<p><strong>ಜಮ್ಮು: </strong>ಜಮ್ಮು ಮತ್ತು ಕಾಶ್ಮೀರದ ಗಡಿ ಜಿಲ್ಲೆ ರಾಜೌರಿಯಲ್ಲಿ ಭಾರಿ ಸ್ಪೋಟಕ ವಸ್ತುಗಳನ್ನು ಸಕಾಲದಲ್ಲಿ ಪತ್ತೆ ಹಚ್ಚಿ, ನಿಷ್ಕ್ರಿಯಗೊಳಿಸಿದ್ದರಿಂದ ಸಂಭವಿಸಬಹುದಾಗಿದ್ದ ಬಹು ದೊಡ್ಡ ದುರಂತವೊಂದು ತಪ್ಪಿದಂತಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಜಮ್ಮು–ರಾಜೌರಿ ರಾಷ್ಟ್ರೀಯ ಹೆದ್ದಾರಿ ಬಥೂನಿ–ಡಿಲೊಗ್ರಾಮದ ಸೇತುವೆ ಕೆಳಗಡೆ ಸುಧಾರಿತ ಸ್ಪೋಟಕವನ್ನು ಭದ್ರತಾ ಪಡೆಗಳು ಪತ್ತೆ ಮಾಡಿದ್ದವು. ನಂತರ ಸೇನಾಪಡೆಯ ಬಾಂಬ್ ನಿಷ್ಕ್ರಿಯ ದಳದವರು ಬೆಳಿಗ್ಗೆ 9.10ರ ಸುಮಾರಿಗೆ ಅದನ್ನು ನಿಷ್ಕ್ರಿಯಗೊಳಿಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಪತ್ತೆಯಾದ ಸ್ಫೋಟಕವನ್ನು ರಸ್ತೆಯ ಸಮೀಪವಿರುವ ಅರಣ್ಯ ಪ್ರದೇಶಕ್ಕೆ ತೆಗೆದುಕೊಂಡು ಹೋಗಿ, ಯಾವುದೇ ಹಾನಿಯಾಗದಂತೆ ನಿಷ್ಕ್ರಿಯಗೊಳಿಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸ್ಪೋಟಕ ಪತ್ತೆಯಾದ ನಂತರ, ಆ ರಸ್ತೆಯಲ್ಲಿ ಮೂರು ಗಂಟೆಗಳ ಕಾಲ ಸಂಚಾರ ಸ್ಥಗಿತಗೊಳಿಲಾಯಿತು.</p>.<p>ಭಯೋತ್ಪಾದಕರು, ಮಧ್ಯರಾತ್ರಿ ವೇಳೆ ಸ್ಫೋಟಕಗಳನ್ನು ಸೇತುವೆ ಕೆಳಗೆ ಇರಿಸಿರಬಹುದು. ಸ್ಫೋಟದ ಸಂಚು ರೂಸಿರುವ ಭಯೋತ್ಪಾದಕರನ್ನು ಬಂಧಿಸಲು ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p><a href="https://www.prajavani.net/india-news/air-india-express-flight-emergency-landing-in-thiruvananthapuram-due-to-windshield-crack-853358.html" itemprop="url">ತಿರುವನಂತಪುರ: ಸೌದಿಗೆ ಹೊರಟಿದ್ದ ವಿಮಾನದ ಕಿಟಕಿಯಲ್ಲಿ ಬಿರುಕು, ತುರ್ತು ಭೂಸ್ಪರ್ಶ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಮ್ಮು: </strong>ಜಮ್ಮು ಮತ್ತು ಕಾಶ್ಮೀರದ ಗಡಿ ಜಿಲ್ಲೆ ರಾಜೌರಿಯಲ್ಲಿ ಭಾರಿ ಸ್ಪೋಟಕ ವಸ್ತುಗಳನ್ನು ಸಕಾಲದಲ್ಲಿ ಪತ್ತೆ ಹಚ್ಚಿ, ನಿಷ್ಕ್ರಿಯಗೊಳಿಸಿದ್ದರಿಂದ ಸಂಭವಿಸಬಹುದಾಗಿದ್ದ ಬಹು ದೊಡ್ಡ ದುರಂತವೊಂದು ತಪ್ಪಿದಂತಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಜಮ್ಮು–ರಾಜೌರಿ ರಾಷ್ಟ್ರೀಯ ಹೆದ್ದಾರಿ ಬಥೂನಿ–ಡಿಲೊಗ್ರಾಮದ ಸೇತುವೆ ಕೆಳಗಡೆ ಸುಧಾರಿತ ಸ್ಪೋಟಕವನ್ನು ಭದ್ರತಾ ಪಡೆಗಳು ಪತ್ತೆ ಮಾಡಿದ್ದವು. ನಂತರ ಸೇನಾಪಡೆಯ ಬಾಂಬ್ ನಿಷ್ಕ್ರಿಯ ದಳದವರು ಬೆಳಿಗ್ಗೆ 9.10ರ ಸುಮಾರಿಗೆ ಅದನ್ನು ನಿಷ್ಕ್ರಿಯಗೊಳಿಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಪತ್ತೆಯಾದ ಸ್ಫೋಟಕವನ್ನು ರಸ್ತೆಯ ಸಮೀಪವಿರುವ ಅರಣ್ಯ ಪ್ರದೇಶಕ್ಕೆ ತೆಗೆದುಕೊಂಡು ಹೋಗಿ, ಯಾವುದೇ ಹಾನಿಯಾಗದಂತೆ ನಿಷ್ಕ್ರಿಯಗೊಳಿಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸ್ಪೋಟಕ ಪತ್ತೆಯಾದ ನಂತರ, ಆ ರಸ್ತೆಯಲ್ಲಿ ಮೂರು ಗಂಟೆಗಳ ಕಾಲ ಸಂಚಾರ ಸ್ಥಗಿತಗೊಳಿಲಾಯಿತು.</p>.<p>ಭಯೋತ್ಪಾದಕರು, ಮಧ್ಯರಾತ್ರಿ ವೇಳೆ ಸ್ಫೋಟಕಗಳನ್ನು ಸೇತುವೆ ಕೆಳಗೆ ಇರಿಸಿರಬಹುದು. ಸ್ಫೋಟದ ಸಂಚು ರೂಸಿರುವ ಭಯೋತ್ಪಾದಕರನ್ನು ಬಂಧಿಸಲು ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p><a href="https://www.prajavani.net/india-news/air-india-express-flight-emergency-landing-in-thiruvananthapuram-due-to-windshield-crack-853358.html" itemprop="url">ತಿರುವನಂತಪುರ: ಸೌದಿಗೆ ಹೊರಟಿದ್ದ ವಿಮಾನದ ಕಿಟಕಿಯಲ್ಲಿ ಬಿರುಕು, ತುರ್ತು ಭೂಸ್ಪರ್ಶ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>