ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ–ಬಾರಾಮುಲ್ಲಾ ಹೆದ್ದಾರಿಯಲ್ಲಿ ಭದ್ರತಾ ಪಡೆಗಳು ಸ್ಫೋಟಕ (ಐಇಡಿ) ವಶಪಡಿಸಿಕೊಂಡಿದ್ದು, ಭಾರಿ ದುರಂತವೊಂದನ್ನು ತಪ್ಪಿಸಿದ್ದಾರೆ.
ಸಂಗ್ರಾಮ ಹೆದ್ದಾರಿಯಲ್ಲಿ ಅನುಮಾನಾಸ್ಪದ ವಸ್ತು ಪತ್ತೆಯಾದ ಹಿನ್ನೆಲೆಯಲ್ಲಿ ವಾಹನ ಸಂಚಾರವನ್ನು ಕೆಲಕಾಲ ನಿರ್ಬಂಧಿಸಲಾಗಿತ್ತು.
ಸೇನೆಯ ‘‘5 ರಾಷ್ಟ್ರೀಯ ರೈಫಲ್ಸ್’ ಪಡೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬಾರಾಮುಲ್ಲಾ ಜಿಲ್ಲೆಯ ಸಂಗ್ರಾಮದ ಪುಟ್ಖಾ ಎಂಬಲ್ಲಿ ಸ್ಫೋಟಕವನ್ನು ವಶಪಡಿಸಿಕೊಂಡಿದ್ದಾರೆ. ಅದನ್ನು ನಿಷ್ಕ್ರಿಯಗೊಳಿಸುವ ಪ್ರಯತ್ನಗಳು ನಡೆಯುತ್ತಿವೆ’ ಎಂದು ಪೊಲೀಸರು ತಿಳಿಸಿದ್ದಾರೆ.