದ ಸಾಂಕ್ರಾಮಿಕ ರೋಗದ ಸಮಯದಲ್ಲಿ ಸಾವಿನ ಸಂಖ್ಯೆಯಲ್ಲಿ ವ್ಯತ್ಯಾಸಗಳು ಆಗುವುದು ಸಾಮಾನ್ಯ. ಆದರೆ ಭಾರತದ ಕೋವಿಡ್ ನಿಯಂತ್ರಣ ವ್ಯವಸ್ಥೆಯಲ್ಲಿ ಡ್ಯಾಶ್ಬೋರ್ಡ್ ಅನುಪಸ್ಥಿತಿಯಿಂದ ಈ ರೀತಿ ಆಗಿದೆ. ಪ್ರತಿ ಜಿಲ್ಲೆಯು ಪ್ರತೀವಾರವೂ ಸಾವಿನ ಲೆಕ್ಕ ಹಾಕಬೇಕು. ಮೃತರ ಲಿಂಗ, ವಯಸ್ಸು, ಪ್ರದೇಶ ಮೊದಲಾದ ಮಾಹಿತಿಯನ್ನು ವಿಶ್ಲೇಷಣೆಗೆ ಒಳಪಡಿಸಬೇಕು’ ಎಂದು ಸಂಸ್ಥೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಕೋವಿಡ್ನಿಂದ ಮೃತರಾದವರ ಲೆಕ್ಕಾಚಾರದಲ್ಲಿ ಏರುಪೇರಾಗಿರುವ ಕುರಿತು ಗೊಂದಲ ಉಂಟಾಗಿದ್ದು, ಪ್ರತಿಯೊಂದು ಸಾವಿನ ಲೆಕ್ಕಪರಿಶೋಧನೆ ಆಗಬೇಕು ಎಂದು ಎಲ್ಲ ಜಿಲ್ಲಾಡಳಿತಗಳಿಗೆ ಭಾರತೀಯ ವೈದ್ಯಕೀಯ ಸಂಶೋಧನಾ ಪರಿಷತ್ (ಐಸಿಎಂಆರ್) ಸೂಚನೆ ನೀಡಿದೆ.</p>.<p>ಸಾವಿನ ಲೆಕ್ಕಪರಿಶೋಧನೆಯಿಂದ ಸಮುದಾಯ ಮತ್ತು ಆಸ್ಪತ್ರೆಯ ಮಟ್ಟದಲ್ಲಿ ತಡೆಗಟ್ಟಬಹುದಾಗಿದ್ದ ಸಾವಿನ ಕಾರಣಗಳನ್ನು ಗುರುತಿಸಬಹುದು. ಅಲ್ಲದೇ ಆಂಬ್ಯುಲೆನ್ಸ್ಗಳ ಲಭ್ಯತೆ ಮತ್ತು ಚಿಕಿತ್ಸೆಯಲ್ಲಿನ ನ್ಯೂನತೆಗಳನ್ನು ಸಹ ತಿಳಿಬಹುದು ಎಂದು ವರದಿ ತಿಳಿಸಿದೆ.</p>.<p>ಪಟ್ನಾ ಹೈಕೋರ್ಟ್ನ ಸೂಚನೆಯ ಮೇರೆಗೆ ಪ್ರತಿ ಜಿಲ್ಲೆಯಲ್ಲೂ ಸಾವಿನ ಲೆಕ್ಕಪರಿಶೋಧನೆ ನಡೆಸಿದ್ದ ಬಿಹಾರದಲ್ಲಿ ಕೋವಿಡ್ ಸಾವಿನ ಸಂಖ್ಯೆಯಲ್ಲಿ ಭಾರಿ ವ್ಯತ್ಯಾಸ ಕಂಡುಬಂದಿತ್ತು. ಇದೇ ಸಮಯದಲ್ಲಿ ಚೆನ್ನೈನಲ್ಲಿರುವ ಐಸಿಎಂಆರ್ನ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಎಪಿಡೆಮಿಯಾಲಜಿ ಸಿದ್ಧಪಡಿಸಿದ ವರದಿಯೂ ಪ್ರಕಟವಾಗಿದೆ.</p>.<p>ಕಳೆದ ಮೂರು ದಿನಗಳಿಂದ, ಮಹಾರಾಷ್ಟ್ರವು ತನ್ನ ಕೋವಿಡ್ ಸಾವಿನ ಸಂಖ್ಯೆಗಳನ್ನು ಪರಿಷ್ಕರಿಸುತ್ತಿದೆ. ಕಳೆದ 72 ಗಂಟೆಗಳಲ್ಲಿ 6,490 ಕೋವಿಡ್ ಸಾವುಗಳನ್ನು ಪಟ್ಟಿಗೆ ಸೇರಿಸಿದೆ. ಮಧ್ಯಪ್ರದೇಶ ಮತ್ತು ಗುಜರಾತ್ ಮಂಡಿಸಿದ ಅಧಿಕೃತ ಕೋವಿಡ್-19 ಸಾವಿನ ಸಂಖ್ಯೆಯಲ್ಲಿ ಅನುಮಾನ ಮೂಡುತ್ತಿರುವ ವರದಿಗಳಿವೆ.</p>.<p>ಕಡಿಮೆ ಸಂಖ್ಯೆಯ ದೈನಂದಿನ ಸಾವುಗಳನ್ನು ನಿರಂತರವಾಗಿ ವರದಿ ಮಾಡುವ ರಾಜ್ಯಗಳು ತಮ್ಮ ದತ್ತಾಂಶವನ್ನು ಮರುಪರಿಶೀಲಿಸುವಂತೆ ಕೇಳಿಕೊಳ್ಳಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.</p>.<p>‘ಕೋವಿಡ್ನಂತಹ ದೀರ್ಘಕಾಲದ ಸಾಂಕ್ರಾಮಿಕ ರೋಗದ ಸಮಯದಲ್ಲಿ ಸಾವಿನ ಸಂಖ್ಯೆಯಲ್ಲಿ ವ್ಯತ್ಯಾಸಗಳು ಆಗುವುದು ಸಾಮಾನ್ಯ. ಆದರೆ ಭಾರತದ ಕೋವಿಡ್ ನಿಯಂತ್ರಣ ವ್ಯವಸ್ಥೆಯಲ್ಲಿ ಡ್ಯಾಶ್ಬೋರ್ಡ್ ಅನುಪಸ್ಥಿತಿಯಿಂದ ಈ ರೀತಿ ಆಗಿದೆ. ಪ್ರತಿ ಜಿಲ್ಲೆಯು ಪ್ರತೀವಾರವೂ ಸಾವಿನ ಲೆಕ್ಕ ಹಾಕಬೇಕು. ಮೃತರ ಲಿಂಗ, ವಯಸ್ಸು, ಪ್ರದೇಶ ಮೊದಲಾದ ಮಾಹಿತಿಯನ್ನು ವಿಶ್ಲೇಷಣೆಗೆ ಒಳಪಡಿಸಬೇಕು’ ಎಂದು ಸಂಸ್ಥೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>